<p><strong>ಮುಂಬೈ</strong>: ಮಹಾರಾಷ್ಟ್ರದ ಲಾತೂರ್ನಲ್ಲಿ ಭಾರಿ ಮಳೆಯಿಂದಾಗಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹಗಳನ್ನು 40 ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿ ಹೊರತೆಗೆಯಲಾಯಿತು ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p><p>ಹೊಲದಿಂದ ಹಿಂತಿರುಗುತ್ತಿದ್ದಾಗ 27 ವರ್ಷದ ಸುದರ್ಶನ್ ತಿರ್ರು ನದಿಯಲ್ಲಿ ಕೊಚ್ಚಿ ಹೋಗಿದ್ದರು. ಜಲ್ಕೋಟ್ ತಾಲ್ಲೂಕಿನ ಸೇತುವೆಯೊಂದರ ಮೇಲೆ ಆಟೊರಿಕ್ಷಾದಲ್ಲಿ ಪ್ರಮಾಣಿಸುವ ವೇಳೆ ಪ್ರಬಲ ಪ್ರವಾಹದಿಂದ ಐವರು ಕೊಚ್ಚಿ ಹೋಗಿದ್ದರು, ಈ ಪೈಕಿ ಮೂವರನ್ನು ರಕ್ಷಿಸಲಾಗಿತ್ತು. ನಾಪತ್ತೆಯಾಗಿದ್ದ ಆಟೋರಿಕ್ಷಾ ಚಾಲಕ ಸಂಗ್ರಾಮ್ ಸೋನ್ಕಾಂಬ್ಲೆ ಹಾಗೂ ವಿಠ್ಠಲ್ ಗವಳಿ ಅವರ ಮೃತದೇಹಗಳನ್ನು ಹೊರತೆಗೆಯಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಪಂಡಿತ್ ಎಂ.ವೆಂಕಟೇಶ್ ಕುಮಾರ್ಗೆ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’.ಮಹಾಲಯ ಅಮಾವಾಸ್ಯೆಯಂದು ಸೂರ್ಯಗ್ರಹಣ: ಭಾರತಕ್ಕೆ ಅಪಾಯ ಇದೆಯೇ?. <p>ಮತ್ತೊಂದೆಡೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಉದ್ಗೀರ್ನ ವೈಭವ್ ಪುಂಡಲೀಕ್ ಗಾಯಕ್ವಾಡ್ (24) ಮತ್ತು ಸಂಗೀತಾ ಮುರ್ಹರಿ ಸೂರ್ಯವ್ವಂಶಿ (32) ಅವರ ಮೃತದೇಹಗಳು ಡೊಂಗರ್ಗಾಂವ್ ನದಿಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಕಳೆದ ಎರಡು ದಿನಗಳಿಂದ ಲಾತೂರ್ನಲ್ಲಿ ಭಾರಿ ಮಳೆಯಾಗುತ್ತಿದ್ದು, ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಡುವೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ಅಗ್ನಿಶಾಮಕ ದಳ ಮತ್ತು ಪೊಲೀಸರ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಭಾರಿ ಮಳೆಯಿಂದಾಗಿ ಬೆಳೆಗಳು ನಾಶವಾಗಿದ್ದು ಹಾಗೂ ಮನೆಗಳಿಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ ₹480 ಕೋಟಿ ನಷ್ಟವಾಗಿದೆ. ಆದರೆ ಸಮೀಕ್ಷೆ ಮೂಲಕವೇ ನಿಖರವಾದ ಅಂಕಿ ಅಂಶ ಸಿಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, </p>.Asia Cup: ಒಮಾನ್ ವಿರುದ್ಧ ಬ್ಯಾಟಿಂಗ್ಗೆ ಬಾರದ SKY ನಿರ್ಧಾರ ಬೆಂಬಲಿಸಿದ ಸುನಿಲ್.ಪಂಡಿತ್ ಎಂ.ವೆಂಕಟೇಶ್ ಕುಮಾರ್ಗೆ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’.BBK12: ಈ ಬಾರಿ ಬಿಗ್ಬಾಸ್ ಮನೆಗೆ ಹೋಗುವವರು ಯಾರು? ಸಂಭಾವ್ಯರ ಪಟ್ಟಿ.ಜಿಎಸ್ಟಿ ಪರಿಷ್ಕರಣೆಯಿಂದ ಜನರ ಕೈಯಲ್ಲಿ ₹ 2 ಲಕ್ಷ ಕೋಟಿ: ನಿರ್ಮಲಾ ಸೀತಾರಾಮನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ಲಾತೂರ್ನಲ್ಲಿ ಭಾರಿ ಮಳೆಯಿಂದಾಗಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹಗಳನ್ನು 40 ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿ ಹೊರತೆಗೆಯಲಾಯಿತು ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p><p>ಹೊಲದಿಂದ ಹಿಂತಿರುಗುತ್ತಿದ್ದಾಗ 27 ವರ್ಷದ ಸುದರ್ಶನ್ ತಿರ್ರು ನದಿಯಲ್ಲಿ ಕೊಚ್ಚಿ ಹೋಗಿದ್ದರು. ಜಲ್ಕೋಟ್ ತಾಲ್ಲೂಕಿನ ಸೇತುವೆಯೊಂದರ ಮೇಲೆ ಆಟೊರಿಕ್ಷಾದಲ್ಲಿ ಪ್ರಮಾಣಿಸುವ ವೇಳೆ ಪ್ರಬಲ ಪ್ರವಾಹದಿಂದ ಐವರು ಕೊಚ್ಚಿ ಹೋಗಿದ್ದರು, ಈ ಪೈಕಿ ಮೂವರನ್ನು ರಕ್ಷಿಸಲಾಗಿತ್ತು. ನಾಪತ್ತೆಯಾಗಿದ್ದ ಆಟೋರಿಕ್ಷಾ ಚಾಲಕ ಸಂಗ್ರಾಮ್ ಸೋನ್ಕಾಂಬ್ಲೆ ಹಾಗೂ ವಿಠ್ಠಲ್ ಗವಳಿ ಅವರ ಮೃತದೇಹಗಳನ್ನು ಹೊರತೆಗೆಯಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಪಂಡಿತ್ ಎಂ.ವೆಂಕಟೇಶ್ ಕುಮಾರ್ಗೆ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’.ಮಹಾಲಯ ಅಮಾವಾಸ್ಯೆಯಂದು ಸೂರ್ಯಗ್ರಹಣ: ಭಾರತಕ್ಕೆ ಅಪಾಯ ಇದೆಯೇ?. <p>ಮತ್ತೊಂದೆಡೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಉದ್ಗೀರ್ನ ವೈಭವ್ ಪುಂಡಲೀಕ್ ಗಾಯಕ್ವಾಡ್ (24) ಮತ್ತು ಸಂಗೀತಾ ಮುರ್ಹರಿ ಸೂರ್ಯವ್ವಂಶಿ (32) ಅವರ ಮೃತದೇಹಗಳು ಡೊಂಗರ್ಗಾಂವ್ ನದಿಯಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಕಳೆದ ಎರಡು ದಿನಗಳಿಂದ ಲಾತೂರ್ನಲ್ಲಿ ಭಾರಿ ಮಳೆಯಾಗುತ್ತಿದ್ದು, ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಡುವೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ಅಗ್ನಿಶಾಮಕ ದಳ ಮತ್ತು ಪೊಲೀಸರ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ಭಾರಿ ಮಳೆಯಿಂದಾಗಿ ಬೆಳೆಗಳು ನಾಶವಾಗಿದ್ದು ಹಾಗೂ ಮನೆಗಳಿಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ ₹480 ಕೋಟಿ ನಷ್ಟವಾಗಿದೆ. ಆದರೆ ಸಮೀಕ್ಷೆ ಮೂಲಕವೇ ನಿಖರವಾದ ಅಂಕಿ ಅಂಶ ಸಿಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ, </p>.Asia Cup: ಒಮಾನ್ ವಿರುದ್ಧ ಬ್ಯಾಟಿಂಗ್ಗೆ ಬಾರದ SKY ನಿರ್ಧಾರ ಬೆಂಬಲಿಸಿದ ಸುನಿಲ್.ಪಂಡಿತ್ ಎಂ.ವೆಂಕಟೇಶ್ ಕುಮಾರ್ಗೆ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’.BBK12: ಈ ಬಾರಿ ಬಿಗ್ಬಾಸ್ ಮನೆಗೆ ಹೋಗುವವರು ಯಾರು? ಸಂಭಾವ್ಯರ ಪಟ್ಟಿ.ಜಿಎಸ್ಟಿ ಪರಿಷ್ಕರಣೆಯಿಂದ ಜನರ ಕೈಯಲ್ಲಿ ₹ 2 ಲಕ್ಷ ಕೋಟಿ: ನಿರ್ಮಲಾ ಸೀತಾರಾಮನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>