<p><strong>ಮುಂಬೈ</strong>: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್(ಕೆಆರ್ಸಿಎಲ್) ಅನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ನೀಡಲಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಬುಧವಾರ ವಿಧಾನ ಪರಿಷತ್ತಿನಲ್ಲಿ ಘೋಷಿಸಿದ್ದಾರೆ.</p><p> ಈ ಕ್ರಮವು ಕೆಆರ್ಸಿಎಲ್ ತನ್ನ ಆರ್ಥಿಕ ನಿರ್ಬಂಧಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಮತ್ತು ಕೊಂಕಣ ರೈಲ್ವೆ ಎಂಬ ಹೆಸರನ್ನು ಉಳಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.</p><p>ಪ್ರಸ್ತುತ, ಕೆಆರ್ಸಿಎಲ್ ಭಾರತೀಯ ರೈಲ್ವೆಯ ಆಡಳಿತ ನಿಯಂತ್ರಣದಲ್ಲಿರುವ ಸಾರ್ವಜನಿಕ ವಲಯದ ಸಂಸ್ಥೆಯಾಗಿದೆ. </p><p>‘ಮಹಾರಾಷ್ಟ್ರವು ವಿಲೀನಕ್ಕೆ ತನ್ನ ಒಪ್ಪಿಗೆಯನ್ನು ಕೇಂದ್ರಕ್ಕೆ ತಿಳಿಸುತ್ತದೆ’ಎಂದು ರಾಜ್ಯ ಶಾಸಕಾಂಗದ ಮೇಲ್ಮನೆಯಲ್ಲಿ ಬಿಜೆಪಿಯ ಪ್ರವೀಣ್ ದಾರೇಕರ್ ಅವರ ಪ್ರಶ್ನೆಗೆ ಉತ್ತರಿಸುತ್ತಾ ಫಡಣವೀಸ್ ಈ ರೀತಿ ಹೇಳಿದ್ದಾರೆ. </p><p>‘ರೈಲ್ವೆ ಹಳಿಗಳನ್ನು ದ್ವಿಗುಣಗೊಳಿಸುವುದಾಗಲಿ ಅಥವಾ ಭೂಕುಸಿತ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವುದಾಗಲಿ, ನಿಧಿಯ ಕೊರತೆಯಿಂದಾಗಿ ನಿಗಮವು ಅವುಗಳನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p><p>ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಹಲವು ಚರ್ಚೆಗಳು ನಡೆದಿದ್ದು, ರೈಲ್ವೆ ಸಚಿವರು ಪರಿಹಾರವಾಗಿ ವಿಲೀನವನ್ನು ಪ್ರಸ್ತಾಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>‘ಕೇರಳ, ಕರ್ನಾಟಕ ಮತ್ತು ಗೋವಾ ಈಗಾಗಲೇ ಅನುಮೋದನೆ ನೀಡಿವೆ. ನಮ್ಮ ಒಪ್ಪಿಗೆಯನ್ನು ಸೂಚಿಸುವಾಗ, ಕೊಂಕಣ ರೈಲ್ವೆ ಎಂಬ ಹೆಸರನ್ನು ಉಳಿಸಿಕೊಳ್ಳಲು ನಾವು ಕೇಂದ್ರ ಸರ್ಕಾರಕ್ಕೆ ವಿನಂತಿಸಿದ್ದೇವೆ’ಎಂದು ಫಢಣವೀಸ್ ಹೇಳಿದ್ದಾರೆ.</p><p>ವಿಲೀನದ ನಂತರ, ಕೊಂಕಣ ರೈಲ್ವೆ ಹಳಿಗಳ ದ್ವಿಗುಣಗೊಳಿಸುವಿಕೆ, ನಿಲ್ದಾಣಗಳ ಆಧುನೀಕರಣ ಮತ್ತು ಅಪಘಾತ-ತಡೆಗಟ್ಟುವ ಕ್ರಮಗಳ ಅನುಷ್ಠಾನಕ್ಕೆ ಹೆಚ್ಚಿನ ಅನುದಾನ ಪಡೆಯಲಿದೆ ಎಂದು ಅವರು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್(ಕೆಆರ್ಸಿಎಲ್) ಅನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ನೀಡಲಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಬುಧವಾರ ವಿಧಾನ ಪರಿಷತ್ತಿನಲ್ಲಿ ಘೋಷಿಸಿದ್ದಾರೆ.</p><p> ಈ ಕ್ರಮವು ಕೆಆರ್ಸಿಎಲ್ ತನ್ನ ಆರ್ಥಿಕ ನಿರ್ಬಂಧಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಮತ್ತು ಕೊಂಕಣ ರೈಲ್ವೆ ಎಂಬ ಹೆಸರನ್ನು ಉಳಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.</p><p>ಪ್ರಸ್ತುತ, ಕೆಆರ್ಸಿಎಲ್ ಭಾರತೀಯ ರೈಲ್ವೆಯ ಆಡಳಿತ ನಿಯಂತ್ರಣದಲ್ಲಿರುವ ಸಾರ್ವಜನಿಕ ವಲಯದ ಸಂಸ್ಥೆಯಾಗಿದೆ. </p><p>‘ಮಹಾರಾಷ್ಟ್ರವು ವಿಲೀನಕ್ಕೆ ತನ್ನ ಒಪ್ಪಿಗೆಯನ್ನು ಕೇಂದ್ರಕ್ಕೆ ತಿಳಿಸುತ್ತದೆ’ಎಂದು ರಾಜ್ಯ ಶಾಸಕಾಂಗದ ಮೇಲ್ಮನೆಯಲ್ಲಿ ಬಿಜೆಪಿಯ ಪ್ರವೀಣ್ ದಾರೇಕರ್ ಅವರ ಪ್ರಶ್ನೆಗೆ ಉತ್ತರಿಸುತ್ತಾ ಫಡಣವೀಸ್ ಈ ರೀತಿ ಹೇಳಿದ್ದಾರೆ. </p><p>‘ರೈಲ್ವೆ ಹಳಿಗಳನ್ನು ದ್ವಿಗುಣಗೊಳಿಸುವುದಾಗಲಿ ಅಥವಾ ಭೂಕುಸಿತ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವುದಾಗಲಿ, ನಿಧಿಯ ಕೊರತೆಯಿಂದಾಗಿ ನಿಗಮವು ಅವುಗಳನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p><p>ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಹಲವು ಚರ್ಚೆಗಳು ನಡೆದಿದ್ದು, ರೈಲ್ವೆ ಸಚಿವರು ಪರಿಹಾರವಾಗಿ ವಿಲೀನವನ್ನು ಪ್ರಸ್ತಾಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>‘ಕೇರಳ, ಕರ್ನಾಟಕ ಮತ್ತು ಗೋವಾ ಈಗಾಗಲೇ ಅನುಮೋದನೆ ನೀಡಿವೆ. ನಮ್ಮ ಒಪ್ಪಿಗೆಯನ್ನು ಸೂಚಿಸುವಾಗ, ಕೊಂಕಣ ರೈಲ್ವೆ ಎಂಬ ಹೆಸರನ್ನು ಉಳಿಸಿಕೊಳ್ಳಲು ನಾವು ಕೇಂದ್ರ ಸರ್ಕಾರಕ್ಕೆ ವಿನಂತಿಸಿದ್ದೇವೆ’ಎಂದು ಫಢಣವೀಸ್ ಹೇಳಿದ್ದಾರೆ.</p><p>ವಿಲೀನದ ನಂತರ, ಕೊಂಕಣ ರೈಲ್ವೆ ಹಳಿಗಳ ದ್ವಿಗುಣಗೊಳಿಸುವಿಕೆ, ನಿಲ್ದಾಣಗಳ ಆಧುನೀಕರಣ ಮತ್ತು ಅಪಘಾತ-ತಡೆಗಟ್ಟುವ ಕ್ರಮಗಳ ಅನುಷ್ಠಾನಕ್ಕೆ ಹೆಚ್ಚಿನ ಅನುದಾನ ಪಡೆಯಲಿದೆ ಎಂದು ಅವರು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>