<p><strong>ಮುಂಬೈ:</strong> ಮಹಾರಾಷ್ಟ್ರ ವಿಧಾನಮಂಡಲದ ಮುಂಗಾರು ಅಧಿವೇಶನ ಇದೇ 7ರಿಂದ ಆರಂಭವಾಗಲಿದೆ. ಕೋವಿಡ್–19 ವ್ಯಾಪಕವಾಗಿ ಹರಡುತ್ತಿರುವ ಕಾರಣ ಅಧಿವೇಶನವನ್ನು ಎರಡು ದಿನಕ್ಕೆ ಸೀಮಿತಗೊಳಿಸಲಾಗಿದೆ.</p>.<p>ಮಹಾರಾಷ್ಟ್ರ ಶಾಸಕಾಂಗದ ಇತಿಹಾಸದಲ್ಲಿ ಅತಿ ಕಡಿಮೆ ಅವಧಿಯ ಮುಂಗಾರು ಅಧಿವೇಶನ ಇದಾಗಿದೆ. ರಾಜ್ಯದಲ್ಲಿ 8.43 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ.</p>.<p>ಕೋವಿಡ್ ಮಾರ್ಗಸೂಚಿಗಳಿಗೆ ಅನ್ವಯವಾಗಿ ಅಧಿವೇಶವನ್ನು ಸುಸೂತ್ರವಾಗಿ ನಡೆಸಲು ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.</p>.<p>ಅಧಿವೇಶನಕ್ಕೆ ಬರುವ ಶಾಸಕರಿಗೆ ಆ್ಯಂಟಿಜನ್ ಟೆಸ್ಟ್ ಕಡ್ಡಾಯ, ಕೋವಿಡ್ ಕಿಟ್ ವಿತರಣೆ, ಶಾಸಕರ ನಡುವೆ ಪರಸ್ಪರ ಅಂತರ ಕಾಯ್ದುಕೊಳ್ಳುವುದಕ್ಕೆ ಪೂರಕವಾಗಿ ಹೊಸ ರೀತಿಯಲ್ಲಿ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ವಿಧಾನಭವನದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪ ಇರುವುದಿಲ್ಲ. ಪೂರಕ ಅಂದಾಜು ಬೇಡಿಕೆ ಮತ್ತು ಕೆಲ ಮಸೂದೆಗಳ ಮಂಡನೆಗೆ ಅವಕಾಶ ಇರುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಬ್ ಹೇಳಿದ್ದಾರೆ.</p>.<p>ಕಳೆದ ವರ್ಷ ನವೆಂಬರ್ನಲ್ಲಿ ಅಧಿಕಾರ ವಹಿಸಿಕೊಂಡ ಶಿವಸೇನೆ ನೇತೃತ್ವದ ಎಂವಿಎ ಸರ್ಕಾರದ ಮೊದಲ ಮುಂಗಾರು ಅಧಿವೇಶನ ಇದಾಗಿದೆ.ಈ ಮೊದಲು ಜೂನ್ 22ರಂದು ಅಧಿವೇಶನದ ದಿನಾಂಕ ನಿಗದಿಪಡಿಸಲಾಗಿತ್ತು. ಕೋವಿಡ್ ಕಾರಣದಿಂದ ದಿನಾಂಕವನ್ನು ಎರಡು ಬಾರಿ ಮುಂದೂಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರ ವಿಧಾನಮಂಡಲದ ಮುಂಗಾರು ಅಧಿವೇಶನ ಇದೇ 7ರಿಂದ ಆರಂಭವಾಗಲಿದೆ. ಕೋವಿಡ್–19 ವ್ಯಾಪಕವಾಗಿ ಹರಡುತ್ತಿರುವ ಕಾರಣ ಅಧಿವೇಶನವನ್ನು ಎರಡು ದಿನಕ್ಕೆ ಸೀಮಿತಗೊಳಿಸಲಾಗಿದೆ.</p>.<p>ಮಹಾರಾಷ್ಟ್ರ ಶಾಸಕಾಂಗದ ಇತಿಹಾಸದಲ್ಲಿ ಅತಿ ಕಡಿಮೆ ಅವಧಿಯ ಮುಂಗಾರು ಅಧಿವೇಶನ ಇದಾಗಿದೆ. ರಾಜ್ಯದಲ್ಲಿ 8.43 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ.</p>.<p>ಕೋವಿಡ್ ಮಾರ್ಗಸೂಚಿಗಳಿಗೆ ಅನ್ವಯವಾಗಿ ಅಧಿವೇಶವನ್ನು ಸುಸೂತ್ರವಾಗಿ ನಡೆಸಲು ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.</p>.<p>ಅಧಿವೇಶನಕ್ಕೆ ಬರುವ ಶಾಸಕರಿಗೆ ಆ್ಯಂಟಿಜನ್ ಟೆಸ್ಟ್ ಕಡ್ಡಾಯ, ಕೋವಿಡ್ ಕಿಟ್ ವಿತರಣೆ, ಶಾಸಕರ ನಡುವೆ ಪರಸ್ಪರ ಅಂತರ ಕಾಯ್ದುಕೊಳ್ಳುವುದಕ್ಕೆ ಪೂರಕವಾಗಿ ಹೊಸ ರೀತಿಯಲ್ಲಿ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ವಿಧಾನಭವನದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪ ಇರುವುದಿಲ್ಲ. ಪೂರಕ ಅಂದಾಜು ಬೇಡಿಕೆ ಮತ್ತು ಕೆಲ ಮಸೂದೆಗಳ ಮಂಡನೆಗೆ ಅವಕಾಶ ಇರುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಬ್ ಹೇಳಿದ್ದಾರೆ.</p>.<p>ಕಳೆದ ವರ್ಷ ನವೆಂಬರ್ನಲ್ಲಿ ಅಧಿಕಾರ ವಹಿಸಿಕೊಂಡ ಶಿವಸೇನೆ ನೇತೃತ್ವದ ಎಂವಿಎ ಸರ್ಕಾರದ ಮೊದಲ ಮುಂಗಾರು ಅಧಿವೇಶನ ಇದಾಗಿದೆ.ಈ ಮೊದಲು ಜೂನ್ 22ರಂದು ಅಧಿವೇಶನದ ದಿನಾಂಕ ನಿಗದಿಪಡಿಸಲಾಗಿತ್ತು. ಕೋವಿಡ್ ಕಾರಣದಿಂದ ದಿನಾಂಕವನ್ನು ಎರಡು ಬಾರಿ ಮುಂದೂಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>