ಕಳೆದ ಐದು ವರ್ಷಗಳಲ್ಲಿ ನನ್ನ ಆಡಳಿತ ನನಗೆ ತೃಪ್ತಿ ಕೊಟ್ಟಿದೆ. ರೈತರು, ಗ್ರಾಮೀಣಾಭಿವೃದ್ಧಿ, ನೀರಾವರಿ, ಮುಂಬೈ ಮಹಾನಗರ ಅಭಿವೃದ್ಧಿಯ ವಿಚಾರದಲ್ಲಿ ನಾನು ಮಾಡಿದ ಕೆಲಸ ನನಗೆ ತೃಪ್ತಿ ಕೊಟ್ಟಿದೆ. ನನಗೆ ಅವಕಾಶ ಕೊಟ್ಟಿದ್ದಕ್ಕೆ ಮಹಾರಾಷ್ಟ್ರದ ಜನರಿಗೆ ನಾನು ಅಭಾರಿಯಾಗಿದ್ದೇನೆ.ಕುದುರೆ ವ್ಯಾಪಾರವನ್ನು ನಾವು ಒಪ್ಪುವುದೂ ಇಲ್ಲ, ಬೆಂಬಲಿಸುವುದೂ ಇಲ್ಲ. ಹೀಗಾಗಿ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಅವರು ಹೇಳಿದರು.