<p><strong>ಪುಣೆ:</strong> ಕೃಷಿ ಸಾಲ ಮನ್ನಾ ಸೇರಿದಂತೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಿಸಲಾದ ಭರವಸೆಗಳನ್ನು ಈಡೇರಿಸಲು ಮಹಾರಾಷ್ಟ್ರ ಮಹಾಯುತಿ ಸರ್ಕಾರ ಬದ್ಧ ಎಂದು ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಶನಿವಾರ ಹೇಳಿದ್ದಾರೆ.</p><p>ಕೃಷಿ ಸಾಲಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಹೇಳಿಕೆ ನೀಡಿ, ‘ರೈತರು ಸಾಲ ಮನ್ನಾಕ್ಕಾಗಿ ಕಾಯುವ ಬದಲು ಸಕಾಲದಲ್ಲಿ ಸಾಲ ಮರುಪಾವತಿಗೆ ಮುಂದಾಗಬೇಕು’ ಎಂದಿದ್ದರು. ಇದರ ಬೆನ್ನಲ್ಲೇ ಶಿಂದೆ ಈ ಹೇಳಿಕೆ ನೀಡಿದ್ದಾರೆ.</p><p>‘ಕಲ್ಯಾಣ ಕಾರ್ಯಕ್ರಮಗಳಿಗೆ, ಅಭಿವೃದ್ಧಿ ಮತ್ತು ನೌಕರರ ಸಂಬಳಕ್ಕೆ ಅಗತ್ಯವಿರುವಷ್ಟು ಹಣವನ್ನು ರಾಜ್ಯದ ಬೊಕ್ಕಸದಲ್ಲಿರುವಂತೆ ನೋಡಿಕೊಳ್ಳಬೇಕು. ಜತೆಗೆ ರಾಜ್ಯದ ಆರ್ಥಿಕತೆಯಲ್ಲಿ ಸಮತೋಲನ ಇರುವಂತೆ ನೋಡಿಕೊಳ್ಳಬೇಕು’ ಎಂದಿದ್ದಾರೆ.</p><p>ಮಹಿಳೆಯರಿಗೆ ಮಾಸಿಕ ನೀಡುವ ‘ಲಡ್ಕಿ ಬಹಿನ್ ಯೋಜನಾ’ಗಾಗಿ ನೀಡಲಾಗುತ್ತಿದ್ದ ನೆರವನ್ನು ₹1,500ರಿಂದ ₹2 ಸಾವಿರಕ್ಕೆ ಹೆಚ್ಚಿಸಲಾಗುವುದು. ಚುನಾವಣೆ ಸಂದರ್ಭದಲ್ಲಿ ಮಾಡಿದ ಪ್ರತಿಯೊಂದು ವಾಗ್ದಾನಗಳನ್ನೂ ಈಡೇರಿಸಲಾಗುವುದು. ಪ್ರಣಾಳಿಕೆಯಲ್ಲಿ ಹೇಳಿರುವುದು ಎಲ್ಲವೂ ಸತ್ಯವೇ ಹೊರತು, ಯಾವುದೂ ಮುದ್ರಣ ದೋಷವಲ್ಲ’ ಎಂದಿದ್ದಾರೆ.</p><p>‘ರೈತರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಅಕಾಲಿಕ ಮಳೆಯಿಂದ ಉಂಟಾದ ಬೆಳೆ ನಷ್ಟ ಪರಿಹಾರವಾಗಿ ₹16 ಸಾವಿರ ಕೋಟಿ ನೀಡಲಾಗಿದೆ. ಕೃಷಿ ವ್ಯವಹಾರಗಳಿಗೆ ಮತ್ತು ಬೆಳೆ ವಿಮೆ ಯೋಜನೆಗಾಗಿ ₹45 ಸಾವಿರ ಕೋಟಿ ಮೀಸಲಿಡಲಾಗಿದೆ. ನಮ್ಮ ಸರ್ಕಾರದ ಆರ್ಥಿಕ ಪರಿಸ್ಥಿತಿ ಸುಧಾರಿಸಿದಲ್ಲಿ ಸೋದರಿಯರಿಗೆ ನೀಡುವ ನೆರವನ್ನು ₹2,100ಕ್ಕೆ ಹೆಚ್ಚಿಸಲಾಗುವುದು’ ಎಂದು ಶಿಂದೆ ಭರವಸೆ ನೀಡಿದ್ದಾರೆ.</p><p>ಪ್ರಧಾನಿ ನರೇಂದ್ರ ಮೋದಿ ಅವರು ಮುಸಲ್ಮಾನರಿಗೆ ನೀಡುವುದಾಗಿ ಘೋಷಿಸಿರುವ ‘ಸೌಗತ್ ಎ ಮೋದಿ’ ಯೋಜನೆಯ ಕಿಟ್ಗಳ ಕುರಿತ ಪ್ರಶ್ನೆಗೆ ಉತ್ತರಿಸಿರುವ ಶಿಂದೆ, ‘ದೇಶದಲ್ಲಿರುವ 80 ಕೋಟಿ ಜನರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸುತ್ತಿರುವ ಕೇಂದ್ರ ಸರ್ಕಾರವು, 35 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆ ತಂದಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಕೃಷಿ ಸಾಲ ಮನ್ನಾ ಸೇರಿದಂತೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಿಸಲಾದ ಭರವಸೆಗಳನ್ನು ಈಡೇರಿಸಲು ಮಹಾರಾಷ್ಟ್ರ ಮಹಾಯುತಿ ಸರ್ಕಾರ ಬದ್ಧ ಎಂದು ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಶನಿವಾರ ಹೇಳಿದ್ದಾರೆ.</p><p>ಕೃಷಿ ಸಾಲಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಹೇಳಿಕೆ ನೀಡಿ, ‘ರೈತರು ಸಾಲ ಮನ್ನಾಕ್ಕಾಗಿ ಕಾಯುವ ಬದಲು ಸಕಾಲದಲ್ಲಿ ಸಾಲ ಮರುಪಾವತಿಗೆ ಮುಂದಾಗಬೇಕು’ ಎಂದಿದ್ದರು. ಇದರ ಬೆನ್ನಲ್ಲೇ ಶಿಂದೆ ಈ ಹೇಳಿಕೆ ನೀಡಿದ್ದಾರೆ.</p><p>‘ಕಲ್ಯಾಣ ಕಾರ್ಯಕ್ರಮಗಳಿಗೆ, ಅಭಿವೃದ್ಧಿ ಮತ್ತು ನೌಕರರ ಸಂಬಳಕ್ಕೆ ಅಗತ್ಯವಿರುವಷ್ಟು ಹಣವನ್ನು ರಾಜ್ಯದ ಬೊಕ್ಕಸದಲ್ಲಿರುವಂತೆ ನೋಡಿಕೊಳ್ಳಬೇಕು. ಜತೆಗೆ ರಾಜ್ಯದ ಆರ್ಥಿಕತೆಯಲ್ಲಿ ಸಮತೋಲನ ಇರುವಂತೆ ನೋಡಿಕೊಳ್ಳಬೇಕು’ ಎಂದಿದ್ದಾರೆ.</p><p>ಮಹಿಳೆಯರಿಗೆ ಮಾಸಿಕ ನೀಡುವ ‘ಲಡ್ಕಿ ಬಹಿನ್ ಯೋಜನಾ’ಗಾಗಿ ನೀಡಲಾಗುತ್ತಿದ್ದ ನೆರವನ್ನು ₹1,500ರಿಂದ ₹2 ಸಾವಿರಕ್ಕೆ ಹೆಚ್ಚಿಸಲಾಗುವುದು. ಚುನಾವಣೆ ಸಂದರ್ಭದಲ್ಲಿ ಮಾಡಿದ ಪ್ರತಿಯೊಂದು ವಾಗ್ದಾನಗಳನ್ನೂ ಈಡೇರಿಸಲಾಗುವುದು. ಪ್ರಣಾಳಿಕೆಯಲ್ಲಿ ಹೇಳಿರುವುದು ಎಲ್ಲವೂ ಸತ್ಯವೇ ಹೊರತು, ಯಾವುದೂ ಮುದ್ರಣ ದೋಷವಲ್ಲ’ ಎಂದಿದ್ದಾರೆ.</p><p>‘ರೈತರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಅಕಾಲಿಕ ಮಳೆಯಿಂದ ಉಂಟಾದ ಬೆಳೆ ನಷ್ಟ ಪರಿಹಾರವಾಗಿ ₹16 ಸಾವಿರ ಕೋಟಿ ನೀಡಲಾಗಿದೆ. ಕೃಷಿ ವ್ಯವಹಾರಗಳಿಗೆ ಮತ್ತು ಬೆಳೆ ವಿಮೆ ಯೋಜನೆಗಾಗಿ ₹45 ಸಾವಿರ ಕೋಟಿ ಮೀಸಲಿಡಲಾಗಿದೆ. ನಮ್ಮ ಸರ್ಕಾರದ ಆರ್ಥಿಕ ಪರಿಸ್ಥಿತಿ ಸುಧಾರಿಸಿದಲ್ಲಿ ಸೋದರಿಯರಿಗೆ ನೀಡುವ ನೆರವನ್ನು ₹2,100ಕ್ಕೆ ಹೆಚ್ಚಿಸಲಾಗುವುದು’ ಎಂದು ಶಿಂದೆ ಭರವಸೆ ನೀಡಿದ್ದಾರೆ.</p><p>ಪ್ರಧಾನಿ ನರೇಂದ್ರ ಮೋದಿ ಅವರು ಮುಸಲ್ಮಾನರಿಗೆ ನೀಡುವುದಾಗಿ ಘೋಷಿಸಿರುವ ‘ಸೌಗತ್ ಎ ಮೋದಿ’ ಯೋಜನೆಯ ಕಿಟ್ಗಳ ಕುರಿತ ಪ್ರಶ್ನೆಗೆ ಉತ್ತರಿಸಿರುವ ಶಿಂದೆ, ‘ದೇಶದಲ್ಲಿರುವ 80 ಕೋಟಿ ಜನರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸುತ್ತಿರುವ ಕೇಂದ್ರ ಸರ್ಕಾರವು, 35 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆ ತಂದಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>