<p><strong>ಮುಂಬೈ:</strong> ‘ಒಂದೆಡೆ ರಾಜ್ಯದಲ್ಲಿ ನಿತ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ, ಇನ್ನೊಂದೆಡೆ ಕೃಷಿ ಸಚಿವರು ಅಧಿವೇಶನದಲ್ಲಿಯೇ ಮೊಬೈಲ್ನಲ್ಲಿ ಆನ್ಲೈನ್ ಆಟವಾಡುವುದರಲ್ಲಿ ತಲ್ಲೀನರಾಗಿದ್ದಾರೆ’ ಎಂದು ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ ಸಪ್ಕಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಮಹಾರಾಷ್ಟ್ರದಲ್ಲಿ ನಿತ್ಯ ಆರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದನ್ನು ನಿರ್ಲಕ್ಷಿಸಿ, ಶಾಸನಭೆಯಲ್ಲಿ ಆನ್ಲೈನ್ ಆಟವಾಡುತ್ತಿದ್ದ ಕೃಷಿ ಸಚಿವ ಮಾಣಿಕರಾವ್ ಕೊಕಾಟೆ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<p>‘ಸಚಿವರ ವರ್ತನೆಯನ್ನು ಪ್ರಶ್ನಿಸುವ ಜನರ ಮೇಲೆ ಆಡಳಿತ ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸುತ್ತಿರುವುದು ಖಂಡನೀಯ. ಅದು ಅವರ ಉದ್ಧಟತನದ ವರ್ತನೆಯಾಗಿದೆ’ ಎಂದು ಅವರು ಕಿಡಿಕಾರಿದರು.</p>.<p>‘ಕೃಷಿ ಸಚಿವರು ಹಿಂದೆ ರೈತರನ್ನು ಭಿಕ್ಷುಕರು ಎಂದು ಕರೆದು ಅವಮಾನಸಿದ್ದರು. ಅಲ್ಲದೆ ಸಾಲ ಮನ್ನಾದ ಮೊತ್ತವನ್ನು ರೈತರು ವಿವಾಹ ಕಾರ್ಯಗಳಿಗೆ ಖರ್ಚು ಮಾಡುತ್ತಾರೆ ಎಂದೂ ಜರೆದಿದ್ದರು. ಅಷ್ಟು ಸಾಲದು ಎಂಬಂತೆ ಈಗ ಶಾಸನಸಭೆಯಲ್ಲಿ ಆನ್ಲೈನ್ ಆಟದಲ್ಲಿ ತಲ್ಲೀನರಾಗಿದ್ದಾರೆ. ಇವರ ಈ ವರ್ತನೆಯನ್ನು ಪ್ರಶ್ನಿಸಿ, ಪ್ರತಿಭಟಿಸುವುದರಲ್ಲಿ ಏನು ತಪ್ಪಿದೆ’ ಎಂದು ಸಪ್ಕಲ್ ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ. </p>.<p>‘ರಾಜ್ಯದಲ್ಲಿ ಪ್ರಜಾಪ್ರಭುತ್ವ ಇಲ್ಲ, ಬದಲಿಗೆ ಗಲಭೆ ನಡೆಸುವ ಗುಂಪಿನ ಆಡಳಿತ ನಡೆಯುತ್ತಿದೆ. ಶಾಸಕರಷ್ಟೇ ಅಲ್ಲ ಸಚಿವರು ಮತ್ತು ಆ ಪಕ್ಷಗಳ ಪದಾಧಿಕಾರಿಗಳು ಸಹ ಅಹಂಕಾರದಿಂದ ನಡೆದುಕೊಳ್ಳುತ್ತಿದ್ದಾರೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಗಮನ ಹರಿಸಿ, ಕ್ರಮ ತೆಗೆದುಕೊಳ್ಳುವ ಧೈರ್ಯ ತೋರಬೇಕು ಎಂದು ಅವರು ಹೇಳಿದ್ದಾರೆ. </p>.<p><strong>ಏನಿದು ಪ್ರಕರಣ: </strong>ಕೃಷಿ ಸಚಿವ ಮಾಣಿಕರಾವ್ ಕೊಕಾಟೆ ಅವರು ಮುಂಗಾರು ಅಧಿವೇಶನದಲ್ಲಿ ಸದನದೊಳಗೆ ಕಲಾಪದ ಅವಧಿಯಲ್ಲಿ ಆನ್ಲೈನ್ ರಮ್ಮಿ ಆಡುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿತ್ತು. ಈ ಕುರಿತು ವಿವಿಧ ಪಕ್ಷಗಳ ನಾಯಕರು ಮತ್ತು ಸಾರ್ವಜನಿಕರಿಗೆ ತೀವ್ರ ಟೀಕೆ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಕೊಕಟೆ ಅವರು, ‘ತನ್ನ ಮೊಬೈಲ್ನಲ್ಲಿ ಇದ್ದಕ್ಕಿದ್ದಂತೆ ಆನ್ಲೈನ್ ಆಟವೊಂದು ಡೌನ್ಲೋಡ್ ಆಗುತ್ತಿತ್ತು. ಅದನ್ನು ತಡೆಯಲು ನಾನು ಪ್ರಯತ್ನಿಸುತ್ತಿದ್ದೆ’ ಎಂದು ಹೇಳಿದ್ದರು.</p>.<div><blockquote>ಕೃಷಿ ಸಚಿವರ ಹಿಂದಿನ ಹೇಳಿಕೆಗಳು ಮತ್ತು ಈಚಿನ ನಡವಳಿಕೆಗಳನ್ನು ಎನ್ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅವರು ಗಂಭೀರವಾಗಿ ಪರಿಗಣಿಸಿದ್ದು ಸ್ಪಷ್ಟ ಸೂಚನೆಗಳನ್ನು ನೀಡಲಿದ್ದಾರೆ </blockquote><span class="attribution">–ಸುನಿಲ್ ತತ್ಕರೆ, ಎನ್ಸಿಪಿ ಹಿರಿಯ ನಾಯಕ </span></div>.<p><strong>ಯುವ ಘಟಕದ ಅಧ್ಯಕ್ಷರ ರಾಜೀನಾಮೆ ಕೇಳಿದ ಪವಾರ್ </strong></p><p><strong>ಮುಂಬೈ:</strong> ಮಹಾರಾಷ್ಟ್ರದ ಕೃಷಿ ಸಚಿವ ಮಾಣಿಕರಾವ್ ಕೊಕಾಟೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟಿಸಿದ ಛಾವಾ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಎನ್ಸಿಪಿ ನಾಯಕರು ಮತ್ತು ಕಾರ್ಯಕರ್ತರ ಕ್ರಮವನ್ನು ಎನ್ಸಿಪಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಗಂಭೀರವಾಗಿ ತೆಗೆದುಕೊಂಡಿದ್ದಾರೆ. </p><p>ಈ ಘಟನೆ ಬೆನ್ನಲ್ಲೇ ಅಜಿತ್ ಪವಾರ್ ಅವರು ಎನ್ಸಿಪಿಯ ಯುವ ಘಟಕದ ಅಧ್ಯಕ್ಷ ಸೂರಜ್ ಚವಾಣ್ ಅವರಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವಂತೆ ಅವರು ಸೋಮವಾರ ಸೂಚಿಸಿದ್ದಾರೆ. </p><p>‘ಚವಾಣ್ ಅವರ ನಡವಳಿಕೆಯು ಪಕ್ಷದ ಮೌಲ್ಯಗಳಿಗೆ ವಿರುದ್ಧವಾಗಿದ್ದು ಅದನ್ನು ಸಹಿಸಲು ಆಗುವುದಿಲ್ಲ. ಭಾನುವಾರದ ಘಟನೆ ಖಂಡನೀಯವಾಗಿದ್ದು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.ಮಹಾರಾಷ್ಟ್ರ ವಿಧಾನಸಭೆಯಲ್ಲಿ ರೈತರ ಸಮಸ್ಯೆ ಚರ್ಚೆ ವೇಳೆ ರಮ್ಮಿ ಆಡಿದ ಕೃಷಿ ಸಚಿವ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಒಂದೆಡೆ ರಾಜ್ಯದಲ್ಲಿ ನಿತ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ, ಇನ್ನೊಂದೆಡೆ ಕೃಷಿ ಸಚಿವರು ಅಧಿವೇಶನದಲ್ಲಿಯೇ ಮೊಬೈಲ್ನಲ್ಲಿ ಆನ್ಲೈನ್ ಆಟವಾಡುವುದರಲ್ಲಿ ತಲ್ಲೀನರಾಗಿದ್ದಾರೆ’ ಎಂದು ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ ಸಪ್ಕಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಮಹಾರಾಷ್ಟ್ರದಲ್ಲಿ ನಿತ್ಯ ಆರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದನ್ನು ನಿರ್ಲಕ್ಷಿಸಿ, ಶಾಸನಭೆಯಲ್ಲಿ ಆನ್ಲೈನ್ ಆಟವಾಡುತ್ತಿದ್ದ ಕೃಷಿ ಸಚಿವ ಮಾಣಿಕರಾವ್ ಕೊಕಾಟೆ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<p>‘ಸಚಿವರ ವರ್ತನೆಯನ್ನು ಪ್ರಶ್ನಿಸುವ ಜನರ ಮೇಲೆ ಆಡಳಿತ ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸುತ್ತಿರುವುದು ಖಂಡನೀಯ. ಅದು ಅವರ ಉದ್ಧಟತನದ ವರ್ತನೆಯಾಗಿದೆ’ ಎಂದು ಅವರು ಕಿಡಿಕಾರಿದರು.</p>.<p>‘ಕೃಷಿ ಸಚಿವರು ಹಿಂದೆ ರೈತರನ್ನು ಭಿಕ್ಷುಕರು ಎಂದು ಕರೆದು ಅವಮಾನಸಿದ್ದರು. ಅಲ್ಲದೆ ಸಾಲ ಮನ್ನಾದ ಮೊತ್ತವನ್ನು ರೈತರು ವಿವಾಹ ಕಾರ್ಯಗಳಿಗೆ ಖರ್ಚು ಮಾಡುತ್ತಾರೆ ಎಂದೂ ಜರೆದಿದ್ದರು. ಅಷ್ಟು ಸಾಲದು ಎಂಬಂತೆ ಈಗ ಶಾಸನಸಭೆಯಲ್ಲಿ ಆನ್ಲೈನ್ ಆಟದಲ್ಲಿ ತಲ್ಲೀನರಾಗಿದ್ದಾರೆ. ಇವರ ಈ ವರ್ತನೆಯನ್ನು ಪ್ರಶ್ನಿಸಿ, ಪ್ರತಿಭಟಿಸುವುದರಲ್ಲಿ ಏನು ತಪ್ಪಿದೆ’ ಎಂದು ಸಪ್ಕಲ್ ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ. </p>.<p>‘ರಾಜ್ಯದಲ್ಲಿ ಪ್ರಜಾಪ್ರಭುತ್ವ ಇಲ್ಲ, ಬದಲಿಗೆ ಗಲಭೆ ನಡೆಸುವ ಗುಂಪಿನ ಆಡಳಿತ ನಡೆಯುತ್ತಿದೆ. ಶಾಸಕರಷ್ಟೇ ಅಲ್ಲ ಸಚಿವರು ಮತ್ತು ಆ ಪಕ್ಷಗಳ ಪದಾಧಿಕಾರಿಗಳು ಸಹ ಅಹಂಕಾರದಿಂದ ನಡೆದುಕೊಳ್ಳುತ್ತಿದ್ದಾರೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಗಮನ ಹರಿಸಿ, ಕ್ರಮ ತೆಗೆದುಕೊಳ್ಳುವ ಧೈರ್ಯ ತೋರಬೇಕು ಎಂದು ಅವರು ಹೇಳಿದ್ದಾರೆ. </p>.<p><strong>ಏನಿದು ಪ್ರಕರಣ: </strong>ಕೃಷಿ ಸಚಿವ ಮಾಣಿಕರಾವ್ ಕೊಕಾಟೆ ಅವರು ಮುಂಗಾರು ಅಧಿವೇಶನದಲ್ಲಿ ಸದನದೊಳಗೆ ಕಲಾಪದ ಅವಧಿಯಲ್ಲಿ ಆನ್ಲೈನ್ ರಮ್ಮಿ ಆಡುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿತ್ತು. ಈ ಕುರಿತು ವಿವಿಧ ಪಕ್ಷಗಳ ನಾಯಕರು ಮತ್ತು ಸಾರ್ವಜನಿಕರಿಗೆ ತೀವ್ರ ಟೀಕೆ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಕೊಕಟೆ ಅವರು, ‘ತನ್ನ ಮೊಬೈಲ್ನಲ್ಲಿ ಇದ್ದಕ್ಕಿದ್ದಂತೆ ಆನ್ಲೈನ್ ಆಟವೊಂದು ಡೌನ್ಲೋಡ್ ಆಗುತ್ತಿತ್ತು. ಅದನ್ನು ತಡೆಯಲು ನಾನು ಪ್ರಯತ್ನಿಸುತ್ತಿದ್ದೆ’ ಎಂದು ಹೇಳಿದ್ದರು.</p>.<div><blockquote>ಕೃಷಿ ಸಚಿವರ ಹಿಂದಿನ ಹೇಳಿಕೆಗಳು ಮತ್ತು ಈಚಿನ ನಡವಳಿಕೆಗಳನ್ನು ಎನ್ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅವರು ಗಂಭೀರವಾಗಿ ಪರಿಗಣಿಸಿದ್ದು ಸ್ಪಷ್ಟ ಸೂಚನೆಗಳನ್ನು ನೀಡಲಿದ್ದಾರೆ </blockquote><span class="attribution">–ಸುನಿಲ್ ತತ್ಕರೆ, ಎನ್ಸಿಪಿ ಹಿರಿಯ ನಾಯಕ </span></div>.<p><strong>ಯುವ ಘಟಕದ ಅಧ್ಯಕ್ಷರ ರಾಜೀನಾಮೆ ಕೇಳಿದ ಪವಾರ್ </strong></p><p><strong>ಮುಂಬೈ:</strong> ಮಹಾರಾಷ್ಟ್ರದ ಕೃಷಿ ಸಚಿವ ಮಾಣಿಕರಾವ್ ಕೊಕಾಟೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟಿಸಿದ ಛಾವಾ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಎನ್ಸಿಪಿ ನಾಯಕರು ಮತ್ತು ಕಾರ್ಯಕರ್ತರ ಕ್ರಮವನ್ನು ಎನ್ಸಿಪಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಗಂಭೀರವಾಗಿ ತೆಗೆದುಕೊಂಡಿದ್ದಾರೆ. </p><p>ಈ ಘಟನೆ ಬೆನ್ನಲ್ಲೇ ಅಜಿತ್ ಪವಾರ್ ಅವರು ಎನ್ಸಿಪಿಯ ಯುವ ಘಟಕದ ಅಧ್ಯಕ್ಷ ಸೂರಜ್ ಚವಾಣ್ ಅವರಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವಂತೆ ಅವರು ಸೋಮವಾರ ಸೂಚಿಸಿದ್ದಾರೆ. </p><p>‘ಚವಾಣ್ ಅವರ ನಡವಳಿಕೆಯು ಪಕ್ಷದ ಮೌಲ್ಯಗಳಿಗೆ ವಿರುದ್ಧವಾಗಿದ್ದು ಅದನ್ನು ಸಹಿಸಲು ಆಗುವುದಿಲ್ಲ. ಭಾನುವಾರದ ಘಟನೆ ಖಂಡನೀಯವಾಗಿದ್ದು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.ಮಹಾರಾಷ್ಟ್ರ ವಿಧಾನಸಭೆಯಲ್ಲಿ ರೈತರ ಸಮಸ್ಯೆ ಚರ್ಚೆ ವೇಳೆ ರಮ್ಮಿ ಆಡಿದ ಕೃಷಿ ಸಚಿವ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>