ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಮರಾಠ ಮೀಸಲಾತಿ: ಎನ್‌ಸಿಪಿ ಶಾಸಕ ಸೋಲಂಕಿ ಮನೆಗೆ ಬೆಂಕಿ

Published : 30 ಅಕ್ಟೋಬರ್ 2023, 14:23 IST
Last Updated : 30 ಅಕ್ಟೋಬರ್ 2023, 14:23 IST
ಫಾಲೋ ಮಾಡಿ
Comments
ತಜ್ಞರ ಸಮಿತಿ ರಚನೆ
ಮುಂಬೈ: ಮರಾಠ ಮೀಸಲಾತಿ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ ಪರಿಹಾರಾತ್ಮಕ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರಕ್ಕೆ ಸಲಹೆ ನೀಡಲು ಮೂವರು ತಜ್ಞರನ್ನು ಒಳಗೊಂಡ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಏಕನಾಥ ಶಿಂದೆ ಸೋಮವಾರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಸಮಿತಿಯು ಮೂವರು ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡಿರಲಿದೆ’ ಎಂದು ಹೇಳಿದರು. ಮರಾಠ ಸಮುದಾಯಕ್ಕೆ ‘ಕುಣಬಿ’ ಜಾತಿ ಪ್ರಮಾಣಪತ್ರ ನೀಡುವುದು ಹೇಗೆ ಎಂಬ ಬಗ್ಗೆ ವರದಿ ನೀಡಲು ನಿವೃತ್ತ ನ್ಯಾಯಾಧೀಶ ಸಂದೀಪ್‌ ಶಿಂದೆ ನೇತೃತ್ವದ ಸಮಿತಿ ರಚನೆ ಮಾಡಲಾಗಿದೆ. ಇದು ಮಂಗಳವಾರ ವರದಿ ಸಲ್ಲಿಸಲಿದೆ. ನಂತರ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT