<p><strong>ಪಾಲ್ಗಡ್:</strong> ಮಹಾರಾಷ್ಟ್ರದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಕರಾವಳಿಯ ಪಾಲ್ಗಡ್ ಜಿಲ್ಲೆಯಲ್ಲಿ 760 ಮನೆಗಳಿಗೆ ಹಾನಿಯಾಗಿದೆ. ವಿದ್ಯುದಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಳೆ ಮತ್ತು ಬಿರುಗಾಳಿಗೆ ಮೀನು ಹಿಡಿಯಲು ಬಳಸುವ 50 ದೋಣಿಗಳಿಗೂ ಹಾನಿಯಾಗಿದೆ. ಮುಂಬೈ, ಠಾಣೆ, ಪಾಲ್ಗಡ್ ಮತ್ತು ರಾಯಗಡ್ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. </p><p>ಭಾರೀ ಗಾಳಿಯಿಂದ ತುಂಡಾಗಿ ರಸ್ತೆಗೆ ಬಿದ್ದಿದ್ದ ವಿದ್ಯುತ್ ತಂತಿಯ ಮೇಲೆ ಆಕಸ್ಮಿಕವಾಗಿ ಕಾಲಿಟ್ಟ ಮೊರೇಶ್ವರ ಲೋಹರ್ (65) ಎಂಬುವವರು ವಿದ್ಯುದಾಘಾತದಿಂದ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ವಿಪತ್ತು ನಿರ್ವಹಣಾ ತಂಡವನ್ನು ಕಳುಹಿಸಲಾಗಿದೆ ಎಂದು ಪಾಲ್ಗಡ್ನ ಜಿಲ್ಲಾಧಿಕಾರಿ ಡಾ. ಇಂದು ರಾಣಿ ಜಾಖಡ್ ತಿಳಿಸಿದ್ದಾರೆ.</p><p>‘ಸಂತ್ರಸ್ತರ ನೆರವಿಗೆ ಜಿಲ್ಲಾಡಳಿತ ಧಾವಿಸಿದೆ. ಅರ್ಹ ನಾಗರಿಕರಿಗೆ ಸೂಕ್ತ ಪರಿಹಾರ ಸಿಗಲಿದೆ. ಈ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ’ ಎಂದಿದ್ದಾರೆ.</p><p>ಭಾರತೀಯ ಹವಾಮಾನ ಇಲಾಖೆಯು ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಲ್ಗಡ್:</strong> ಮಹಾರಾಷ್ಟ್ರದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಕರಾವಳಿಯ ಪಾಲ್ಗಡ್ ಜಿಲ್ಲೆಯಲ್ಲಿ 760 ಮನೆಗಳಿಗೆ ಹಾನಿಯಾಗಿದೆ. ವಿದ್ಯುದಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಳೆ ಮತ್ತು ಬಿರುಗಾಳಿಗೆ ಮೀನು ಹಿಡಿಯಲು ಬಳಸುವ 50 ದೋಣಿಗಳಿಗೂ ಹಾನಿಯಾಗಿದೆ. ಮುಂಬೈ, ಠಾಣೆ, ಪಾಲ್ಗಡ್ ಮತ್ತು ರಾಯಗಡ್ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. </p><p>ಭಾರೀ ಗಾಳಿಯಿಂದ ತುಂಡಾಗಿ ರಸ್ತೆಗೆ ಬಿದ್ದಿದ್ದ ವಿದ್ಯುತ್ ತಂತಿಯ ಮೇಲೆ ಆಕಸ್ಮಿಕವಾಗಿ ಕಾಲಿಟ್ಟ ಮೊರೇಶ್ವರ ಲೋಹರ್ (65) ಎಂಬುವವರು ವಿದ್ಯುದಾಘಾತದಿಂದ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ವಿಪತ್ತು ನಿರ್ವಹಣಾ ತಂಡವನ್ನು ಕಳುಹಿಸಲಾಗಿದೆ ಎಂದು ಪಾಲ್ಗಡ್ನ ಜಿಲ್ಲಾಧಿಕಾರಿ ಡಾ. ಇಂದು ರಾಣಿ ಜಾಖಡ್ ತಿಳಿಸಿದ್ದಾರೆ.</p><p>‘ಸಂತ್ರಸ್ತರ ನೆರವಿಗೆ ಜಿಲ್ಲಾಡಳಿತ ಧಾವಿಸಿದೆ. ಅರ್ಹ ನಾಗರಿಕರಿಗೆ ಸೂಕ್ತ ಪರಿಹಾರ ಸಿಗಲಿದೆ. ಈ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ’ ಎಂದಿದ್ದಾರೆ.</p><p>ಭಾರತೀಯ ಹವಾಮಾನ ಇಲಾಖೆಯು ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>