<p><strong>ಮುಂಬೈ:</strong> ಕೋವಿಡ್–19 ಎರಡನೇ ಅಲೆಯಿಂದ ಈಗಾಗಲೇ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಮಹಾರಾಷ್ಟ್ರವು ಜುಲೈ–ಆಗಸ್ಟ್ನಲ್ಲಿ ಕೊರೊನಾ ವೈರಸ್ನ ಮೂರನೇ ಅಲೆ ಎದುರಿಸಬೇಕಾಗಬಹುದು ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ ಗುರುವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್ ದೃಢಪಟ್ಟ 66,159 ಹೊಸ ಪ್ರಕರಣಗಳು ದಾಖಲಾಗಿದ್ದು, 771 ಮಂದಿ ಸಾವಿಗೀಡಾಗಿದ್ದಾರೆ.</p>.<p>'ಸೋಂಕು ಶಾಸ್ತ್ರಜ್ಞರ ಪ್ರಕಾರ, ಮಹಾರಾಷ್ಟ್ರವು ಜುಲೈ ಅಥವಾ ಆಗಸ್ಟ್ನಲ್ಲಿ ಕೋವಿಡ್–19 ಮೂರನೇ ಅಲೆಯನ್ನು ಎದುರಿಸಬೇಕಾಗುತ್ತದೆ' ಎಂದು ಟೋಪೆ ಹೇಳಿದ್ದಾರೆ.</p>.<p>ಮೇ ಅಂತ್ಯದ ವೇಳೆಗೆ ಮಹಾರಾಷ್ಟ್ರದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಇಳಿಮುಖವಾಗಲಿದೆ. ಅಕಸ್ಮಾತ್ ಜುಲೈ ಅಥವಾ ಆಗಸ್ಟ್ ಹೊತ್ತಿಗೆ ಕೋವಿಡ್ ಮೂರನೇ ಅಲೆಯು ಎದುರಾದರೆ, ಪರಿಸ್ಥಿತಿ ನಿರ್ವಹಣೆಯು ಸವಾಲಿನದಾಗಲಿದೆ. ಆ ವೇಳೆಗೆ ರಾಜ್ಯವು ವೈದ್ಯಕೀಯ ಆಮ್ಲಜನಕ ಪೂರೈಕೆಗಾಗಿ ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ಪ್ರಯತ್ನಿಸಲಿದೆ ಎಂದಿದ್ದಾರೆ.</p>.<p>ಕೋವಿಡ್–19 ನಿರ್ವಹಣೆಯ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಗುರುವಾರ ಸಭೆ ನಡೆಸಲಾಗಿದೆ. ಜಿಲ್ಲಾಧಿಕರಿಗಳು, ಆಯುಕ್ತರು ಸಭೆಯಲ್ಲಿ ಭಾಗಿಯಾಗಿದ್ದರು. ಮೇ 15ರ ವರೆಗೂ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ರೀತಿಯ ನಿರ್ಬಂಧಗಳನ್ನು ವಿಧಿಸಲಾಗಿದೆ.</p>.<p>ಗಂಭೀರ ಸ್ಥಿತಿಯಲ್ಲಿರುವ ಕೋವಿಡ್–19 ರೋಗಿಗಳ ಚಿಕಿತ್ಸೆಗಾಗಿ ರೆಮ್ಡಿಸಿವಿರ್ ಇಂಜೆಕ್ಷನ್ ನೀಡಲು ಕೊರತೆ ಎದುರಾಗಿದ್ದು, ರಾಜ್ಯಕ್ಕೆ 10,000ದಿಂದ 15,000 ರೆಮ್ಡಿಸಿವಿರ್ ಶೀಶೆಗಳ ಕೊರತೆ ಇರುವುದಾಗಿ ಸರ್ಕಾರ ಹೇಳಿದೆ.</p>.<p>ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆ, ಆಕ್ಸಿಜನ್ ಕಾನ್ಸಂಟ್ರೇಟರ್ಗಳ ವ್ಯವಸ್ಥೆ, ಜಿಲ್ಲೆಗಳಿಗೆ ಸಿಟಿ ಸ್ಕ್ಯಾನ್ ಮತ್ತು ಎಂಆರ್ಐ ಮೆಶಿನ್ಗಳ ಸೌಲಭ್ಯವನ್ನು ಪೂರೈಸಲು ಪ್ರಯತ್ನಿಸಲಾಗುತ್ತಿದೆ ಎಂದು ಟೋಪೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕೋವಿಡ್–19 ಎರಡನೇ ಅಲೆಯಿಂದ ಈಗಾಗಲೇ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಮಹಾರಾಷ್ಟ್ರವು ಜುಲೈ–ಆಗಸ್ಟ್ನಲ್ಲಿ ಕೊರೊನಾ ವೈರಸ್ನ ಮೂರನೇ ಅಲೆ ಎದುರಿಸಬೇಕಾಗಬಹುದು ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ ಗುರುವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್ ದೃಢಪಟ್ಟ 66,159 ಹೊಸ ಪ್ರಕರಣಗಳು ದಾಖಲಾಗಿದ್ದು, 771 ಮಂದಿ ಸಾವಿಗೀಡಾಗಿದ್ದಾರೆ.</p>.<p>'ಸೋಂಕು ಶಾಸ್ತ್ರಜ್ಞರ ಪ್ರಕಾರ, ಮಹಾರಾಷ್ಟ್ರವು ಜುಲೈ ಅಥವಾ ಆಗಸ್ಟ್ನಲ್ಲಿ ಕೋವಿಡ್–19 ಮೂರನೇ ಅಲೆಯನ್ನು ಎದುರಿಸಬೇಕಾಗುತ್ತದೆ' ಎಂದು ಟೋಪೆ ಹೇಳಿದ್ದಾರೆ.</p>.<p>ಮೇ ಅಂತ್ಯದ ವೇಳೆಗೆ ಮಹಾರಾಷ್ಟ್ರದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ ಇಳಿಮುಖವಾಗಲಿದೆ. ಅಕಸ್ಮಾತ್ ಜುಲೈ ಅಥವಾ ಆಗಸ್ಟ್ ಹೊತ್ತಿಗೆ ಕೋವಿಡ್ ಮೂರನೇ ಅಲೆಯು ಎದುರಾದರೆ, ಪರಿಸ್ಥಿತಿ ನಿರ್ವಹಣೆಯು ಸವಾಲಿನದಾಗಲಿದೆ. ಆ ವೇಳೆಗೆ ರಾಜ್ಯವು ವೈದ್ಯಕೀಯ ಆಮ್ಲಜನಕ ಪೂರೈಕೆಗಾಗಿ ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ಪ್ರಯತ್ನಿಸಲಿದೆ ಎಂದಿದ್ದಾರೆ.</p>.<p>ಕೋವಿಡ್–19 ನಿರ್ವಹಣೆಯ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಗುರುವಾರ ಸಭೆ ನಡೆಸಲಾಗಿದೆ. ಜಿಲ್ಲಾಧಿಕರಿಗಳು, ಆಯುಕ್ತರು ಸಭೆಯಲ್ಲಿ ಭಾಗಿಯಾಗಿದ್ದರು. ಮೇ 15ರ ವರೆಗೂ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ರೀತಿಯ ನಿರ್ಬಂಧಗಳನ್ನು ವಿಧಿಸಲಾಗಿದೆ.</p>.<p>ಗಂಭೀರ ಸ್ಥಿತಿಯಲ್ಲಿರುವ ಕೋವಿಡ್–19 ರೋಗಿಗಳ ಚಿಕಿತ್ಸೆಗಾಗಿ ರೆಮ್ಡಿಸಿವಿರ್ ಇಂಜೆಕ್ಷನ್ ನೀಡಲು ಕೊರತೆ ಎದುರಾಗಿದ್ದು, ರಾಜ್ಯಕ್ಕೆ 10,000ದಿಂದ 15,000 ರೆಮ್ಡಿಸಿವಿರ್ ಶೀಶೆಗಳ ಕೊರತೆ ಇರುವುದಾಗಿ ಸರ್ಕಾರ ಹೇಳಿದೆ.</p>.<p>ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆ, ಆಕ್ಸಿಜನ್ ಕಾನ್ಸಂಟ್ರೇಟರ್ಗಳ ವ್ಯವಸ್ಥೆ, ಜಿಲ್ಲೆಗಳಿಗೆ ಸಿಟಿ ಸ್ಕ್ಯಾನ್ ಮತ್ತು ಎಂಆರ್ಐ ಮೆಶಿನ್ಗಳ ಸೌಲಭ್ಯವನ್ನು ಪೂರೈಸಲು ಪ್ರಯತ್ನಿಸಲಾಗುತ್ತಿದೆ ಎಂದು ಟೋಪೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>