<p><strong>ಮುಂಬೈ</strong>: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. </p><p>ಮುನ್ನೆಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ, ನಾಸಿಕ್, ಪುಣೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಠಾಣೆ, ರಾಯ್ಗಢ, ಮುಂಬೈ, ರತ್ನಗಿರಿ ಸೇರಿದಂತೆ ಸತಾರಾ ಘಾಟ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.</p><p>ಅಂಬಾ, ಕುಂಡಲಿಕಾ, ಪಾತಾಳಗಂಗಾ, ಜಗ್ಬುಡಿ ಸೇರಿದಂತೆ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರಾಯ್ಗಢ ಸೇರಿ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. </p><p>ಈಗಾಗಲೇ ನದಿಪಾತ್ರದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು, ಪ್ರವಾಹದ ಸ್ಥಿತಿ ಎದುರಾಗಿದೆ. ರತ್ನಗಿರಿ ಜಿಲ್ಲೆಯ ಹಲವೆಡೆ ಭೂಕುಸಿತ ಸಂಭವಿಸಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. </p><p>ಮಹಾರಾಷ್ಟ್ರ ವಿಪತ್ತು ನಿರ್ವಹಣಾ ಪಡೆಯ ಪ್ರಕಾರ 24 ಗಂಟೆಯಲ್ಲಿ ಮುಂಬೈನಲ್ಲಿ ಅತಿ ಹೆಚ್ಚು 142.6 ಮಿಲಿ ಮೀಟರ್ ಮಳೆಯಾಗಿದೆ. ರಾಯ್ಗಢದಲ್ಲಿ 134.1 ಎಂಎಂ, ಪಲ್ಗಾರ್ನಲ್ಲಿ 120.9 ಎಂಎಂ, ಠಾಣೆಯಲ್ಲಿ 90.3 ಎಂಎಂ ಮಳೆಯಾಗಿದೆ.</p>.ಮಹಾ ಮಳೆ: ಕರ್ನಾಟಕ–ಮಹಾರಾಷ್ಟ್ರ ನಡುವೆ ಸೇತುವೆ ಸಂಚಾರ ಬಂದ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. </p><p>ಮುನ್ನೆಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ, ನಾಸಿಕ್, ಪುಣೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಠಾಣೆ, ರಾಯ್ಗಢ, ಮುಂಬೈ, ರತ್ನಗಿರಿ ಸೇರಿದಂತೆ ಸತಾರಾ ಘಾಟ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.</p><p>ಅಂಬಾ, ಕುಂಡಲಿಕಾ, ಪಾತಾಳಗಂಗಾ, ಜಗ್ಬುಡಿ ಸೇರಿದಂತೆ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರಾಯ್ಗಢ ಸೇರಿ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. </p><p>ಈಗಾಗಲೇ ನದಿಪಾತ್ರದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು, ಪ್ರವಾಹದ ಸ್ಥಿತಿ ಎದುರಾಗಿದೆ. ರತ್ನಗಿರಿ ಜಿಲ್ಲೆಯ ಹಲವೆಡೆ ಭೂಕುಸಿತ ಸಂಭವಿಸಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. </p><p>ಮಹಾರಾಷ್ಟ್ರ ವಿಪತ್ತು ನಿರ್ವಹಣಾ ಪಡೆಯ ಪ್ರಕಾರ 24 ಗಂಟೆಯಲ್ಲಿ ಮುಂಬೈನಲ್ಲಿ ಅತಿ ಹೆಚ್ಚು 142.6 ಮಿಲಿ ಮೀಟರ್ ಮಳೆಯಾಗಿದೆ. ರಾಯ್ಗಢದಲ್ಲಿ 134.1 ಎಂಎಂ, ಪಲ್ಗಾರ್ನಲ್ಲಿ 120.9 ಎಂಎಂ, ಠಾಣೆಯಲ್ಲಿ 90.3 ಎಂಎಂ ಮಳೆಯಾಗಿದೆ.</p>.ಮಹಾ ಮಳೆ: ಕರ್ನಾಟಕ–ಮಹಾರಾಷ್ಟ್ರ ನಡುವೆ ಸೇತುವೆ ಸಂಚಾರ ಬಂದ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>