<p><strong>ಮುಂಬೈ</strong>: ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಪ್ರವಾಹ ಪರಿಸ್ಥಿತಿಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಮುಂದಿನ 48 ಗಂಟೆಗಳು ಮುಂಬೈ, ಠಾಣೆ, ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಿಗೆ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.</p>.Asia Cup 2025 | ಭಾರತ ತಂಡ ಪ್ರಕಟ: ಸೂರ್ಯಕುಮಾರ್ ನಾಯಕ, ಗಿಲ್ ಉಪನಾಯಕ.ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ 121 KG ಚಿನ್ನ ಕಾಣಿಕೆ ನೀಡಿದ ಉದ್ಯಮಿ. <p>ಪರಿಸ್ಥಿತಿಯನ್ನು ಸರ್ಕಾರ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ನಾಂದೇಡ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ 290ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಎಸ್ಡಿಆರ್ಎಫ್, ಸೇನೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರತಿಕ್ರಿಯಿಸಿದ್ದು, ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 10 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ಹಾನಿಯಾಗಿದೆ. ಮಳೆ ಕಡಿಮೆಯಾದ ಬಳಿಕ ಹಾನಿಯ ಅಂದಾಜಿಸುವ ಕಾರ್ಯ ಆರಂಭವಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.ಬೀದರ್:ಶಾಲೆ ಗೋಡೆಬಿದ್ದು ವಿದ್ಯಾರ್ಥಿಗೆ ಗಾಯ;ಬಗದಲ್ ಶಾಲೆ ಮುಖ್ಯಶಿಕ್ಷಕ ಅಮಾನತು.ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ ಅಪಹರಿಸಿ ದರೋಡೆ: ಐವರ ಸೆರೆ. <p>ಕಳೆದ 24 ಗಂಟೆಗಳಲ್ಲಿ ಮುಂಬೈಯ ಹಲವಾರು ಪ್ರದೇಶಗಳಲ್ಲಿ 20 ಸೆಂ.ಮೀ.ಗಿಂತಲೂ ಹೆಚ್ಚು ಮಳೆಯಾಗಿದೆ. ಪೂರ್ವ ಉಪನಗರದ ಮಿಕ್ರೋಲಿಯಲ್ಲಿ ಅತಿ ಹೆಚ್ಚು 25.55 ಸೆಂ.ಮೀ ಮಳೆಯಾಗಿದೆ ಎಂದು ಐಎಂಡಿ ಇಂದು (ಮಂಗಳವಾರ) ತಿಳಿಸಿದೆ.</p><p>ಹಾಗೆಯೇ ಪಶ್ಚಿಮ ಉಪನಗರದಲ್ಲಿ 23.82 ಸೆಂ.ಮೀ ಬೈಖಲಾದಲ್ಲಿ 24.1 ಸೆಂ.ಮೀ, ಜುಹು ಪ್ರದೇಶದಲ್ಲಿ 22.15 ಸೆಂ.ಮೀ ಮತ್ತು ಬಾಂದ್ರಾದಲ್ಲಿ 21.1 ಸೆಂ.ಮೀ ಮಳೆಯಾಗಿದೆ. ಮುಂಬೈಯಲ್ಲಿ ಭಾರಿ ಮಳೆಯಿಂದಾಗಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. </p>.ಭವಿಷ್ಯದ ಬಾಹ್ಯಾಕಾಶ ಯೋಜನೆಗಳಿಗೆ 40–50 ಗಗನಯಾನಿಗಳು ಬೇಕು; ಮೋದಿ.ಭಾರತದ ಬಾಹ್ಯಾಕಾಶ ಯಾನವನ್ನು ತಡೆದ ಕಾಂಗ್ರೆಸ್ : ಸಂಸದ ನಿಶಿಕಾಂತ್ ದುಬೆ ಆರೋಪ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಪ್ರವಾಹ ಪರಿಸ್ಥಿತಿಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಮುಂದಿನ 48 ಗಂಟೆಗಳು ಮುಂಬೈ, ಠಾಣೆ, ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಿಗೆ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.</p>.Asia Cup 2025 | ಭಾರತ ತಂಡ ಪ್ರಕಟ: ಸೂರ್ಯಕುಮಾರ್ ನಾಯಕ, ಗಿಲ್ ಉಪನಾಯಕ.ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ 121 KG ಚಿನ್ನ ಕಾಣಿಕೆ ನೀಡಿದ ಉದ್ಯಮಿ. <p>ಪರಿಸ್ಥಿತಿಯನ್ನು ಸರ್ಕಾರ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ನಾಂದೇಡ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ 290ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಎಸ್ಡಿಆರ್ಎಫ್, ಸೇನೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರತಿಕ್ರಿಯಿಸಿದ್ದು, ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 10 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ಹಾನಿಯಾಗಿದೆ. ಮಳೆ ಕಡಿಮೆಯಾದ ಬಳಿಕ ಹಾನಿಯ ಅಂದಾಜಿಸುವ ಕಾರ್ಯ ಆರಂಭವಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.ಬೀದರ್:ಶಾಲೆ ಗೋಡೆಬಿದ್ದು ವಿದ್ಯಾರ್ಥಿಗೆ ಗಾಯ;ಬಗದಲ್ ಶಾಲೆ ಮುಖ್ಯಶಿಕ್ಷಕ ಅಮಾನತು.ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ ಅಪಹರಿಸಿ ದರೋಡೆ: ಐವರ ಸೆರೆ. <p>ಕಳೆದ 24 ಗಂಟೆಗಳಲ್ಲಿ ಮುಂಬೈಯ ಹಲವಾರು ಪ್ರದೇಶಗಳಲ್ಲಿ 20 ಸೆಂ.ಮೀ.ಗಿಂತಲೂ ಹೆಚ್ಚು ಮಳೆಯಾಗಿದೆ. ಪೂರ್ವ ಉಪನಗರದ ಮಿಕ್ರೋಲಿಯಲ್ಲಿ ಅತಿ ಹೆಚ್ಚು 25.55 ಸೆಂ.ಮೀ ಮಳೆಯಾಗಿದೆ ಎಂದು ಐಎಂಡಿ ಇಂದು (ಮಂಗಳವಾರ) ತಿಳಿಸಿದೆ.</p><p>ಹಾಗೆಯೇ ಪಶ್ಚಿಮ ಉಪನಗರದಲ್ಲಿ 23.82 ಸೆಂ.ಮೀ ಬೈಖಲಾದಲ್ಲಿ 24.1 ಸೆಂ.ಮೀ, ಜುಹು ಪ್ರದೇಶದಲ್ಲಿ 22.15 ಸೆಂ.ಮೀ ಮತ್ತು ಬಾಂದ್ರಾದಲ್ಲಿ 21.1 ಸೆಂ.ಮೀ ಮಳೆಯಾಗಿದೆ. ಮುಂಬೈಯಲ್ಲಿ ಭಾರಿ ಮಳೆಯಿಂದಾಗಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. </p>.ಭವಿಷ್ಯದ ಬಾಹ್ಯಾಕಾಶ ಯೋಜನೆಗಳಿಗೆ 40–50 ಗಗನಯಾನಿಗಳು ಬೇಕು; ಮೋದಿ.ಭಾರತದ ಬಾಹ್ಯಾಕಾಶ ಯಾನವನ್ನು ತಡೆದ ಕಾಂಗ್ರೆಸ್ : ಸಂಸದ ನಿಶಿಕಾಂತ್ ದುಬೆ ಆರೋಪ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>