<p><strong>ಮುಂಬೈ:</strong> ಮಹಾರಾಷ್ಟ್ರ ಜನರಿಗೆ ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ನಾಯಕ ಅಜಿತ್ ಪವಾರ್ ಬಹುದೊಡ್ಡ ಶಾಕ್ ಕೊಟ್ಟಿದ್ದಾರೆ.</p><p>ಭಾನುವಾರ ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದೆ. ಇದರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಸಮ್ಮಿಶ್ರ ಸರ್ಕಾರಕ್ಕೆ ತಮ್ಮ ಜೊತೆಯಿರುವ 10ಕ್ಕೂ ಹೆಚ್ಚು ಶಾಸಕರ ಜೊತೆ ಬೆಂಬಲ ನೀಡಿರುವ ಅಜಿತ್ ಪವಾರ್, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.</p><p>ಅಜಿತ್ ಪವಾರ್ ಜೊತೆ ಎನ್ಸಿಪಿ ನಾಯಕ ಛಗನ್ ಭುಜಬಲ್ ಹಾಗೂ ದಿಲೀಪ್ ವಾಲ್ಸೆ, ಧನಂಜಯ್ ಮುಂಡೆ, ಹಸನ್ ಮುಶ್ರಿಫ್, ಧರ್ಮ್ರಾವ್ ಬಾಬಾ, ಆದಿತಿ ತಟಕಾರೆ, ಅನಿಲ್ ಪಾಟೀಲ, ಸಂಜಯ್ ಬನ್ಸೊಡೆ ಸೇರಿ 9 ಎನ್ಸಿಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಮೇಶ್ ಬೈಸ್ ಅವರು ಪ್ರಮಾಣವಚನ ಬೋಧಿಸಿದರು.</p>.<p>ಇನ್ನೊಂದೆಡೆ ಅಜಿತ್ ಪವಾರ್ ಅವರು ತಮಗೆ 40 ಶಾಸಕರ ಬೆಂಬಲ ಇದೆ ಎಂದು ಹೇಳಿಕೊಂಡಿದ್ದಾರೆ.</p><p>ಇದಕ್ಕೂ ಮುನ್ನ ಇದ್ದಕ್ಕಿದ್ದಂತೆ ಭಾನುವಾರ ಬೆಳಿಗ್ಗೆ ಅಜಿತ್ ಪವಾರ್ ಅವರು ಎನ್ಸಿಪಿ ಶಾಸಕರ ಸಭೆ ಕರೆದಿದ್ದರು. ಆ ನಂತರ ಅವರು ಶಿಂದೆ ಸರ್ಕಾರಕ್ಕೆ ಬೆಂಬಲ ನೀಡುವ ಘೋಷಣೆ ಮಾಡಿದರು. ಅಜಿತ್ ಪವಾರ್ ಅವರ ದಿಢೀರ್ ನಿರ್ಧಾರಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.</p><p>ಇತ್ತೀಚೆಗೆ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಅಧ್ಯಕ್ಷ ಸ್ಥಾನ ಬೇಡ ಎಂದು ಹೇಳಿದ್ದರು. ಅದಾದ ನಂತರ ಅಜಿತ್ ಪವಾರ್ ಅವರು ಎನ್ಸಿಪಿಯ ಕಾರ್ಯಾಧ್ಯಕ್ಷರಾಗಿ ಶರದ್ ಅವರಿಗೆ ಅಧ್ಯಕ್ಷರಾಗಿ ಮುಂದುವರೆಯುವಂತೆ ಮನವೊಲಿಸಿದ್ದರು.</p><p>2022 ರ ಜೂನ್ನಲ್ಲಿ ನಡೆದಿದ್ದ ರಾಜಕೀಯ ಬೆಳವಣಿಗೆಗಳಿಂದ ಶಿವಸೇನೆಯ ಏಕನಾಥ್ ಶಿಂದೆ ಅವರು ತಮ್ಮ ಗುಂಪಿನೊಂದಿಗೆ ಎನ್ಸಿಪಿ, ಶಿವಸೇನೆ, ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಕಿತ್ತೊಗೆದು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದರು.</p><p>ಏಕನಾಥ ಶಿಂದೆ ಜೂನ್ 30, 2022 ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಅದಾದ ಒಂದು ವರ್ಷದ ಬಳಿಕ ಎನ್ಸಿಪಿಯ ಅಜಿತ್ ಪವಾರ್ ಅವರೇ ಶಿಂದೆ ಬೆನ್ನಿಗೆ ನಿಂತಿದ್ದಾರೆ.</p><p>2019ರ ಅಕ್ಟೋಬರ್ನಲ್ಲಿ ಮಹಾರಾಷ್ಟ್ರ ವಿಧಾನಸಭೆಯ 288 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಅದರಲ್ಲಿ ಬಿಜೆಪಿ 105, ಶಿವಸೇನೆ 56, ಎನ್ಸಿಪಿ 54, ಕಾಂಗ್ರೆಸ್ 44 ಹಾಗೂ ಇತರರು 29 ಸ್ಥಾನಗಳನ್ನು ಗೆದ್ದಿದ್ದರು. 2024 ರ ಅಕ್ಟೋಬರ್ನಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರ ಜನರಿಗೆ ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ನಾಯಕ ಅಜಿತ್ ಪವಾರ್ ಬಹುದೊಡ್ಡ ಶಾಕ್ ಕೊಟ್ಟಿದ್ದಾರೆ.</p><p>ಭಾನುವಾರ ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದೆ. ಇದರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಸಮ್ಮಿಶ್ರ ಸರ್ಕಾರಕ್ಕೆ ತಮ್ಮ ಜೊತೆಯಿರುವ 10ಕ್ಕೂ ಹೆಚ್ಚು ಶಾಸಕರ ಜೊತೆ ಬೆಂಬಲ ನೀಡಿರುವ ಅಜಿತ್ ಪವಾರ್, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.</p><p>ಅಜಿತ್ ಪವಾರ್ ಜೊತೆ ಎನ್ಸಿಪಿ ನಾಯಕ ಛಗನ್ ಭುಜಬಲ್ ಹಾಗೂ ದಿಲೀಪ್ ವಾಲ್ಸೆ, ಧನಂಜಯ್ ಮುಂಡೆ, ಹಸನ್ ಮುಶ್ರಿಫ್, ಧರ್ಮ್ರಾವ್ ಬಾಬಾ, ಆದಿತಿ ತಟಕಾರೆ, ಅನಿಲ್ ಪಾಟೀಲ, ಸಂಜಯ್ ಬನ್ಸೊಡೆ ಸೇರಿ 9 ಎನ್ಸಿಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಮೇಶ್ ಬೈಸ್ ಅವರು ಪ್ರಮಾಣವಚನ ಬೋಧಿಸಿದರು.</p>.<p>ಇನ್ನೊಂದೆಡೆ ಅಜಿತ್ ಪವಾರ್ ಅವರು ತಮಗೆ 40 ಶಾಸಕರ ಬೆಂಬಲ ಇದೆ ಎಂದು ಹೇಳಿಕೊಂಡಿದ್ದಾರೆ.</p><p>ಇದಕ್ಕೂ ಮುನ್ನ ಇದ್ದಕ್ಕಿದ್ದಂತೆ ಭಾನುವಾರ ಬೆಳಿಗ್ಗೆ ಅಜಿತ್ ಪವಾರ್ ಅವರು ಎನ್ಸಿಪಿ ಶಾಸಕರ ಸಭೆ ಕರೆದಿದ್ದರು. ಆ ನಂತರ ಅವರು ಶಿಂದೆ ಸರ್ಕಾರಕ್ಕೆ ಬೆಂಬಲ ನೀಡುವ ಘೋಷಣೆ ಮಾಡಿದರು. ಅಜಿತ್ ಪವಾರ್ ಅವರ ದಿಢೀರ್ ನಿರ್ಧಾರಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.</p><p>ಇತ್ತೀಚೆಗೆ ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಅಧ್ಯಕ್ಷ ಸ್ಥಾನ ಬೇಡ ಎಂದು ಹೇಳಿದ್ದರು. ಅದಾದ ನಂತರ ಅಜಿತ್ ಪವಾರ್ ಅವರು ಎನ್ಸಿಪಿಯ ಕಾರ್ಯಾಧ್ಯಕ್ಷರಾಗಿ ಶರದ್ ಅವರಿಗೆ ಅಧ್ಯಕ್ಷರಾಗಿ ಮುಂದುವರೆಯುವಂತೆ ಮನವೊಲಿಸಿದ್ದರು.</p><p>2022 ರ ಜೂನ್ನಲ್ಲಿ ನಡೆದಿದ್ದ ರಾಜಕೀಯ ಬೆಳವಣಿಗೆಗಳಿಂದ ಶಿವಸೇನೆಯ ಏಕನಾಥ್ ಶಿಂದೆ ಅವರು ತಮ್ಮ ಗುಂಪಿನೊಂದಿಗೆ ಎನ್ಸಿಪಿ, ಶಿವಸೇನೆ, ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಕಿತ್ತೊಗೆದು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದರು.</p><p>ಏಕನಾಥ ಶಿಂದೆ ಜೂನ್ 30, 2022 ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಅದಾದ ಒಂದು ವರ್ಷದ ಬಳಿಕ ಎನ್ಸಿಪಿಯ ಅಜಿತ್ ಪವಾರ್ ಅವರೇ ಶಿಂದೆ ಬೆನ್ನಿಗೆ ನಿಂತಿದ್ದಾರೆ.</p><p>2019ರ ಅಕ್ಟೋಬರ್ನಲ್ಲಿ ಮಹಾರಾಷ್ಟ್ರ ವಿಧಾನಸಭೆಯ 288 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಅದರಲ್ಲಿ ಬಿಜೆಪಿ 105, ಶಿವಸೇನೆ 56, ಎನ್ಸಿಪಿ 54, ಕಾಂಗ್ರೆಸ್ 44 ಹಾಗೂ ಇತರರು 29 ಸ್ಥಾನಗಳನ್ನು ಗೆದ್ದಿದ್ದರು. 2024 ರ ಅಕ್ಟೋಬರ್ನಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>