<p><strong>ನವದೆಹಲಿ:</strong> ಮಹಾರಾಷ್ಟ್ರದಲ್ಲಿ ದಲಿತರಿಗಾಗಿ ಮೀಸಲಿಟ್ಟಿದ್ದ ₹1,800 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ರಾಜ್ಯದ ಸಚಿವರ ಪುತ್ರನಿಗೆ ಮಾರಾಟ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದರು.</p>.<p>ಮತ ಅಕ್ರಮದ ಮೂಲಕ ಅಧಿಕಾರಕ್ಕೆ ಬಂದಿರುವ ಸರ್ಕಾರವೇ ಈ ‘ಭೂಗಳ್ಳತನ’ ಮಾಡಿದೆ ಎಂದು ಅವರು ಶುಕ್ರವಾರ ‘ಎಕ್ಸ್’ನಲ್ಲಿ ದೂರಿದರು.</p>.<p>₹1,800 ಕೋಟಿ ಬೆಲೆಬಾಳುವ ಭೂಮಿಯನ್ನು ಸಚಿವರ ಪುತ್ರನ ಕಂಪನಿಗೆ ಕೇವಲ ₹300 ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರೇ... ನಿಮ್ಮ ಮೌನವೇ ಎಲ್ಲವನ್ನೂ ಹೇಳುತ್ತದೆ. ದಲಿತರು ಮತ್ತು ದುರ್ಬಲರ ಹಕ್ಕುಗಳನ್ನು ಕಸಿದುಕೊಂಡು ಬದುಕುವ ಲೂಟಿಕೋರರಿಂದ ನಿಮ್ಮ ಸರ್ಕಾರ ನಡೆಯುತ್ತಿರುವ ಕಾರಣದಿಂದ ನೀವು ಮೌನವಾಗಿದ್ದೀರಾ’ ಎಂದು ಪ್ರಶ್ನಿಸಿದ್ದಾರೆ. </p>.<p>₹300 ಕೋಟಿ ಮೌಲ್ಯದ ಭೂವ್ಯವಹಾರವು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ ಪಾರ್ಥ ಅವರ ಮಾಲೀಕತ್ವದ ಸಂಸ್ಥೆಗೆ ಸಂಬಂಧಿಸಿದ್ದಾಗಿದೆ. ಇದು ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಚರ್ಚಿತವಾಗುತ್ತಿದ್ದು, ಸರ್ಕಾರವು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹಾರಾಷ್ಟ್ರದಲ್ಲಿ ದಲಿತರಿಗಾಗಿ ಮೀಸಲಿಟ್ಟಿದ್ದ ₹1,800 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ರಾಜ್ಯದ ಸಚಿವರ ಪುತ್ರನಿಗೆ ಮಾರಾಟ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದರು.</p>.<p>ಮತ ಅಕ್ರಮದ ಮೂಲಕ ಅಧಿಕಾರಕ್ಕೆ ಬಂದಿರುವ ಸರ್ಕಾರವೇ ಈ ‘ಭೂಗಳ್ಳತನ’ ಮಾಡಿದೆ ಎಂದು ಅವರು ಶುಕ್ರವಾರ ‘ಎಕ್ಸ್’ನಲ್ಲಿ ದೂರಿದರು.</p>.<p>₹1,800 ಕೋಟಿ ಬೆಲೆಬಾಳುವ ಭೂಮಿಯನ್ನು ಸಚಿವರ ಪುತ್ರನ ಕಂಪನಿಗೆ ಕೇವಲ ₹300 ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರೇ... ನಿಮ್ಮ ಮೌನವೇ ಎಲ್ಲವನ್ನೂ ಹೇಳುತ್ತದೆ. ದಲಿತರು ಮತ್ತು ದುರ್ಬಲರ ಹಕ್ಕುಗಳನ್ನು ಕಸಿದುಕೊಂಡು ಬದುಕುವ ಲೂಟಿಕೋರರಿಂದ ನಿಮ್ಮ ಸರ್ಕಾರ ನಡೆಯುತ್ತಿರುವ ಕಾರಣದಿಂದ ನೀವು ಮೌನವಾಗಿದ್ದೀರಾ’ ಎಂದು ಪ್ರಶ್ನಿಸಿದ್ದಾರೆ. </p>.<p>₹300 ಕೋಟಿ ಮೌಲ್ಯದ ಭೂವ್ಯವಹಾರವು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ ಪಾರ್ಥ ಅವರ ಮಾಲೀಕತ್ವದ ಸಂಸ್ಥೆಗೆ ಸಂಬಂಧಿಸಿದ್ದಾಗಿದೆ. ಇದು ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಚರ್ಚಿತವಾಗುತ್ತಿದ್ದು, ಸರ್ಕಾರವು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>