‘ಶಾಸಕರು, ಸಂಸದರು ಮತ್ತು ಇತರ ಜನಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳಿಗೆ ಬೃಹತ್ ಮೊತ್ತದ ಹಣ ಮಂಜೂರು ಮಾಡಿಸಿಕೊಂಡು ಬರುತ್ತಿದ್ದು, ರಾಜಕೀಯ ವಿರೋಧಿ ಗುಂಪುಗಳು ಕಾಮಗಾರಿಗೆ ತಡೆಯೊಡ್ಡುತ್ತಿವೆ. ರಾಜ್ಯದಲ್ಲಿ ₹1 ಲಕ್ಷ ಕೋಟಿ ಮೊತ್ತದ ಕಾಮಗಾರಿಗಳು ನಡೆಯುತ್ತಿದ್ದು, ಸ್ಥಳೀಯ ಮಟ್ಟದಲ್ಲಿ ಗುತ್ತಿಗೆದಾರರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ನಾವು ಫೆಬ್ರುವರಿ ಕೊನೆಯಿಂದ ಕೆಲಸವನ್ನು ಸ್ಥಗಿತಗೊಳಿಸುತ್ತೇವೆ’ ಎಂದು ಎಂಎಸ್ಸಿಎ ಮತ್ತು ಎಸ್ಇಎ ಎರಡು ಸಂಸ್ಥೆಗಳ ಅಧ್ಯಕ್ಷರಾದ ಮಿಲಿಂದ್ ಭೋಸ್ಲೆ ಎಚ್ಚರಿಕೆ ನೀಡಿದ್ದಾರೆ.