<p><strong>ನಾಗ್ಪುರ:</strong> ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ. ಹೊಸದಾಗಿ ಚುನಾಯಿತರಾಗಿರುವ ಕಾಂಗ್ರೆಸ್ನ ಎಲ್ಲ 16 ಶಾಸಕರು ಕಮಲ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ಬಿಜೆಪಿ ನಾಯಕ ಅನಿಲ್ ದೇಶಮುಖ್ ಇಂದು (ಬುಧವಾರ) ಹೇಳಿದ್ದಾರೆ. </p><p>ಇತ್ತೀಚಿಗೆ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಯು ಪ್ರಚಂಡ ಗೆಲುವು ಸಾಧಿಸಿತ್ತು. 288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ 230 ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿದಿತ್ತು. ಮತ್ತೊಂದೆಡೆ ಮಹಾ ವಿಕಾಸ ಅಘಾಡಿ (ಎಂವಿಎ) ಕೇವಲ 46 ಸ್ಥಾನಗಳಲ್ಲಷ್ಟೇ ಜಯಿಸಿತ್ತು. </p><p>ಈ ಪೈಕಿ ಕಾಂಗ್ರೆಸ್ನ 16 ಅಭ್ಯರ್ಥಿಗಳು ಮಾತ್ರ ಜಯ ಸಾಧಿಸಿದ್ದರು. </p><p>'ಬಿಜೆಪಿ ಹಾಗೂ ಮಹಾಯುತಿ ಮೈತ್ರಿಯು ಭಾರಿ ಬಹುಮತ ಪಡೆದಿವೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಎಲ್ಲೆಡೆ ಕಾಂಗ್ರೆಸ್ನ ಅವನತಿಯಾಗುತ್ತಿದೆ' ಎಂದು ಅವರು ಹೇಳಿದ್ದಾರೆ. </p><p>'ರಾಜ್ಯದಲ್ಲಿ ಕಾಂಗ್ರೆಸ್ಗೆ ಭವಿಷ್ಯವಿಲ್ಲ. ಅದರ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಬೇಕು' ಎಂದು ಅವರು ಒತ್ತಾಯಿಸಿದರು. </p><p>'288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಾಂಗ್ರೆಸ್ 16 ಶಾಸಕರನ್ನು ಅಂದರೆ ಶೇ 5.55ರಷ್ಟು ಸ್ಥಾನಗಳನ್ನು ಮಾತ್ರ ಹೊಂದಿದೆ. ಇದು 1962ರ ಬಳಿಕ ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ನ ಕಳಪೆ ಸಾಧನೆಯಾಗಿದೆ' ಎಂದು ಅವರು ಉಲ್ಲೇಖಿಸಿದರು. </p><p>2014ರಿಂದ ಕಾಂಗ್ರೆಸ್ನ ಸೀಟು ಹಂಚಿಕೆ ಶೇ 20ಕ್ಕಿಂತ ಕಡಿಮೆಯಾಗಿದ್ದು, ಈಗ ಶೇ 10ಕ್ಕಿಂತಲೂ ಇಳಿಕೆಯಾಗಿದೆ ಎಂದು ಅವರು ಹೇಳಿದರು. </p><p>2023ರಲ್ಲಿ ಕಾಂಗ್ರೆಸ್ನಿಂದ ಉಚ್ಚಾಟನೆಗೊಂಡ ಬಳಿಕ ದೇಶಮುಖ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. </p>.ಅನಿಲ್ ದೇಶಮುಖ್ ಮೇಲೆ ದಾಳಿ-ಹಲ್ಲೆ; ನಾಲ್ವರು ಅಪರಿಚಿತರ ಮೇಲೆ ಕೊಲೆ ಯತ್ನ ಪ್ರಕರಣ.ಮಹಾಯುತಿ ‘ಮಹಾ’ ದಿಗ್ವಿಜಯ: ಇಂಡಿಯಾ ಮೈತ್ರಿಗೆ ಜಾರ್ಖಂಡ್ ಗೆಲುವಿನ ಸಮಾಧಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ:</strong> ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ. ಹೊಸದಾಗಿ ಚುನಾಯಿತರಾಗಿರುವ ಕಾಂಗ್ರೆಸ್ನ ಎಲ್ಲ 16 ಶಾಸಕರು ಕಮಲ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ಬಿಜೆಪಿ ನಾಯಕ ಅನಿಲ್ ದೇಶಮುಖ್ ಇಂದು (ಬುಧವಾರ) ಹೇಳಿದ್ದಾರೆ. </p><p>ಇತ್ತೀಚಿಗೆ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಯು ಪ್ರಚಂಡ ಗೆಲುವು ಸಾಧಿಸಿತ್ತು. 288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ 230 ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿದಿತ್ತು. ಮತ್ತೊಂದೆಡೆ ಮಹಾ ವಿಕಾಸ ಅಘಾಡಿ (ಎಂವಿಎ) ಕೇವಲ 46 ಸ್ಥಾನಗಳಲ್ಲಷ್ಟೇ ಜಯಿಸಿತ್ತು. </p><p>ಈ ಪೈಕಿ ಕಾಂಗ್ರೆಸ್ನ 16 ಅಭ್ಯರ್ಥಿಗಳು ಮಾತ್ರ ಜಯ ಸಾಧಿಸಿದ್ದರು. </p><p>'ಬಿಜೆಪಿ ಹಾಗೂ ಮಹಾಯುತಿ ಮೈತ್ರಿಯು ಭಾರಿ ಬಹುಮತ ಪಡೆದಿವೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಎಲ್ಲೆಡೆ ಕಾಂಗ್ರೆಸ್ನ ಅವನತಿಯಾಗುತ್ತಿದೆ' ಎಂದು ಅವರು ಹೇಳಿದ್ದಾರೆ. </p><p>'ರಾಜ್ಯದಲ್ಲಿ ಕಾಂಗ್ರೆಸ್ಗೆ ಭವಿಷ್ಯವಿಲ್ಲ. ಅದರ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಬೇಕು' ಎಂದು ಅವರು ಒತ್ತಾಯಿಸಿದರು. </p><p>'288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಾಂಗ್ರೆಸ್ 16 ಶಾಸಕರನ್ನು ಅಂದರೆ ಶೇ 5.55ರಷ್ಟು ಸ್ಥಾನಗಳನ್ನು ಮಾತ್ರ ಹೊಂದಿದೆ. ಇದು 1962ರ ಬಳಿಕ ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ನ ಕಳಪೆ ಸಾಧನೆಯಾಗಿದೆ' ಎಂದು ಅವರು ಉಲ್ಲೇಖಿಸಿದರು. </p><p>2014ರಿಂದ ಕಾಂಗ್ರೆಸ್ನ ಸೀಟು ಹಂಚಿಕೆ ಶೇ 20ಕ್ಕಿಂತ ಕಡಿಮೆಯಾಗಿದ್ದು, ಈಗ ಶೇ 10ಕ್ಕಿಂತಲೂ ಇಳಿಕೆಯಾಗಿದೆ ಎಂದು ಅವರು ಹೇಳಿದರು. </p><p>2023ರಲ್ಲಿ ಕಾಂಗ್ರೆಸ್ನಿಂದ ಉಚ್ಚಾಟನೆಗೊಂಡ ಬಳಿಕ ದೇಶಮುಖ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. </p>.ಅನಿಲ್ ದೇಶಮುಖ್ ಮೇಲೆ ದಾಳಿ-ಹಲ್ಲೆ; ನಾಲ್ವರು ಅಪರಿಚಿತರ ಮೇಲೆ ಕೊಲೆ ಯತ್ನ ಪ್ರಕರಣ.ಮಹಾಯುತಿ ‘ಮಹಾ’ ದಿಗ್ವಿಜಯ: ಇಂಡಿಯಾ ಮೈತ್ರಿಗೆ ಜಾರ್ಖಂಡ್ ಗೆಲುವಿನ ಸಮಾಧಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>