<p><strong>ಮುಂಬೈ:</strong> ಬರ್ತ್ಡೇ ಪಾರ್ಟಿಯಲ್ಲಿ ಸಾಕಷ್ಟು ಮದ್ಯವನ್ನು ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತನನ್ನು ಕಟ್ಟಡದ ನಾಲ್ಕನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್ನಗರದಲ್ಲಿ ನಡೆದಿದೆ.</p><p>ಮೃತ ಯುವಕನನ್ನು 24 ವರ್ಷದ ಕಾರ್ತಿಕ್ ವಯಲ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ವಿಠ್ಠಲವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p><p>ಬಂಧಿತ ಆರೋಪಿಗಳನ್ನು ಧೀರಜ್ ಯಾದವ್ (23) ಮತ್ತು ನೀಲೇಶ್ ಕ್ಷೀರಸಾಗರ್ (23), ಸಾಗರ್ ಕಾಳೆ (24) ಎಂದು ಗುರುತಿಸಲಾಗಿದೆ.</p><p>ಜುಲೈ 1ರಂದು ಕಾರ್ತಿಕ್ ತನ್ನ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಮೂವರು ಸ್ನೇಹಿತರನ್ನು ಆಹ್ವಾನಿಸಿದ್ದ. ಆದರೆ, ಪಾರ್ಟಿಯಲ್ಲಿ ಕುಡಿಯುವಷ್ಟು ಮದ್ಯವನ್ನು ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತರ ಮಧ್ಯೆ ವಾಗ್ವಾದ ನಡೆದಿತ್ತು.</p><p>ಗಲಾಟೆ ವೇಳೆ ಕಾರ್ತಿಕ್ ನೀಲೇಶ್ಗೆ ಬಾಟಲಿಯಿಂದ ಹೊಡೆದಿದ್ದ. ಇದರಿಂದಾಗಿ ಧೀರಜ್, ನೀಲೇಶ್ ಮತ್ತು ಸಾಗರ್ ಕೋಪಗೊಂಡಿದ್ದರು. ಕೂಡಲೇ ಎಲ್ಲರೂ ಸೇರಿಕೊಂಡು ಕಾರ್ತಿಕ್ನನ್ನು ಬಾಲ್ಕನಿಯಿಂದ ಕೆಳಗೆ ತಳ್ಳಿದ್ದರು. ಇದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಬಿಹಾರ | ಮದುವೆಯಾಗಲು ನಿರಾಕರಿಸಿದ್ದಕ್ಕೆ ಪುರುಷನ ಮರ್ಮಾಂಗ ಕತ್ತರಿಸಿದ ಮಹಿಳೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಬರ್ತ್ಡೇ ಪಾರ್ಟಿಯಲ್ಲಿ ಸಾಕಷ್ಟು ಮದ್ಯವನ್ನು ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತನನ್ನು ಕಟ್ಟಡದ ನಾಲ್ಕನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್ನಗರದಲ್ಲಿ ನಡೆದಿದೆ.</p><p>ಮೃತ ಯುವಕನನ್ನು 24 ವರ್ಷದ ಕಾರ್ತಿಕ್ ವಯಲ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ವಿಠ್ಠಲವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p><p>ಬಂಧಿತ ಆರೋಪಿಗಳನ್ನು ಧೀರಜ್ ಯಾದವ್ (23) ಮತ್ತು ನೀಲೇಶ್ ಕ್ಷೀರಸಾಗರ್ (23), ಸಾಗರ್ ಕಾಳೆ (24) ಎಂದು ಗುರುತಿಸಲಾಗಿದೆ.</p><p>ಜುಲೈ 1ರಂದು ಕಾರ್ತಿಕ್ ತನ್ನ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಮೂವರು ಸ್ನೇಹಿತರನ್ನು ಆಹ್ವಾನಿಸಿದ್ದ. ಆದರೆ, ಪಾರ್ಟಿಯಲ್ಲಿ ಕುಡಿಯುವಷ್ಟು ಮದ್ಯವನ್ನು ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತರ ಮಧ್ಯೆ ವಾಗ್ವಾದ ನಡೆದಿತ್ತು.</p><p>ಗಲಾಟೆ ವೇಳೆ ಕಾರ್ತಿಕ್ ನೀಲೇಶ್ಗೆ ಬಾಟಲಿಯಿಂದ ಹೊಡೆದಿದ್ದ. ಇದರಿಂದಾಗಿ ಧೀರಜ್, ನೀಲೇಶ್ ಮತ್ತು ಸಾಗರ್ ಕೋಪಗೊಂಡಿದ್ದರು. ಕೂಡಲೇ ಎಲ್ಲರೂ ಸೇರಿಕೊಂಡು ಕಾರ್ತಿಕ್ನನ್ನು ಬಾಲ್ಕನಿಯಿಂದ ಕೆಳಗೆ ತಳ್ಳಿದ್ದರು. ಇದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಬಿಹಾರ | ಮದುವೆಯಾಗಲು ನಿರಾಕರಿಸಿದ್ದಕ್ಕೆ ಪುರುಷನ ಮರ್ಮಾಂಗ ಕತ್ತರಿಸಿದ ಮಹಿಳೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>