<figcaption>""</figcaption>.<p><strong>ಮುಂಬೈ:</strong> ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಬುಧವಾರ ರಾಜ್ಯದ ಪ್ರಕರಣಗಳ ತನಿಖೆಗಾಗಿ ಸಿಬಿಐಗೆ ನೀಡಿದ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಂಡಿದೆ.</p>.<p>ಈ ನಿರ್ಧಾರದಿಂದಾಗಿ ಇನ್ನು ಮುಂದೆ ಯಾವುದೇ ಪ್ರಕರಣದ ತನಿಖೆಗಾಗಿ ಸಿಬಿಐ ಮಹಾರಾಷ್ಟ್ರವನ್ನು ಪ್ರವೇಶಿಸಿಸುವುದಕ್ಕೂ ಮೊದಲು ರಾಜ್ಯ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಲಿದೆ. ಬುಧವಾರ ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ಭವಿಷ್ಯದ ಪ್ರಕರಣಗಳಿಗೆ ಈ ನಿರ್ಧಾರ ಅನ್ವಯವಾಗಲಿದೆಯಾದರೂ, ಈಗಾಗಲೇ ಸಿಬಿಐ ಕೈಗೊಂಡಿರುವ ಪ್ರಕರಣಗಳಿಗೆ ಈ ನಿರ್ಧಾರದಿಂದ ಯಾವುದೇ ಪರಿಣಾಮವಾಗದು.</p>.<figcaption>ಮಹಾರಾಷ್ಟ್ರ ಸರ್ಕಾರದ ಆದೇಶ</figcaption>.<p>‘1946ರ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ’ ಕಾಯ್ದೆ ಅಡಿಯಲ್ಲಿ, ಗೃಹ ಇಲಾಖೆ ಅಧೀನ ಕಾರ್ಯದರ್ಶಿ ಕೈಲಾಸ್ ಗಾಯಕ್ವಾಡ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ‘1989ರ ಫೆಬ್ರವರಿಯಲ್ಲಿ ಸಿಬಿಐಗೆ ರಾಜ್ಯ ಸರ್ಕಾರ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ರಾಜ್ಯದ ಯಾವುದೇ ಪ್ರಕರಣದ ತನಿಖೆ ಆರಂಭಿಸುವ ಮೊದಲು ಸರ್ಕಾರದ ಒಪ್ಪಿಗೆ ಪಡೆಯುವುದು ಅಗತ್ಯವಾಗಲಿದೆ,’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಟಿಆರ್ಪಿ ಅಕ್ರಮ ಪ್ರಕರಣದ ಸಂಬಂಧ ಉತ್ತರ ಪ್ರದೇಶದ ಲಖನೌನ ಹಝರತ್ಗಂಜ್ ಪೊಲೀಸ್ ಠಾಣೆಯಲ್ಲಿ ಜಾಹೀರಾತು ಏಜೆನ್ಸಿಯೊಂದು ದಾಖಲಿಸಿದ ದೂರನ್ನು ಅಲ್ಲಿನ ಪೊಲೀಸರು ಸಿಬಿಐಗೆ ಶಿಫಾರಸು ಮಾಡಿದ್ದಾರೆ. ಹೀಗಾಗಿ, ಸಿಬಿಐ ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಸಿಬಿಐ ಅನ್ನು ನಿರ್ಬಂಧಿಸುವ ನಿರ್ಧಾರ ಕೈಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಮುಂಬೈ:</strong> ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಬುಧವಾರ ರಾಜ್ಯದ ಪ್ರಕರಣಗಳ ತನಿಖೆಗಾಗಿ ಸಿಬಿಐಗೆ ನೀಡಿದ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಂಡಿದೆ.</p>.<p>ಈ ನಿರ್ಧಾರದಿಂದಾಗಿ ಇನ್ನು ಮುಂದೆ ಯಾವುದೇ ಪ್ರಕರಣದ ತನಿಖೆಗಾಗಿ ಸಿಬಿಐ ಮಹಾರಾಷ್ಟ್ರವನ್ನು ಪ್ರವೇಶಿಸಿಸುವುದಕ್ಕೂ ಮೊದಲು ರಾಜ್ಯ ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಲಿದೆ. ಬುಧವಾರ ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ಭವಿಷ್ಯದ ಪ್ರಕರಣಗಳಿಗೆ ಈ ನಿರ್ಧಾರ ಅನ್ವಯವಾಗಲಿದೆಯಾದರೂ, ಈಗಾಗಲೇ ಸಿಬಿಐ ಕೈಗೊಂಡಿರುವ ಪ್ರಕರಣಗಳಿಗೆ ಈ ನಿರ್ಧಾರದಿಂದ ಯಾವುದೇ ಪರಿಣಾಮವಾಗದು.</p>.<figcaption>ಮಹಾರಾಷ್ಟ್ರ ಸರ್ಕಾರದ ಆದೇಶ</figcaption>.<p>‘1946ರ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ’ ಕಾಯ್ದೆ ಅಡಿಯಲ್ಲಿ, ಗೃಹ ಇಲಾಖೆ ಅಧೀನ ಕಾರ್ಯದರ್ಶಿ ಕೈಲಾಸ್ ಗಾಯಕ್ವಾಡ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ‘1989ರ ಫೆಬ್ರವರಿಯಲ್ಲಿ ಸಿಬಿಐಗೆ ರಾಜ್ಯ ಸರ್ಕಾರ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ರಾಜ್ಯದ ಯಾವುದೇ ಪ್ರಕರಣದ ತನಿಖೆ ಆರಂಭಿಸುವ ಮೊದಲು ಸರ್ಕಾರದ ಒಪ್ಪಿಗೆ ಪಡೆಯುವುದು ಅಗತ್ಯವಾಗಲಿದೆ,’ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಟಿಆರ್ಪಿ ಅಕ್ರಮ ಪ್ರಕರಣದ ಸಂಬಂಧ ಉತ್ತರ ಪ್ರದೇಶದ ಲಖನೌನ ಹಝರತ್ಗಂಜ್ ಪೊಲೀಸ್ ಠಾಣೆಯಲ್ಲಿ ಜಾಹೀರಾತು ಏಜೆನ್ಸಿಯೊಂದು ದಾಖಲಿಸಿದ ದೂರನ್ನು ಅಲ್ಲಿನ ಪೊಲೀಸರು ಸಿಬಿಐಗೆ ಶಿಫಾರಸು ಮಾಡಿದ್ದಾರೆ. ಹೀಗಾಗಿ, ಸಿಬಿಐ ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಸಿಬಿಐ ಅನ್ನು ನಿರ್ಬಂಧಿಸುವ ನಿರ್ಧಾರ ಕೈಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>