<p><strong>ಮುಂಬೈ</strong>: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇತ್ತೀಚೆಗೆ ಮೊಬೈಲ್ನಲ್ಲಿ ಆನ್ಲೈನ್ ರಮ್ಮಿ ಆಟವಾಡಿ ವಿವಾದಕ್ಕೆ ಒಳಗಾಗಿದ್ದ ಮಹಾರಾಷ್ಟ್ರ ಕೃಷಿ ಸಚಿವ ಮಾಣಿಕರಾವ್ ಕೊಕಾಟೆ ಅವರ ಖಾತೆಯನ್ನು ಬದಲಾಯಿಸಲಾಗಿದೆ.</p><p>ಗುರುವಾರ ರಾತ್ರಿ ನಡೆದ ಸಂಪುಟ ಪುನರ್ ರಚನೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.</p><p>ಮಾಣಿಕರಾವ್ ಕೊಕಾಟೆ ಅವರಿಗೆ ಕೃಷಿ ಖಾತೆ ಬದಲಿಗೆ ಯುವ ಸಬಲೀಕರಣ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಯುವ ಸಬಲೀಕರಣ ಇಲಾಖೆಯ ಸಚಿವರಾಗಿದ್ದ ದತ್ತಾತ್ರೇಯ ಭರ್ಣೆ ಅವರಿಗೆ ಕೃಷಿ ಖಾತೆ ಒದಗಿಸಲಾಗಿದೆ.</p><p>ಈ ಇಬ್ಬರೂ ಸಚಿವರು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಶಾಸಕರಾಗಿದ್ದಾರೆ.</p>.<p>ಕಳೆದ ಜುಲೈ 20 ರಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ರೈತರ ಸಮಸ್ಯೆಗಳ ಚರ್ಚೆ ವೇಳೆ ಕೊಕಾಟೆ ಅವರು ತಮ್ಮ ಮೊಬೈಲ್ನಲ್ಲಿ ರಮ್ಮಿ ಆಡಿದ್ದರು ಎಂದು ಆರೋಪಿಸಲಾಗಿತ್ತು. ಇದರಿಂದ ಸರ್ಕಾರಕ್ಕೆ ತೀವ್ರ ಮುಜುಗರವಾಗಿತ್ತು.</p><p>ಕೊಕಾಟೆ ಅವರು ಅಧಿವೇಶನ ನಡೆಯುವಾಗ ಮೊಬೈಲ್ನಲ್ಲಿ ‘ರಮ್ಮಿ’ ಆಡುತ್ತಿದ್ದ ಬಗ್ಗೆ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ತನಿಖೆಗೂ ಅದೇಶಿಸಿದ್ದರು. ಆದರೆ, ತಾನು ಮೊಬೈಲ್ ನೋಡುವಾಗ ರಮ್ಮಿ ಜಾಹೀರಾತು ಬಂದಿತ್ತು ಎಂದು ಕೊಕಾಟೆ ಸ್ಪಷ್ಟನೆ ನೀಡಿದ್ದರು.</p><p>ಮಾಣಿಕರಾವ್ ಕೊಕಾಟೆ ಅವರನ್ನು ಸಂಪುಟದಿಂದ ಕೈಬಿಡುವಂತೆ ವಿಪಕ್ಷಗಳ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಕೂಟ ಆಗ್ರಹಿಸಿತ್ತು. ಆದರೆ ಖಾತೆ ಮಾತ್ರ ಬದಲಾವಣೆ ಮಾಡಿ ಕೊಕಾಟೆ ಅವರಿಗೆ ಬಿಸಿ ಮುಟ್ಟಿಸಲಾಗಿದೆ.</p>.ರಮ್ಮಿ ಆಡುತ್ತಿದ್ದ ಸಚಿವ ಮಾಣಿಕರಾವ್ ಕೊಕಾಟೆ ತಕ್ಷಣ ರಾಜೀನಾಮೆ ನೀಡಲಿ: ಸುಪ್ರಿಯಾ.ರಮ್ಮಿ ಆಡಿ ‘ಮಹಾ’ ಸರ್ಕಾರವನ್ನೇ ಭಿಕ್ಷುಕ ಎಂದ ಸಚಿವರ ಭವಿಷ್ಯ ಶೀಘ್ರವೇ ನಿರ್ಧಾರ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇತ್ತೀಚೆಗೆ ಮೊಬೈಲ್ನಲ್ಲಿ ಆನ್ಲೈನ್ ರಮ್ಮಿ ಆಟವಾಡಿ ವಿವಾದಕ್ಕೆ ಒಳಗಾಗಿದ್ದ ಮಹಾರಾಷ್ಟ್ರ ಕೃಷಿ ಸಚಿವ ಮಾಣಿಕರಾವ್ ಕೊಕಾಟೆ ಅವರ ಖಾತೆಯನ್ನು ಬದಲಾಯಿಸಲಾಗಿದೆ.</p><p>ಗುರುವಾರ ರಾತ್ರಿ ನಡೆದ ಸಂಪುಟ ಪುನರ್ ರಚನೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.</p><p>ಮಾಣಿಕರಾವ್ ಕೊಕಾಟೆ ಅವರಿಗೆ ಕೃಷಿ ಖಾತೆ ಬದಲಿಗೆ ಯುವ ಸಬಲೀಕರಣ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಯುವ ಸಬಲೀಕರಣ ಇಲಾಖೆಯ ಸಚಿವರಾಗಿದ್ದ ದತ್ತಾತ್ರೇಯ ಭರ್ಣೆ ಅವರಿಗೆ ಕೃಷಿ ಖಾತೆ ಒದಗಿಸಲಾಗಿದೆ.</p><p>ಈ ಇಬ್ಬರೂ ಸಚಿವರು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಶಾಸಕರಾಗಿದ್ದಾರೆ.</p>.<p>ಕಳೆದ ಜುಲೈ 20 ರಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ರೈತರ ಸಮಸ್ಯೆಗಳ ಚರ್ಚೆ ವೇಳೆ ಕೊಕಾಟೆ ಅವರು ತಮ್ಮ ಮೊಬೈಲ್ನಲ್ಲಿ ರಮ್ಮಿ ಆಡಿದ್ದರು ಎಂದು ಆರೋಪಿಸಲಾಗಿತ್ತು. ಇದರಿಂದ ಸರ್ಕಾರಕ್ಕೆ ತೀವ್ರ ಮುಜುಗರವಾಗಿತ್ತು.</p><p>ಕೊಕಾಟೆ ಅವರು ಅಧಿವೇಶನ ನಡೆಯುವಾಗ ಮೊಬೈಲ್ನಲ್ಲಿ ‘ರಮ್ಮಿ’ ಆಡುತ್ತಿದ್ದ ಬಗ್ಗೆ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ತನಿಖೆಗೂ ಅದೇಶಿಸಿದ್ದರು. ಆದರೆ, ತಾನು ಮೊಬೈಲ್ ನೋಡುವಾಗ ರಮ್ಮಿ ಜಾಹೀರಾತು ಬಂದಿತ್ತು ಎಂದು ಕೊಕಾಟೆ ಸ್ಪಷ್ಟನೆ ನೀಡಿದ್ದರು.</p><p>ಮಾಣಿಕರಾವ್ ಕೊಕಾಟೆ ಅವರನ್ನು ಸಂಪುಟದಿಂದ ಕೈಬಿಡುವಂತೆ ವಿಪಕ್ಷಗಳ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಕೂಟ ಆಗ್ರಹಿಸಿತ್ತು. ಆದರೆ ಖಾತೆ ಮಾತ್ರ ಬದಲಾವಣೆ ಮಾಡಿ ಕೊಕಾಟೆ ಅವರಿಗೆ ಬಿಸಿ ಮುಟ್ಟಿಸಲಾಗಿದೆ.</p>.ರಮ್ಮಿ ಆಡುತ್ತಿದ್ದ ಸಚಿವ ಮಾಣಿಕರಾವ್ ಕೊಕಾಟೆ ತಕ್ಷಣ ರಾಜೀನಾಮೆ ನೀಡಲಿ: ಸುಪ್ರಿಯಾ.ರಮ್ಮಿ ಆಡಿ ‘ಮಹಾ’ ಸರ್ಕಾರವನ್ನೇ ಭಿಕ್ಷುಕ ಎಂದ ಸಚಿವರ ಭವಿಷ್ಯ ಶೀಘ್ರವೇ ನಿರ್ಧಾರ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>