<p><strong>ಮುಂಬೈ</strong>: ಮಹಾರಾಷ್ಟ್ರದ ನಗರ ಸಭೆ ಮತ್ತು ನಗರ ಪಂಚಾಯಿತಿ ಚುನಾವಣೆಗಳಲ್ಲಿ ಪರಾಭವಗೊಂಡಿರುವುದನ್ನು ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಶಿವಸೇನಾ (ಉದ್ಧವ್ ಬಣ) ಒಪ್ಪಿಕೊಂಡಿವೆ. ಚುನಾವಣಾ ಆಯೋಗವು ಆಡಳಿತಾರೂಢ ‘ಮಹಾಯುತಿ’ಯನ್ನು ಗೆಲ್ಲಿಸಿದೆ ಎಂದು ಅವು ಆರೋಪಿಸಿವೆ.</p>.<p>286 ನಗರ ಸಭೆಗಳು ಮತ್ತು ನಗರ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆಗೆ ಎರಡು ಹಂತಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಭಾನುವಾರ ನಡೆಯಿತು.</p>.<p>ರಾಜ್ಯ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.</p>.ಮಹಾರಾಷ್ಟ್ರ: ನಗರ ಪರಿಷದ್, ಪಂಚಾಯಿತಿಗಳ ಚುನಾವಣೆಯಲ್ಲಿ ಬಿಜೆಪಿಗೆ ಅಗ್ರಸ್ಥಾನ.ಚುನಾವಣಾ ಟ್ರಸ್ಟ್ಗಳ ದೇಣಿಗೆ: ಬಿಜೆಪಿಗೆ ಸಿಂಹಪಾಲು; ಯಾರಿಗೆ ಎಷ್ಟು?.<p>ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪಕಾಲ್ ಅವರು, ‘ಮಹಾಯುತಿ ಮೈತ್ರಿಕೂಟವನ್ನು ಚುನಾವಣೆಯಲ್ಲಿ ಗೆಲ್ಲಿಸಲು ನೆರವಾದ ಆಯೋಗಕ್ಕೆ ಅಭಿನಂದನೆಗಳು’ ಎಂದು ಹೇಳಿದರು.</p>.<p>ಶಿವಸೇನಾ (ಉದ್ಧವ್ ಬಣ) ನಾಯಕ ಸಂಜಯ್ ರಾವುತ್ ಅವರು, ‘ಸ್ಥಳೀಯ ಚುನಾವಣೆಗೆ ಆಡಳಿತ ಪಕ್ಷದಿಂದ ಹಣದ ಹೊಳೆಯೇ ಹರಿದಿದ್ದು, ಅದರ ಮುಂದೆ ವಿಪಕ್ಷಗಳಿಗೆ ನಿಲ್ಲಲಾಗಲಿಲ್ಲ’ ಎಂದರು.</p>.<p>‘ಕಳೆದ ವಿಧಾನಸಭೆ ಚುನಾವಣೆ ಮತ್ತು ಈ ಚುನಾವಣೆಗೆ ಬಳಸಿದ ಇವಿಎಂ ಎರಡೂ ಒಂದೇ. ಮಹಾಯುತಿಯು ನಗರಸಭೆ ಚುನಾವಣೆಗೆ ₹150 ಕೋಟಿ ಖರ್ಚು ಮಾಡಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ನಗರ ಸಭೆ ಮತ್ತು ನಗರ ಪಂಚಾಯಿತಿ ಚುನಾವಣೆಗಳಲ್ಲಿ ಪರಾಭವಗೊಂಡಿರುವುದನ್ನು ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಶಿವಸೇನಾ (ಉದ್ಧವ್ ಬಣ) ಒಪ್ಪಿಕೊಂಡಿವೆ. ಚುನಾವಣಾ ಆಯೋಗವು ಆಡಳಿತಾರೂಢ ‘ಮಹಾಯುತಿ’ಯನ್ನು ಗೆಲ್ಲಿಸಿದೆ ಎಂದು ಅವು ಆರೋಪಿಸಿವೆ.</p>.<p>286 ನಗರ ಸಭೆಗಳು ಮತ್ತು ನಗರ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆಗೆ ಎರಡು ಹಂತಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಭಾನುವಾರ ನಡೆಯಿತು.</p>.<p>ರಾಜ್ಯ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.</p>.ಮಹಾರಾಷ್ಟ್ರ: ನಗರ ಪರಿಷದ್, ಪಂಚಾಯಿತಿಗಳ ಚುನಾವಣೆಯಲ್ಲಿ ಬಿಜೆಪಿಗೆ ಅಗ್ರಸ್ಥಾನ.ಚುನಾವಣಾ ಟ್ರಸ್ಟ್ಗಳ ದೇಣಿಗೆ: ಬಿಜೆಪಿಗೆ ಸಿಂಹಪಾಲು; ಯಾರಿಗೆ ಎಷ್ಟು?.<p>ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪಕಾಲ್ ಅವರು, ‘ಮಹಾಯುತಿ ಮೈತ್ರಿಕೂಟವನ್ನು ಚುನಾವಣೆಯಲ್ಲಿ ಗೆಲ್ಲಿಸಲು ನೆರವಾದ ಆಯೋಗಕ್ಕೆ ಅಭಿನಂದನೆಗಳು’ ಎಂದು ಹೇಳಿದರು.</p>.<p>ಶಿವಸೇನಾ (ಉದ್ಧವ್ ಬಣ) ನಾಯಕ ಸಂಜಯ್ ರಾವುತ್ ಅವರು, ‘ಸ್ಥಳೀಯ ಚುನಾವಣೆಗೆ ಆಡಳಿತ ಪಕ್ಷದಿಂದ ಹಣದ ಹೊಳೆಯೇ ಹರಿದಿದ್ದು, ಅದರ ಮುಂದೆ ವಿಪಕ್ಷಗಳಿಗೆ ನಿಲ್ಲಲಾಗಲಿಲ್ಲ’ ಎಂದರು.</p>.<p>‘ಕಳೆದ ವಿಧಾನಸಭೆ ಚುನಾವಣೆ ಮತ್ತು ಈ ಚುನಾವಣೆಗೆ ಬಳಸಿದ ಇವಿಎಂ ಎರಡೂ ಒಂದೇ. ಮಹಾಯುತಿಯು ನಗರಸಭೆ ಚುನಾವಣೆಗೆ ₹150 ಕೋಟಿ ಖರ್ಚು ಮಾಡಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>