<p><strong>ಮುಂಬೈ</strong>: ಭಾರಿ ಮಳೆಯಿಂದಾಗಿ ಬೆಳೆ ಹಾನಿಯಾಗಿರುವ 34 ಜಿಲ್ಲೆಗಳ ರೈತರ ಬೆನ್ನಿಗೆ ಮಹಾರಾಷ್ಟ್ರ ಸರ್ಕಾರ ನಿಂತಿದೆ. ಸಹಕಾರಿ ಬ್ಯಾಂಕ್ಗಳಲ್ಲಿನ ಸಾಲವನ್ನು ತರ್ಕಬದ್ಧಗೊಳಿಸುವುದು ಹಾಗೂ ಒಂದು ವರ್ಷದ ಮಟ್ಟಿಗೆ ಸಾಲ ವಸೂಲಾತಿಯನ್ನು ಅಮಾನತುಗೊಳಿಸುವುದಾಗಿ ಘೋಷಿಸಿದೆ.</p><p>ರಾಜ್ಯದ 347 ತಾಲ್ಲೂಕುಗಳಲ್ಲಿ ಬೆಳೆ, ಕೃಷಿ ಭೂಮಿ ಹಾಗೂ ಮನೆಗಳಿಗೆ ಭಾರಿ ಹಾನಿಯಾಗಿದೆ. ಸಾವು–ನೋವು ಸಂಭವಿಸಿದೆ ಎಂದು ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.</p><p>ಸರ್ಕಾರದ ಮಾಹಿತಿ ಪ್ರಕಾರ, ಜೂನ್ – ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ 65 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸೆಪ್ಟೆಂಬರ್ನಲ್ಲಿ ಸುರಿದ ಭಾರಿ ಮಳೆ, ಪ್ರವಾಹದಿಂದಾಗಿ ಮರಾಠವಾಡ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಅಪಾರ ಪರಿಣಾಮಗಳುಂಟಾಗಿವೆ.</p><p>ಮಳೆ ಹಾಗೂ ಪ್ರವಾಹದಿಂದಾಗಿ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರವು ಈ ವಾರದ ಆರಂಭದಲ್ಲಿ ₹ 31,628 ಕೋಟಿ ಪರಿಹಾರ ಘೋಷಿಸಿತ್ತು.</p>.ಮಹಾರಾಷ್ಟ್ರ: ಮಳೆ ಅನಾಹುತಕ್ಕೆ 12 ಮಂದಿ ಸಾವು; ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ.ಮಹಾರಾಷ್ಟ್ರ ಮಳೆ ಪರಿಣಾಮ: ಕೃಷ್ಣಾ ನದಿ ನೀರಿನ ಹರಿವು 1.81 ಲಕ್ಷ ಕ್ಯೂಸೆಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಭಾರಿ ಮಳೆಯಿಂದಾಗಿ ಬೆಳೆ ಹಾನಿಯಾಗಿರುವ 34 ಜಿಲ್ಲೆಗಳ ರೈತರ ಬೆನ್ನಿಗೆ ಮಹಾರಾಷ್ಟ್ರ ಸರ್ಕಾರ ನಿಂತಿದೆ. ಸಹಕಾರಿ ಬ್ಯಾಂಕ್ಗಳಲ್ಲಿನ ಸಾಲವನ್ನು ತರ್ಕಬದ್ಧಗೊಳಿಸುವುದು ಹಾಗೂ ಒಂದು ವರ್ಷದ ಮಟ್ಟಿಗೆ ಸಾಲ ವಸೂಲಾತಿಯನ್ನು ಅಮಾನತುಗೊಳಿಸುವುದಾಗಿ ಘೋಷಿಸಿದೆ.</p><p>ರಾಜ್ಯದ 347 ತಾಲ್ಲೂಕುಗಳಲ್ಲಿ ಬೆಳೆ, ಕೃಷಿ ಭೂಮಿ ಹಾಗೂ ಮನೆಗಳಿಗೆ ಭಾರಿ ಹಾನಿಯಾಗಿದೆ. ಸಾವು–ನೋವು ಸಂಭವಿಸಿದೆ ಎಂದು ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.</p><p>ಸರ್ಕಾರದ ಮಾಹಿತಿ ಪ್ರಕಾರ, ಜೂನ್ – ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ 65 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸೆಪ್ಟೆಂಬರ್ನಲ್ಲಿ ಸುರಿದ ಭಾರಿ ಮಳೆ, ಪ್ರವಾಹದಿಂದಾಗಿ ಮರಾಠವಾಡ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಅಪಾರ ಪರಿಣಾಮಗಳುಂಟಾಗಿವೆ.</p><p>ಮಳೆ ಹಾಗೂ ಪ್ರವಾಹದಿಂದಾಗಿ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರವು ಈ ವಾರದ ಆರಂಭದಲ್ಲಿ ₹ 31,628 ಕೋಟಿ ಪರಿಹಾರ ಘೋಷಿಸಿತ್ತು.</p>.ಮಹಾರಾಷ್ಟ್ರ: ಮಳೆ ಅನಾಹುತಕ್ಕೆ 12 ಮಂದಿ ಸಾವು; ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ.ಮಹಾರಾಷ್ಟ್ರ ಮಳೆ ಪರಿಣಾಮ: ಕೃಷ್ಣಾ ನದಿ ನೀರಿನ ಹರಿವು 1.81 ಲಕ್ಷ ಕ್ಯೂಸೆಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>