<p>ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ಆರು ತಿಂಗಳ ತನಕ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಭಾನುವಾರ ಹೇಳಿದರು.</p>.<p>ಸಾಮಾಜಿಕ ಜಾಲತಾಣದ ಮೂಲಕ ರಾಜ್ಯದ ಜನರನ್ನುದ್ಧೇಶಿಸಿ ಮಾತನಾಡಿದ ಅವರು, ‘ಮಹಾರಾಷ್ಟ್ರದಲ್ಲಿ ಮತ್ತೊಂದು ಲಾಕ್ಡೌನ್ ಮತ್ತುರಾತ್ರಿ ಕರ್ಫ್ಯೂ ಹೇರುವಂತೆ ತಜ್ಞರು ಸಲಹೆ ನೀಡಿದ್ದಾರೆ. ಆದರೆ ನನಗೆ ಆ ರೀತಿಯ ಕ್ರಮಕೈಗೊಳ್ಳಲು ಇಷ್ಟವಿಲ್ಲ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ ಕೊರೊನಾ ವೈರಸ್ ಪರಿಸ್ಥಿತಿಯು ಸ್ವಲ್ಪಮಟ್ಟಿಗೆ ನಿಯಂತ್ರಣದಲ್ಲಿದೆ. ರೋಗ ನಿವಾರಣೆ ಮಾಡುವುದಕ್ಕಿಂತ ರೋಗ ಬರದಂತೆ ಮುಂಜಾಗೂರಕತೆ ವಹಿಸುವುದು ಉತ್ತಮ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು. ಇದನ್ನು ಮುಂದಿನ ಆರು ತಿಂಗಳಿನವರೆಗೆ ರೂಢಿ ಮಾಡಿಕೊಳ್ಳಬೇಕು’ ಎಂದು ಅವರು ತಿಳಿಸಿದರು.</p>.<p>ಮಹಾರಾಷ್ಟ್ರದಲ್ಲಿ ಶನಿವಾರ 3,940 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 18.92 ಲಕ್ಷ ದಾಟಿದೆ. ಅಲ್ಲದೆ ಶನಿವಾರ 74 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಲ್ಲಿ ಒಟ್ಟು 48,648 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.</p>.<p>ಮೆಟ್ರೊ ಕಾರು ಶೆಡ್ ವಿವಾದ: ಕಾಂಜೂರ್ಮಾರ್ಗ ಮೆಟ್ರೊ ಕಾರು ಶೆಡ್ ಭೂ ವಿವಾದವನ್ನು ಮಾತುಕತೆಯ ಮೂಲಕ ಬಗೆಹರಿಸಲು ಸಿದ್ಧ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೇಳಿದ್ದಾರೆ.</p>.<p>‘ಈ ವಿವಾದ ಸಂಬಂಧ ಕೇಂದ್ರ ಸರ್ಕಾರವು ಮಹಾರಾಷ್ಟ್ರ ಸರ್ಕಾರದ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದೆ. ಈ ಭೂಮಿ ರಾಜ್ಯ ಸರ್ಕಾರಕ್ಕೆ ಸೇರಿರುವುದು ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಒಂದು ವೇಳೆ ಭೂ ಮಾಲೀಕನ ಕುರಿತಾಗಿ ವಿವಾದಗಳಿದ್ದರೆ ಅದನ್ನು ಮಾತುಕತೆ ಮೂಲಕ ಬಗೆಹರಿಸಲು ನಾವು ಸಿದ್ಧ’ ಅವರು ಅಭಿಪ್ರಾಯಪಟ್ಟರು.</p>.<p>ಕಾಂಜೂರ್ಮಾರ್ಗ ಪ್ರದೇಶದಲ್ಲಿ ಮೆಟ್ರೊ ಕಾರ್ ಶೆಡ್ ನಿರ್ಮಿಸಲು 102 ಎಕರೆ ಭೂಮಿಯನ್ನು ಮುಂಬೈ ಸಬ್ಅರ್ಬನ್ ಜಿಲ್ಲಾಧಿಕಾರಿ ಮಂಜೂರ್ ಮಾಡಿದ್ದರು. ಇದಕ್ಕೆ ಬಾಂಬೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ಆರು ತಿಂಗಳ ತನಕ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಭಾನುವಾರ ಹೇಳಿದರು.</p>.<p>ಸಾಮಾಜಿಕ ಜಾಲತಾಣದ ಮೂಲಕ ರಾಜ್ಯದ ಜನರನ್ನುದ್ಧೇಶಿಸಿ ಮಾತನಾಡಿದ ಅವರು, ‘ಮಹಾರಾಷ್ಟ್ರದಲ್ಲಿ ಮತ್ತೊಂದು ಲಾಕ್ಡೌನ್ ಮತ್ತುರಾತ್ರಿ ಕರ್ಫ್ಯೂ ಹೇರುವಂತೆ ತಜ್ಞರು ಸಲಹೆ ನೀಡಿದ್ದಾರೆ. ಆದರೆ ನನಗೆ ಆ ರೀತಿಯ ಕ್ರಮಕೈಗೊಳ್ಳಲು ಇಷ್ಟವಿಲ್ಲ’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ ಕೊರೊನಾ ವೈರಸ್ ಪರಿಸ್ಥಿತಿಯು ಸ್ವಲ್ಪಮಟ್ಟಿಗೆ ನಿಯಂತ್ರಣದಲ್ಲಿದೆ. ರೋಗ ನಿವಾರಣೆ ಮಾಡುವುದಕ್ಕಿಂತ ರೋಗ ಬರದಂತೆ ಮುಂಜಾಗೂರಕತೆ ವಹಿಸುವುದು ಉತ್ತಮ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು. ಇದನ್ನು ಮುಂದಿನ ಆರು ತಿಂಗಳಿನವರೆಗೆ ರೂಢಿ ಮಾಡಿಕೊಳ್ಳಬೇಕು’ ಎಂದು ಅವರು ತಿಳಿಸಿದರು.</p>.<p>ಮಹಾರಾಷ್ಟ್ರದಲ್ಲಿ ಶನಿವಾರ 3,940 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 18.92 ಲಕ್ಷ ದಾಟಿದೆ. ಅಲ್ಲದೆ ಶನಿವಾರ 74 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಲ್ಲಿ ಒಟ್ಟು 48,648 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.</p>.<p>ಮೆಟ್ರೊ ಕಾರು ಶೆಡ್ ವಿವಾದ: ಕಾಂಜೂರ್ಮಾರ್ಗ ಮೆಟ್ರೊ ಕಾರು ಶೆಡ್ ಭೂ ವಿವಾದವನ್ನು ಮಾತುಕತೆಯ ಮೂಲಕ ಬಗೆಹರಿಸಲು ಸಿದ್ಧ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೇಳಿದ್ದಾರೆ.</p>.<p>‘ಈ ವಿವಾದ ಸಂಬಂಧ ಕೇಂದ್ರ ಸರ್ಕಾರವು ಮಹಾರಾಷ್ಟ್ರ ಸರ್ಕಾರದ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದೆ. ಈ ಭೂಮಿ ರಾಜ್ಯ ಸರ್ಕಾರಕ್ಕೆ ಸೇರಿರುವುದು ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಒಂದು ವೇಳೆ ಭೂ ಮಾಲೀಕನ ಕುರಿತಾಗಿ ವಿವಾದಗಳಿದ್ದರೆ ಅದನ್ನು ಮಾತುಕತೆ ಮೂಲಕ ಬಗೆಹರಿಸಲು ನಾವು ಸಿದ್ಧ’ ಅವರು ಅಭಿಪ್ರಾಯಪಟ್ಟರು.</p>.<p>ಕಾಂಜೂರ್ಮಾರ್ಗ ಪ್ರದೇಶದಲ್ಲಿ ಮೆಟ್ರೊ ಕಾರ್ ಶೆಡ್ ನಿರ್ಮಿಸಲು 102 ಎಕರೆ ಭೂಮಿಯನ್ನು ಮುಂಬೈ ಸಬ್ಅರ್ಬನ್ ಜಿಲ್ಲಾಧಿಕಾರಿ ಮಂಜೂರ್ ಮಾಡಿದ್ದರು. ಇದಕ್ಕೆ ಬಾಂಬೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>