<p class="title"><strong>ಮುಂಬೈ</strong>: ಸಮರ್ಥ ರಾಮದಾಸ್ ಅವರು ಛತ್ರಪತಿ ಶಿವಾಜಿ ಮಹಾರಾಜರ ಗುರು ಎಂದು ರಾಜ್ಯಪಾಲ ಭಗತ್ಸಿಂಗ್ ಕೋಶ್ಯಾರಿ ಅವರ ಹೇಳಿಕೆಗೆ ಬಿಜೆಪಿ ಸಂಸದ ಉದಯರಾಜೇ ಭೋಸಲೆ ಸೇರಿದಂತೆ ಮಹಾರಾಷ್ಟ್ರದ ಹಲವು ರಾಜಕಾರಣಿಗಳು ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p class="title">ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರಾದ ಭೋಸಲೆ ಅವರು, ‘ಈ ಹೇಳಿಕೆಯು ಶಿವಾಜಿ ಮಹಾರಾಜರ ಅನುಯಾಯಿಗಳು ಮತ್ತು ಇಡೀ ಮಹಾರಾಷ್ಟ್ರದ ಜನರ ಭಾವನೆಗಳಿಗೆ ನೋವುಂಟು ಮಾಡಿದೆ. ತಕ್ಷಣವೇ ಅವರು ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು’ ಎಂದು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.</p>.<p class="title">ಔರಂಗಾಬಾದ್ನಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಕೋಶ್ಯಾರಿ ಅವರು ಈ ಹೇಳಿಕೆ ನೀಡಿದ್ದರು.</p>.<p class="title">‘ರಾಮದಾಸ್ ಅವರು ಶಿವಾಜಿಗೆ ಎಂದಿಗೂ ಗುರುವಾಗಿರಲಿಲ್ಲ. ಶಿವಾಜಿಗೆ ನಿಜವಾದ ಗುರು ಅವರ ತಾಯಿ ರಾಜಮಾತಾ ಜೀಜಾಮಾತಾ ಆಗಿದ್ದರು. ನಿಜವಾದ ಇತಿಹಾಸವನ್ನು ತಿಳಿದುಕೊಂಡು ರಾಜ್ಯಪಾಲರು ಹೇಳಿಕೆ ನೀಡಬೇಕಿತ್ತು’ ಎಂದು ಭೋಸಲೆ ಹೇಳಿದ್ದಾರೆ.</p>.<p class="title">ಶಿವಸೇನಾ ಸಂಸದ ಸಂಜಯ್ ರಾವುತ್ ಅವರು, ರಾಜ್ಯಪಾಲರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಹಾಗೂ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಅವರು ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p class="title"><a href="https://www.prajavani.net/karnataka-news/construction-of-us-model-highway-in-karnataka-union-minister-nitin-gadkari-915058.html" itemprop="url">ಕರ್ನಾಟಕದಲ್ಲಿ ಅಮೆರಿಕ ಮಾದರಿ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ನಿತಿನ್ ಗಡ್ಕರಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ</strong>: ಸಮರ್ಥ ರಾಮದಾಸ್ ಅವರು ಛತ್ರಪತಿ ಶಿವಾಜಿ ಮಹಾರಾಜರ ಗುರು ಎಂದು ರಾಜ್ಯಪಾಲ ಭಗತ್ಸಿಂಗ್ ಕೋಶ್ಯಾರಿ ಅವರ ಹೇಳಿಕೆಗೆ ಬಿಜೆಪಿ ಸಂಸದ ಉದಯರಾಜೇ ಭೋಸಲೆ ಸೇರಿದಂತೆ ಮಹಾರಾಷ್ಟ್ರದ ಹಲವು ರಾಜಕಾರಣಿಗಳು ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p class="title">ಛತ್ರಪತಿ ಶಿವಾಜಿ ಮಹಾರಾಜರ ವಂಶಸ್ಥರಾದ ಭೋಸಲೆ ಅವರು, ‘ಈ ಹೇಳಿಕೆಯು ಶಿವಾಜಿ ಮಹಾರಾಜರ ಅನುಯಾಯಿಗಳು ಮತ್ತು ಇಡೀ ಮಹಾರಾಷ್ಟ್ರದ ಜನರ ಭಾವನೆಗಳಿಗೆ ನೋವುಂಟು ಮಾಡಿದೆ. ತಕ್ಷಣವೇ ಅವರು ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು’ ಎಂದು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.</p>.<p class="title">ಔರಂಗಾಬಾದ್ನಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಕೋಶ್ಯಾರಿ ಅವರು ಈ ಹೇಳಿಕೆ ನೀಡಿದ್ದರು.</p>.<p class="title">‘ರಾಮದಾಸ್ ಅವರು ಶಿವಾಜಿಗೆ ಎಂದಿಗೂ ಗುರುವಾಗಿರಲಿಲ್ಲ. ಶಿವಾಜಿಗೆ ನಿಜವಾದ ಗುರು ಅವರ ತಾಯಿ ರಾಜಮಾತಾ ಜೀಜಾಮಾತಾ ಆಗಿದ್ದರು. ನಿಜವಾದ ಇತಿಹಾಸವನ್ನು ತಿಳಿದುಕೊಂಡು ರಾಜ್ಯಪಾಲರು ಹೇಳಿಕೆ ನೀಡಬೇಕಿತ್ತು’ ಎಂದು ಭೋಸಲೆ ಹೇಳಿದ್ದಾರೆ.</p>.<p class="title">ಶಿವಸೇನಾ ಸಂಸದ ಸಂಜಯ್ ರಾವುತ್ ಅವರು, ರಾಜ್ಯಪಾಲರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಹಾಗೂ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷ ನಾನಾ ಪಟೋಲೆ ಅವರು ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p class="title"><a href="https://www.prajavani.net/karnataka-news/construction-of-us-model-highway-in-karnataka-union-minister-nitin-gadkari-915058.html" itemprop="url">ಕರ್ನಾಟಕದಲ್ಲಿ ಅಮೆರಿಕ ಮಾದರಿ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ನಿತಿನ್ ಗಡ್ಕರಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>