ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Election Results | ಮಹಾರಾಷ್ಟ್ರದಲ್ಲಿ ಮಹಾಯುತಿ– ಜಾರ್ಖಂಡ್‌ನಲ್ಲಿ ಇಂಡಿಯಾ ಬಣಕ್ಕೆ ಜನಾದೇಶ

Published : 23 ನವೆಂಬರ್ 2024, 2:19 IST
Last Updated : 23 ನವೆಂಬರ್ 2024, 13:31 IST
ಫಾಲೋ ಮಾಡಿ
13:3023 Nov 2024

ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ಸರ್ಕಾರ ರಚನೆಗೆ ಸಿದ್ಧತೆ

02:0723 Nov 2024
02:2623 Nov 2024

ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ಹಾಗೂ ಜಾರ್ಖಂಡ್‌ನ 81 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮತ ಎಣಿಕೆ ಆರಂಭಗೊಂಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಹಾಗೂ ಎನ್‌ಸಿಪಿ ನೇತೃತ್ವದ ಮಹಾಯುತಿ ಬಣ ಹಾಗೂ ಕಾಂಗ್ರೆಸ್‌, ಶಿವಸೇನಾ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ಪಕ್ಷಗಳ ಮಹಾ ವಿಕಾಸ ಅಘಾಡಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಮತ್ತೊಂದೆಡೆ ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ ಹಾಗೂ ಜೆಎಂಎಂ ಮೈತ್ರಿ ವಿರುದ್ಧ ಬಿಜೆಪಿ ನೇತೃತ್ವದ ಎನ್‌ಡಿಎ ನಡುವೆ ನೇರ ಸ್ಪರ್ಧೆ ನಡೆದಿದೆ. ಮತ ಎಣಿಕೆ ಕೇಂದ್ರದಲ್ಲಿ ಅಂತಿಮ ಸಿದ್ಧತೆಗಳನ್ನು ಅಧಿಕಾರಿಗಳು ಪೂರೈಸಿದ್ದು, ಕೆಲವೇ ಕ್ಷಣಗಳಲ್ಲಿ ಮತದಾನ ಆರಂಭವಾಗಲಿದೆ.

02:3223 Nov 2024

ಮತ ಎಣಿಕೆ ಕೇಂದ್ರದ 2 ಕಿ.ಮೀ. ಸುತ್ತಳತೆಯಲ್ಲಿ ಅಂತರ್ಜಾಲ ಸೇವೆಯನ್ನು ನಿಷೇಧಿಸುವಂತೆ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷವು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಬಿಜೆಪಿಯು ವಿವಿಧ ರಾಜ್ಯಗಳಿಂದ ತಂತ್ರಜ್ಞರನ್ನು ಕರೆಯಿಸಿ ಮತ ಎಣಿಕೆ ಕೇಂದ್ರದ ಬಳಿ ನಿಯೋಜಿಸಿದೆ ಎಂಬ ಸಂಗತಿ ನಂಬಲರ್ಹ ಮೂಲಗಳಿಂದ ಗೊತ್ತಾಗಿದೆ. ಚುನಾವಣಾ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯಬೇಕೆಂದರೆ ಮತ ಎಣಿಕೆ ಕೇಂದ್ರದ ಸುತ್ತ ಅಂತರ್ಜಾಲವನ್ನು ನಿಷೇಧಿಸಬೇಕು ಎಂದು ಪಕ್ಷ ಆಗ್ರಹಿಸಿದೆ.

02:4723 Nov 2024

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಆರಂಭಿಕ ಮುನ್ನಡೆ ದೊರೆತಿದ್ದು, ಆರು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೊಂದೆಡೆ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ ಅಘಾಡಿಯು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

02:5823 Nov 2024

ಮಹಾಯುತಿಗೆ 34 ಕ್ಷೇತ್ರಗಳಲ್ಲಿ ಹಾಗೂ ಮಹಾ ವಿಕಾಸ ಅಘಾಡಿಗೆ 6 ಕ್ಷೇತ್ರಗಳಲ್ಲಿ ಮುನ್ನಡೆ

03:0323 Nov 2024

ಜಾರ್ಖಂಡ್‌ನಲ್ಲಿ ಎನ್‌ಡಿಎ 17ರಲ್ಲಿ ಹಾಗೂ ‘ಇಂಡಿಯಾ’ ಬಣಕ್ಕೆ 6 ಕ್ಷೇತ್ರಗಳಲ್ಲಿ ಮುನ್ನಡೆ

03:0823 Nov 2024

ಮಹಾರಾಷ್ಟ್ರದಲ್ಲಿ ಏಕನಾಥ ಶಿಂದೆ, ಆದಿತ್ಯ ಠಾಕ್ರೆ, ದೇವೇಂದ್ರ ಫಡಣವೀಸ್‌ಗೆ ಮುನ್ನಡೆಯಾದರೆ, ಎನ್‌ಸಿಪಿಯ ಅಜಿತ್‌ ಪವಾರ್‌ ಹಿನ್ನಡೆ ಅನುಭವಿಸಿದ್ದಾರೆ.

03:4323 Nov 2024

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು 114 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮಹಾ ವಿಕಾಸ ಅಘಾಡಿಯು 83 ಕ್ಷೇತ್ರಗಳಲ್ಲಿ ಮುಂದಿದೆ. ಖಾರ್ಜಂಡ್‌ನಲ್ಲಿ ಎನ್‌ಡಿಎ 35 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಬಣ 31 ಕ್ಷೇತ್ರಗಳಲ್ಲಿ ಮುಂದಿದೆ.

03:5223 Nov 2024

ಇತ್ತೀಚೆಗೆ ಹಂತಕರ ಗುಂಡಿಗೆ ಬಲಿಯಾದ ಬಾಬಾ ಸಿದ್ಧಿಕಿ ಪುತ್ರ ಜಿಶಾನ್ ಸಿದ್ಧಿಕಿ ಅವರು ಬಾಂದ್ರಾ ಪೂರ್ವದಲ್ಲಿ ಮುನ್ನಡೆ ಸಾಧಿಸಿದ್ದಾರೆ

ADVERTISEMENT
ADVERTISEMENT