<p><strong>ನಾಗ್ಪುರ</strong>: ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಸಚಿವ ಸಂಪುಟ ವಿಸ್ತರಿಸಿದ್ದು, ಭಾನುವಾರ 39 ಸಚಿವರು ಪ್ರಮಾಣವಚನ ಸ್ವೀಕರಿಸಿದರು. </p><p>1991ರ ನಂತರ ಇದೇ ಮೊದಲ ಬಾರಿಗೆ ಭಾನುವಾರ ನಾಗ್ಪುರ ರಾಜಭವನದಲ್ಲಿ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.</p><p>ಬಿಜೆಪಿಯ 19, ಏಕನಾಥ ಶಿಂದೆ ನೇತೃತ್ವದ ಶಿವಸೇನಾ 11 ಮತ್ತು ಅಜಿತ್ ಪವಾರ್ ನೇತೃತ್ವದ 9 ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದರು. ಈ ಪೈಕಿ 33 ಜನ ಸಂಪುಟ ಸಚಿವರಾಗಿ ಮತ್ತು 6 ಜನ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. </p><p>ರಾಜ್ಯಪಾಲ ಪಿ.ಸಿ ರಾಧಾಕೃಷ್ಣನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನ ಸೋಮವಾರದಿಂದ (ಡಿ.16–21) ಆರಂಭವಾಗಲಿದೆ. </p><p>ಡಿ.5 ರಂದು ಮುಖ್ಯಮಂತ್ರಿಯಾಗಿ ದೇವೇಂದ್ರ ಫಡವೀಸ್ ಹಾಗೂ ಏಕನಾಥ ಶಿಂದೆ ಮತ್ತು ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಹೊಸ ಸಂಪುಟದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾನ್ಕುಲೆ ಮತ್ತು ಮುಂಬೈ ಬಿಜೆಪಿ ಅಧ್ಯಕ್ಷ ಆಶೀಶ್ ಶೆಲಾರ್ ಕೂಡ ಸೇರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ</strong>: ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಸಚಿವ ಸಂಪುಟ ವಿಸ್ತರಿಸಿದ್ದು, ಭಾನುವಾರ 39 ಸಚಿವರು ಪ್ರಮಾಣವಚನ ಸ್ವೀಕರಿಸಿದರು. </p><p>1991ರ ನಂತರ ಇದೇ ಮೊದಲ ಬಾರಿಗೆ ಭಾನುವಾರ ನಾಗ್ಪುರ ರಾಜಭವನದಲ್ಲಿ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.</p><p>ಬಿಜೆಪಿಯ 19, ಏಕನಾಥ ಶಿಂದೆ ನೇತೃತ್ವದ ಶಿವಸೇನಾ 11 ಮತ್ತು ಅಜಿತ್ ಪವಾರ್ ನೇತೃತ್ವದ 9 ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದರು. ಈ ಪೈಕಿ 33 ಜನ ಸಂಪುಟ ಸಚಿವರಾಗಿ ಮತ್ತು 6 ಜನ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. </p><p>ರಾಜ್ಯಪಾಲ ಪಿ.ಸಿ ರಾಧಾಕೃಷ್ಣನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನ ಸೋಮವಾರದಿಂದ (ಡಿ.16–21) ಆರಂಭವಾಗಲಿದೆ. </p><p>ಡಿ.5 ರಂದು ಮುಖ್ಯಮಂತ್ರಿಯಾಗಿ ದೇವೇಂದ್ರ ಫಡವೀಸ್ ಹಾಗೂ ಏಕನಾಥ ಶಿಂದೆ ಮತ್ತು ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಹೊಸ ಸಂಪುಟದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾನ್ಕುಲೆ ಮತ್ತು ಮುಂಬೈ ಬಿಜೆಪಿ ಅಧ್ಯಕ್ಷ ಆಶೀಶ್ ಶೆಲಾರ್ ಕೂಡ ಸೇರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>