<p><strong>ಮುಂಬೈ:</strong> ಫಲಾನುಭವಿಗಳಿಗೆ ನಗದು ನೀಡುವ ಯೋಜನೆಗಳನ್ನು ರದ್ದುಗೊಳಿಸುವಂತೆ ಕೋರಿ ನವಿ ಮುಂಬೈನ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರು, ಬಾಂಬೆ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದ್ದಾರೆ. </p>.<p>ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ‘ಮಹಾ ಯುತಿ’ ಮೈತ್ರಿ ಸರ್ಕಾರವು ತನ್ನ ಮಹತ್ವದ ಯೋಜನೆ ‘ಮುಖ್ಯಮಂತ್ರಿ ಲಡ್ಕಿ ಬಹಿನ್ (ಪ್ರೀತಿಯ ಸಹೋದರಿ)’ ಬಗ್ಗೆ ಅಬ್ಬರದ ಪ್ರಚಾರ ನಡೆಸುತ್ತಿರುವಾಗಲೇ ಈ ಬೆಳವಣಿಗೆ ನಡೆದಿದೆ.</p>.<p>ಆದಾಗ್ಯೂ, ನ್ಯಾಯಾಲಯವು ಯೋಜನೆಯನ್ನು ತಡೆಹಿಡಿಯಲು ನಿರಾಕರಿಸಿದೆ. ಆದರೆ, ಈ ಅರ್ಜಿಯ ಮುಂದಿನ ವಿಚಾರಣೆಯನ್ನು ಇದೇ 6ಕ್ಕೆ ಮುಂದೂಡಿದೆ. </p>.<p>2024-25ರ ಸಾಲಿನ ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಲಡ್ಕಿ ಬಹಿನ್ ಯೋಜನೆ (ಮುಖ್ಯಮಂತ್ರಿಗಳ ಪ್ರೀತಿಯ ಸಹೋದರಿ ಯೋಜನೆ) ಮತ್ತು ಮುಖ್ಯಮಂತ್ರಿ ಯುವ ಕಾರ್ಯ ಪ್ರಶಿಕ್ಷಣ ಯೋಜನೆ (ಮುಖ್ಯಮಂತ್ರಿಗಳ ಯುವ ಉದ್ಯೋಗ ಕೌಶಲ ತರಬೇತಿ ಯೋಜನೆ) ಘೋಷಿಸಲಾಗಿದೆ.</p>.<p>ಇದರಿಂದ ತೆರಿಗೆದಾರರು ಮತ್ತು ಬೊಕ್ಕಸಕ್ಕೆ ಹೆಚ್ಚುವರಿ ಹೊರೆ ಬೀಳಲಿದೆ. ರಾಜ್ಯದ ಸಾಲವು ಈಗಾಗಲೇ ₹7.8 ಲಕ್ಷ ಕೋಟಿಗೆ ಏರಿಕೆಯಾಗಿದೆ. ಇದು ಬೊಕ್ಕಸಕ್ಕೆ ಮತ್ತಷ್ಟು ಹೊರೆ ಉಂಟುಮಾಡಲಿದೆ ಎಂದು ಅರ್ಜಿದಾರ ನವೀದ್ ಅಬ್ದುಲ್ ಸಯೀದ್ ಮುಲ್ಲಾ ಪ್ರತಿಪಾದಿಸಿದ್ದಾರೆ.</p>.<p>‘ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ, ಪ್ರಸ್ತುತ ಸಮ್ಮಿಶ್ರ ಸರ್ಕಾರದ ಪಕ್ಷಗಳ ಕೆಲವು ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಲು ನಿರ್ದಿಷ್ಟ ವರ್ಗದ ಮತದಾರರಿಗೆ ಇಂತಹ ನಗದು ಲಾಭ ಯೋಜನೆಗಳು ಲಂಚ ಅಥವಾ ಉಡುಗೊರೆಗೆ ಸಮಾನಾರ್ಥಕವಾಗಿದೆ’ ಎಂದು ಅರ್ಜಿದಾರರು ವಾದಿಸಿದ್ದಾರೆ. </p>.<p>ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ಅಮಿತ್ ಬೋರ್ಕರ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಕೀಲ ಓವೈಸ್ ಪೆಚ್ಕರ್ ಅವರು ಈ ಪಿಐಎಲ್ ಅನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಫಲಾನುಭವಿಗಳಿಗೆ ನಗದು ನೀಡುವ ಯೋಜನೆಗಳನ್ನು ರದ್ದುಗೊಳಿಸುವಂತೆ ಕೋರಿ ನವಿ ಮುಂಬೈನ ಚಾರ್ಟರ್ಡ್ ಅಕೌಂಟೆಂಟ್ ಒಬ್ಬರು, ಬಾಂಬೆ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದ್ದಾರೆ. </p>.<p>ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ‘ಮಹಾ ಯುತಿ’ ಮೈತ್ರಿ ಸರ್ಕಾರವು ತನ್ನ ಮಹತ್ವದ ಯೋಜನೆ ‘ಮುಖ್ಯಮಂತ್ರಿ ಲಡ್ಕಿ ಬಹಿನ್ (ಪ್ರೀತಿಯ ಸಹೋದರಿ)’ ಬಗ್ಗೆ ಅಬ್ಬರದ ಪ್ರಚಾರ ನಡೆಸುತ್ತಿರುವಾಗಲೇ ಈ ಬೆಳವಣಿಗೆ ನಡೆದಿದೆ.</p>.<p>ಆದಾಗ್ಯೂ, ನ್ಯಾಯಾಲಯವು ಯೋಜನೆಯನ್ನು ತಡೆಹಿಡಿಯಲು ನಿರಾಕರಿಸಿದೆ. ಆದರೆ, ಈ ಅರ್ಜಿಯ ಮುಂದಿನ ವಿಚಾರಣೆಯನ್ನು ಇದೇ 6ಕ್ಕೆ ಮುಂದೂಡಿದೆ. </p>.<p>2024-25ರ ಸಾಲಿನ ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಲಡ್ಕಿ ಬಹಿನ್ ಯೋಜನೆ (ಮುಖ್ಯಮಂತ್ರಿಗಳ ಪ್ರೀತಿಯ ಸಹೋದರಿ ಯೋಜನೆ) ಮತ್ತು ಮುಖ್ಯಮಂತ್ರಿ ಯುವ ಕಾರ್ಯ ಪ್ರಶಿಕ್ಷಣ ಯೋಜನೆ (ಮುಖ್ಯಮಂತ್ರಿಗಳ ಯುವ ಉದ್ಯೋಗ ಕೌಶಲ ತರಬೇತಿ ಯೋಜನೆ) ಘೋಷಿಸಲಾಗಿದೆ.</p>.<p>ಇದರಿಂದ ತೆರಿಗೆದಾರರು ಮತ್ತು ಬೊಕ್ಕಸಕ್ಕೆ ಹೆಚ್ಚುವರಿ ಹೊರೆ ಬೀಳಲಿದೆ. ರಾಜ್ಯದ ಸಾಲವು ಈಗಾಗಲೇ ₹7.8 ಲಕ್ಷ ಕೋಟಿಗೆ ಏರಿಕೆಯಾಗಿದೆ. ಇದು ಬೊಕ್ಕಸಕ್ಕೆ ಮತ್ತಷ್ಟು ಹೊರೆ ಉಂಟುಮಾಡಲಿದೆ ಎಂದು ಅರ್ಜಿದಾರ ನವೀದ್ ಅಬ್ದುಲ್ ಸಯೀದ್ ಮುಲ್ಲಾ ಪ್ರತಿಪಾದಿಸಿದ್ದಾರೆ.</p>.<p>‘ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ, ಪ್ರಸ್ತುತ ಸಮ್ಮಿಶ್ರ ಸರ್ಕಾರದ ಪಕ್ಷಗಳ ಕೆಲವು ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಲು ನಿರ್ದಿಷ್ಟ ವರ್ಗದ ಮತದಾರರಿಗೆ ಇಂತಹ ನಗದು ಲಾಭ ಯೋಜನೆಗಳು ಲಂಚ ಅಥವಾ ಉಡುಗೊರೆಗೆ ಸಮಾನಾರ್ಥಕವಾಗಿದೆ’ ಎಂದು ಅರ್ಜಿದಾರರು ವಾದಿಸಿದ್ದಾರೆ. </p>.<p>ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ಅಮಿತ್ ಬೋರ್ಕರ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಕೀಲ ಓವೈಸ್ ಪೆಚ್ಕರ್ ಅವರು ಈ ಪಿಐಎಲ್ ಅನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>