<p><strong>ಪಾಲ್ಘರ್</strong>: ಶಾಲೆಗೆ ತಡವಾಗಿ ಬಂದಿದ್ದಕ್ಕೆ ಬಾಲಕಿಗೆ ನೂರು ಬಸ್ಕಿ ಹೊಡೆಯುವ ಶಿಕ್ಷೆ ನೀಡಲಾಗಿದ್ದು, ಅಸ್ವಸ್ಥ ಬಾಲಕಿ ವಾರದ ಬಳಿಕ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.</p><p>ವಸಾಯಿ ಪ್ರದೇಶದ ಸತಿವಲಿಯಲ್ಲಿರುವ ಖಾಸಗಿ ಶಾಲೆಯ ವಿದ್ಯಾರ್ಥಿನಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂಶಿಕಾ ಶುಕ್ರವಾರ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.</p><p>ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಸದಸ್ಯರ ಪ್ರಕಾರ, ನವೆಂಬರ್ 8ರಂದು ತಡವಾಗಿ ಶಾಲೆಗೆ ಬಂದಿದ್ದಕ್ಕಾಗಿ ಅಂಶಿಕಾ ಮತ್ತು ಇತರ ನಾಲ್ವರು ವಿದ್ಯಾರ್ಥಿಗಳಿಗೆ ತಲಾ 100 ಬಸ್ಕಿ ಹೊಡೆಯುವ ಶಿಕ್ಷೆ ನೀಡಲಾಗಿತ್ತು. </p><p>ಬಾಲಕಿಗೆ ಆರೋಗ್ಯ ಸಮಸ್ಯೆಗಳಿದ್ದರೂ ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಲಾಗಿತ್ತು ಎಂದು ವಸಾಯಿಯ ಎಂಎನ್ಎಸ್ ನಾಯಕ ಸಚಿನ್ ಮೋರ್ ಹೇಳಿದ್ದಾರೆ.</p><p>‘ಆ ಬಾಲಕಿ ಎಷ್ಟು ಬಸ್ಕಿ ಹೊಡೆದಿದ್ದಾಳೆ. ಅದರಿಂದಾಗಿಯೇ ಆಕೆ ಮೃತಪಟ್ಟಳೋ ಅಥವಾ ಬೇರೆ ಕಾರಣದಿಂದಲೋ ಎಂಬುದು ನಿಜವಾಗಿಯೂ ತಿಳಿದಿಲ್ಲ’ ಎಂದು ಶಾಲೆಯ ಶಿಕ್ಷಕರೊಬ್ಬರು ಹೇಳಿದ್ದಾರೆ.</p><p>ಅಂಶಿಕಾ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತನಿಖೆಯಿಂದ ಆಕೆಯ ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರಂಗ ಗಲಂಗೆ ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಲ್ಘರ್</strong>: ಶಾಲೆಗೆ ತಡವಾಗಿ ಬಂದಿದ್ದಕ್ಕೆ ಬಾಲಕಿಗೆ ನೂರು ಬಸ್ಕಿ ಹೊಡೆಯುವ ಶಿಕ್ಷೆ ನೀಡಲಾಗಿದ್ದು, ಅಸ್ವಸ್ಥ ಬಾಲಕಿ ವಾರದ ಬಳಿಕ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.</p><p>ವಸಾಯಿ ಪ್ರದೇಶದ ಸತಿವಲಿಯಲ್ಲಿರುವ ಖಾಸಗಿ ಶಾಲೆಯ ವಿದ್ಯಾರ್ಥಿನಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂಶಿಕಾ ಶುಕ್ರವಾರ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.</p><p>ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಸದಸ್ಯರ ಪ್ರಕಾರ, ನವೆಂಬರ್ 8ರಂದು ತಡವಾಗಿ ಶಾಲೆಗೆ ಬಂದಿದ್ದಕ್ಕಾಗಿ ಅಂಶಿಕಾ ಮತ್ತು ಇತರ ನಾಲ್ವರು ವಿದ್ಯಾರ್ಥಿಗಳಿಗೆ ತಲಾ 100 ಬಸ್ಕಿ ಹೊಡೆಯುವ ಶಿಕ್ಷೆ ನೀಡಲಾಗಿತ್ತು. </p><p>ಬಾಲಕಿಗೆ ಆರೋಗ್ಯ ಸಮಸ್ಯೆಗಳಿದ್ದರೂ ಬಸ್ಕಿ ಹೊಡೆಯುವ ಶಿಕ್ಷೆ ವಿಧಿಸಲಾಗಿತ್ತು ಎಂದು ವಸಾಯಿಯ ಎಂಎನ್ಎಸ್ ನಾಯಕ ಸಚಿನ್ ಮೋರ್ ಹೇಳಿದ್ದಾರೆ.</p><p>‘ಆ ಬಾಲಕಿ ಎಷ್ಟು ಬಸ್ಕಿ ಹೊಡೆದಿದ್ದಾಳೆ. ಅದರಿಂದಾಗಿಯೇ ಆಕೆ ಮೃತಪಟ್ಟಳೋ ಅಥವಾ ಬೇರೆ ಕಾರಣದಿಂದಲೋ ಎಂಬುದು ನಿಜವಾಗಿಯೂ ತಿಳಿದಿಲ್ಲ’ ಎಂದು ಶಾಲೆಯ ಶಿಕ್ಷಕರೊಬ್ಬರು ಹೇಳಿದ್ದಾರೆ.</p><p>ಅಂಶಿಕಾ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತನಿಖೆಯಿಂದ ಆಕೆಯ ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರಂಗ ಗಲಂಗೆ ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>