ಮುಂಬೈ: ಸುಲಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ಮಹಾರಾಷ್ಟ್ರ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.
ನವೆಂಬರ್ 12 ರಂದು ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮುಖ್ಯಮಂತ್ರಿ ಉದ್ದತ್ ಠಾಕ್ರೆ ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾದರು. ಇದೇ ದಿನ ಅಮಾನತು ಆದೇಶವನ್ನು ಅನುಮೋದಿಸಿದ್ದಾರೆ.
ಮಹಾರಾಷ್ಟ್ರದ ಗೃಹ ರಕ್ಷಣಾ ದಳದ ಮುಖ್ಯಸ್ಥರಾಗಿ ನೇಮಕವಾದ ಬಳಿಕ ಪರಮ್ ಬೀರ್ ಸಿಂಗ್, ಕಳೆದ ಆರು ತಿಂಗಳಿನಿಂದ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಕರ್ತವ್ಯಕ್ಕೆ ಗೈರಾಗಿರುವುದನ್ನು ಪರಿಗಣಿಸಿ ಶಿಸ್ತು ಕ್ರಮಕ್ಕೂ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.