<p><strong>ಮುಂಬೈ:</strong> ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಕಾರಣದಿಂದಾಗಿ ಮುಂಬರುವ ಜಿಲ್ಲಾ ಪರಿಷತ್ ಮತ್ತು ಪಂಚಾಯಿತಿ ಸಮಿತಿ ಚುನಾವಣಾ ಪ್ರಚಾರಗಳಲ್ಲಿ ಭಾಗಿಯಾಗದಿರಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಚುನಾವಣೆ ಸಂಬಂಧಿತ ಯಾವುದೇ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸುವುದಿಲ್ಲ. ಫೆಬ್ರುವರಿ 7ರಂದು ನಡೆಯಲಿರುವ ಚುನಾವಣೆಗೆ ಸ್ಥಳೀಯ ನಾಯಕರು ಮತ್ತು ಪಕ್ಷದ ಪದಾಧಿಕಾರಿಗಳು ಪ್ರಚಾರ ಮಾಡುವಂತೆ ಫಡಣವೀಸ್ ಶನಿವಾರ ಸೂಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ. </p>.<p>ಫಡಣವೀಸ್ ಅವರು ಏಳು ದಿನಗಳಲ್ಲಿ 22 ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಬೇಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>12 ಜಿಲ್ಲಾ ಪರಿಷತ್ ಮತ್ತು 125 ಪಂಚಾಯಿತಿ ಸಮಿತಿಗೆ ಚುನಾವಣೆ ನಡೆಯಲಿದ್ದು, ಫೆಬ್ರುವರಿ 5ರಂದು ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. </p>.<p>ರಾಜ್ಯ ಚುನಾವಣಾ ಆಯೋಗವು ಚುನಾವಣೆ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಫೆ.5ರಂದು ನಿಗದಿಯಾಗಿದ್ದ ಮತದಾನ 7ರಂದು ಮುಂದೂಡಲಾಗಿದೆ ಮತ್ತು ಮತ ಎಣಿಕೆ ಫೆ. 9ರಂದು ನಡೆಯಲಿದೆ.</p>
<p><strong>ಮುಂಬೈ:</strong> ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಕಾರಣದಿಂದಾಗಿ ಮುಂಬರುವ ಜಿಲ್ಲಾ ಪರಿಷತ್ ಮತ್ತು ಪಂಚಾಯಿತಿ ಸಮಿತಿ ಚುನಾವಣಾ ಪ್ರಚಾರಗಳಲ್ಲಿ ಭಾಗಿಯಾಗದಿರಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಚುನಾವಣೆ ಸಂಬಂಧಿತ ಯಾವುದೇ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸುವುದಿಲ್ಲ. ಫೆಬ್ರುವರಿ 7ರಂದು ನಡೆಯಲಿರುವ ಚುನಾವಣೆಗೆ ಸ್ಥಳೀಯ ನಾಯಕರು ಮತ್ತು ಪಕ್ಷದ ಪದಾಧಿಕಾರಿಗಳು ಪ್ರಚಾರ ಮಾಡುವಂತೆ ಫಡಣವೀಸ್ ಶನಿವಾರ ಸೂಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ. </p>.<p>ಫಡಣವೀಸ್ ಅವರು ಏಳು ದಿನಗಳಲ್ಲಿ 22 ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಬೇಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>12 ಜಿಲ್ಲಾ ಪರಿಷತ್ ಮತ್ತು 125 ಪಂಚಾಯಿತಿ ಸಮಿತಿಗೆ ಚುನಾವಣೆ ನಡೆಯಲಿದ್ದು, ಫೆಬ್ರುವರಿ 5ರಂದು ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದೆ. </p>.<p>ರಾಜ್ಯ ಚುನಾವಣಾ ಆಯೋಗವು ಚುನಾವಣೆ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಫೆ.5ರಂದು ನಿಗದಿಯಾಗಿದ್ದ ಮತದಾನ 7ರಂದು ಮುಂದೂಡಲಾಗಿದೆ ಮತ್ತು ಮತ ಎಣಿಕೆ ಫೆ. 9ರಂದು ನಡೆಯಲಿದೆ.</p>