<p><strong>ತಿರುವನಂತಪುರ</strong>: ‘ಆಪರೇಷನ್ ಸಿಂಧೂರ’ವನ್ನು ಟೀಕಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ನಾಗ್ಪುರದಲ್ಲಿ ಬಂಧಿಸಲಾಗಿರುವ ಕೊಚ್ಚಿ ಮೂಲದ ವ್ಯಕ್ತಿಯ ಮನೆಯ ಮೇಲೆ ಮಹಾರಾಷ್ಟ್ರ ಪೊಲೀಸರ ತಂಡ ಶೋಧ ಕಾರ್ಯಾಚರಣೆ ನಡೆಸಿದೆ.</p>.<p>ಕೊಚ್ಚಿಯ ಎಡಪ್ಪಲ್ಲಿಯ ರೆಜಾಜ್ ಎಂ ಶೀಬಾ ಸೈದಿಕ್ (26) ಅವರ ನಿವಾಸದ ಮೇಲೆ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ ಭಾನುವಾರ ರಾತ್ರಿ ಶೋಧ ನಡೆಸಿದೆ. ಈ ವೇಳೆ ದೊರೆತ ದಾಖಲೆಗಳು ಮತ್ತು ‘ಗ್ಯಾಜೆಟ್’ಗಳನ್ನು ವಶಕ್ಕೆ ಪಡೆದಿವೆ ಎಂದು ಮೂಲಗಳು ತಿಳಿಸಿವೆ.</p>.<p>ಪತ್ರಕರ್ತ ಮತ್ತು ಸಾಮಾಜಿಕ ಕಾರ್ಯಕರ್ತ ರೆಜಾಜ್ ಅವರನ್ನು ಕಳೆದ ವಾರ ನಾಗ್ಪುರದ ಹೋಟೆಲ್ನಲ್ಲಿ ಪೊಲೀಸರು ಬಂಧಿಸಿದ್ದರು. ರೆಜಾಜ್, ನಕ್ಸಲ್ ಪರ ಸಹಾನುಭೂತಿಯುಳ್ಳ ವ್ಯಕ್ತಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.</p>.<p>ಸರ್ಕಾರದ ವಿರುದ್ಧ ಯುದ್ಧಕ್ಕೆ ಸಿದ್ಧತೆ ನಡೆಸಿದ್ದಕ್ಕಾಗಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 149 ಮತ್ತು ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ಮಾಡಿದ್ದಕ್ಕೆ ಸೆಕ್ಷನ್ 192 ಸೇರಿದಂತೆ ವಿವಿಧ ಅಪರಾಧಗಳಿಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.</p>.<p>ಪಹಲ್ಗಾಮ್ ಭಯೋತ್ಪಾದಕರ ದಾಳಿ ಬಳಿಕ, ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಸಂಬಂಧಿಸಿದ ಮನೆಗಳನ್ನು ತೆರವುಗೊಳಿಸಿದ ಕಾರ್ಯಾಚರಣೆಯನ್ನು ವಿರೋಧಿಸಿ ಪ್ರತಿಭಟಿಸಿದ್ದಕ್ಕಾಗಿ ಕೊಚ್ಚಿಯಲ್ಲಿ ರೆಜಾಜ್ ಮತ್ತು ಇತರರ ವಿರುದ್ಧ ಕಳೆದ ತಿಂಗಳು ಪೊಲೀಸರು ಪ್ರಕರಣ ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ‘ಆಪರೇಷನ್ ಸಿಂಧೂರ’ವನ್ನು ಟೀಕಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ನಾಗ್ಪುರದಲ್ಲಿ ಬಂಧಿಸಲಾಗಿರುವ ಕೊಚ್ಚಿ ಮೂಲದ ವ್ಯಕ್ತಿಯ ಮನೆಯ ಮೇಲೆ ಮಹಾರಾಷ್ಟ್ರ ಪೊಲೀಸರ ತಂಡ ಶೋಧ ಕಾರ್ಯಾಚರಣೆ ನಡೆಸಿದೆ.</p>.<p>ಕೊಚ್ಚಿಯ ಎಡಪ್ಪಲ್ಲಿಯ ರೆಜಾಜ್ ಎಂ ಶೀಬಾ ಸೈದಿಕ್ (26) ಅವರ ನಿವಾಸದ ಮೇಲೆ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ ಭಾನುವಾರ ರಾತ್ರಿ ಶೋಧ ನಡೆಸಿದೆ. ಈ ವೇಳೆ ದೊರೆತ ದಾಖಲೆಗಳು ಮತ್ತು ‘ಗ್ಯಾಜೆಟ್’ಗಳನ್ನು ವಶಕ್ಕೆ ಪಡೆದಿವೆ ಎಂದು ಮೂಲಗಳು ತಿಳಿಸಿವೆ.</p>.<p>ಪತ್ರಕರ್ತ ಮತ್ತು ಸಾಮಾಜಿಕ ಕಾರ್ಯಕರ್ತ ರೆಜಾಜ್ ಅವರನ್ನು ಕಳೆದ ವಾರ ನಾಗ್ಪುರದ ಹೋಟೆಲ್ನಲ್ಲಿ ಪೊಲೀಸರು ಬಂಧಿಸಿದ್ದರು. ರೆಜಾಜ್, ನಕ್ಸಲ್ ಪರ ಸಹಾನುಭೂತಿಯುಳ್ಳ ವ್ಯಕ್ತಿಯಾಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.</p>.<p>ಸರ್ಕಾರದ ವಿರುದ್ಧ ಯುದ್ಧಕ್ಕೆ ಸಿದ್ಧತೆ ನಡೆಸಿದ್ದಕ್ಕಾಗಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 149 ಮತ್ತು ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ಮಾಡಿದ್ದಕ್ಕೆ ಸೆಕ್ಷನ್ 192 ಸೇರಿದಂತೆ ವಿವಿಧ ಅಪರಾಧಗಳಿಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.</p>.<p>ಪಹಲ್ಗಾಮ್ ಭಯೋತ್ಪಾದಕರ ದಾಳಿ ಬಳಿಕ, ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಸಂಬಂಧಿಸಿದ ಮನೆಗಳನ್ನು ತೆರವುಗೊಳಿಸಿದ ಕಾರ್ಯಾಚರಣೆಯನ್ನು ವಿರೋಧಿಸಿ ಪ್ರತಿಭಟಿಸಿದ್ದಕ್ಕಾಗಿ ಕೊಚ್ಚಿಯಲ್ಲಿ ರೆಜಾಜ್ ಮತ್ತು ಇತರರ ವಿರುದ್ಧ ಕಳೆದ ತಿಂಗಳು ಪೊಲೀಸರು ಪ್ರಕರಣ ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>