<p><strong>ಮುಂಬೈ:</strong> ಪತ್ರಿಕೆ, ಟಿ.ವಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳನ್ನು ಪರಿಶೀಲಿಸಲು ‘ಮಾಧ್ಯಮ ನಿಯಂತ್ರಣ ಕೇಂದ್ರ’ವನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ₹10 ಕೋಟಿ ಮೀಸಲಿಟ್ಟಿದೆ.</p>.ಮಹಾರಾಷ್ಟ್ರ | ಗಣಿಯಲ್ಲಿ ಅವಘಡ: ಇಬ್ಬರು ಕಾರ್ಮಿಕರ ಸಾವು .<p>ಈ ಕೇಂದ್ರವು ಮುದ್ರಣ ಮತ್ತು ಪ್ರಸಾರ ಮಾಧ್ಯಮಗಳಲ್ಲಿನ ಎಲ್ಲಾ ವಾಸ್ತವಿಕ ಮತ್ತು ದಾರಿತಪ್ಪಿಸುವ ಸುದ್ದಿ ವರದಿಗಳನ್ನು ಸಂಗ್ರಹಿಸಿ ವಿಶ್ಲೇಷಿಸುತ್ತದೆ. ಬಳಿಕ ವಾಸ್ತವಿಕ ವರದಿಯನ್ನು ಸಿದ್ಧಪಡಿಸಲಿದೆ ಎಂದು ಸರ್ಕಾರ ತಿಳಿಸಿದೆ.</p><p>ದಾರಿತಪ್ಪಿಸುವ ಸುದ್ದಿ ಇದ್ದರೆ, ಅದನ್ನು ನೈಜ ಸಮಯದಲ್ಲಿ ಸ್ಪಷ್ಟಪಡಿಸಲಾಗುತ್ತದೆ. ನಕಾರಾತ್ಮಕ ಸುದ್ದಿ ಇದ್ದರೆ, ಸ್ಪಷ್ಟೀಕರಣವನ್ನು ತ್ವರಿತವಾಗಿ ನೀಡಲಾಗುವುದು ಎಂದು ಅದು ಹೇಳಿದೆ.</p><p>ಪ್ರತಿದಿನ ಬೆಳಿಗ್ಗೆ 8 ರಿಂದ ರಾತ್ರಿ 10 ರವರೆಗೆ ಈ ಕೇಂದ್ರವು ಕಾರ್ಯ ನಿರ್ವಹಿಸಲಿದೆ. ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಮತ್ತು ಆರ್ಥಿಕ ಅನುಮೋದನೆ ನೀಡಿದೆ.</p> .ಮಹಾರಾಷ್ಟ್ರ ಸರ್ಕಾರದ 500ಕ್ಕೂ ಹೆಚ್ಚು ಸೇವೆಗಳು ವ್ಯಾಟ್ಸ್ಆ್ಯಪ್ನಲ್ಲಿ ಲಭ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಪತ್ರಿಕೆ, ಟಿ.ವಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳನ್ನು ಪರಿಶೀಲಿಸಲು ‘ಮಾಧ್ಯಮ ನಿಯಂತ್ರಣ ಕೇಂದ್ರ’ವನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ₹10 ಕೋಟಿ ಮೀಸಲಿಟ್ಟಿದೆ.</p>.ಮಹಾರಾಷ್ಟ್ರ | ಗಣಿಯಲ್ಲಿ ಅವಘಡ: ಇಬ್ಬರು ಕಾರ್ಮಿಕರ ಸಾವು .<p>ಈ ಕೇಂದ್ರವು ಮುದ್ರಣ ಮತ್ತು ಪ್ರಸಾರ ಮಾಧ್ಯಮಗಳಲ್ಲಿನ ಎಲ್ಲಾ ವಾಸ್ತವಿಕ ಮತ್ತು ದಾರಿತಪ್ಪಿಸುವ ಸುದ್ದಿ ವರದಿಗಳನ್ನು ಸಂಗ್ರಹಿಸಿ ವಿಶ್ಲೇಷಿಸುತ್ತದೆ. ಬಳಿಕ ವಾಸ್ತವಿಕ ವರದಿಯನ್ನು ಸಿದ್ಧಪಡಿಸಲಿದೆ ಎಂದು ಸರ್ಕಾರ ತಿಳಿಸಿದೆ.</p><p>ದಾರಿತಪ್ಪಿಸುವ ಸುದ್ದಿ ಇದ್ದರೆ, ಅದನ್ನು ನೈಜ ಸಮಯದಲ್ಲಿ ಸ್ಪಷ್ಟಪಡಿಸಲಾಗುತ್ತದೆ. ನಕಾರಾತ್ಮಕ ಸುದ್ದಿ ಇದ್ದರೆ, ಸ್ಪಷ್ಟೀಕರಣವನ್ನು ತ್ವರಿತವಾಗಿ ನೀಡಲಾಗುವುದು ಎಂದು ಅದು ಹೇಳಿದೆ.</p><p>ಪ್ರತಿದಿನ ಬೆಳಿಗ್ಗೆ 8 ರಿಂದ ರಾತ್ರಿ 10 ರವರೆಗೆ ಈ ಕೇಂದ್ರವು ಕಾರ್ಯ ನಿರ್ವಹಿಸಲಿದೆ. ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಮತ್ತು ಆರ್ಥಿಕ ಅನುಮೋದನೆ ನೀಡಿದೆ.</p> .ಮಹಾರಾಷ್ಟ್ರ ಸರ್ಕಾರದ 500ಕ್ಕೂ ಹೆಚ್ಚು ಸೇವೆಗಳು ವ್ಯಾಟ್ಸ್ಆ್ಯಪ್ನಲ್ಲಿ ಲಭ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>