<p><strong>ಮುಂಬೈ:</strong> ಮಹಾರಾಷ್ಟ್ರದ ಸಾಮಾಜಿಕ ನ್ಯಾಯ ಖಾತೆಯ ಸಚಿವ ಧನಂಜಯ ಮುಂಡೆ ಅವರಿಗೆ ಪಾರ್ಶ್ವವಾಯು (ಲಕ್ವ) ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>46 ವರ್ಷದ ಎನ್ಸಿಪಿ ಮುಖಂಡ ಧನಂಜಯ ಅವರಿಗೆ ಮಂಗಳವಾರ ರಾತ್ರಿ ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ ಎಂದು ಅವರ ಆತ್ಮೀಯ ಮೂಲಗಳಿಂದ ತಿಳಿದುಬಂದಿದೆ.</p>.<p>'ಎಂದಿನಂತೆ ಕೆಲಸಗಳನ್ನು ಮುಗಿಸಿದರು. ಸಂಜೆ ತಮ್ಮ ಖಾಸಗಿ ನಿವಾಸದಲ್ಲಿ ಇದ್ದಾಗ ಧನಂಜಯ ಅವರ ಆರೋಗ್ಯದಲ್ಲಿ ಏರುಪೇರು ಸಂಭವಿಸಿದೆ. ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಸಚಿವರ ಆಪ್ತರೊಬ್ಬರು ತಿಳಿಸಿದ್ದಾರೆ.</p>.<p>ಧನಂಜಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಪರೀಕ್ಷೆಯ ಫಲಿತಾಂಶ ತಿಳಿಸಿರುವುದಾಗಿಯೂ ಮೂಲಗಳು ತಿಳಿಸಿವೆ.</p>.<p>ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ಧನಂಜಯ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದ್ದು, ಧನಂಜಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಧನಂಜಯ ಅವರು ಹೃದಾಯಾಘಾತಕ್ಕೆ ಒಳಗಾಗಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಸಾಮಾಜಿಕ ನ್ಯಾಯ ಖಾತೆಯ ಸಚಿವ ಧನಂಜಯ ಮುಂಡೆ ಅವರಿಗೆ ಪಾರ್ಶ್ವವಾಯು (ಲಕ್ವ) ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>46 ವರ್ಷದ ಎನ್ಸಿಪಿ ಮುಖಂಡ ಧನಂಜಯ ಅವರಿಗೆ ಮಂಗಳವಾರ ರಾತ್ರಿ ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ ಎಂದು ಅವರ ಆತ್ಮೀಯ ಮೂಲಗಳಿಂದ ತಿಳಿದುಬಂದಿದೆ.</p>.<p>'ಎಂದಿನಂತೆ ಕೆಲಸಗಳನ್ನು ಮುಗಿಸಿದರು. ಸಂಜೆ ತಮ್ಮ ಖಾಸಗಿ ನಿವಾಸದಲ್ಲಿ ಇದ್ದಾಗ ಧನಂಜಯ ಅವರ ಆರೋಗ್ಯದಲ್ಲಿ ಏರುಪೇರು ಸಂಭವಿಸಿದೆ. ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಸಚಿವರ ಆಪ್ತರೊಬ್ಬರು ತಿಳಿಸಿದ್ದಾರೆ.</p>.<p>ಧನಂಜಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಪರೀಕ್ಷೆಯ ಫಲಿತಾಂಶ ತಿಳಿಸಿರುವುದಾಗಿಯೂ ಮೂಲಗಳು ತಿಳಿಸಿವೆ.</p>.<p>ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ಧನಂಜಯ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದ್ದು, ಧನಂಜಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಧನಂಜಯ ಅವರು ಹೃದಾಯಾಘಾತಕ್ಕೆ ಒಳಗಾಗಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>