ಮಿಲಿಂದ್ ದಿಯೋರಾ ಮತ್ತು ಅಶೋಕ್ ಚವಾಣ್ ನಂತರ ಕಾಂಗ್ರೆಸ್ನಿಂದ ನಿರ್ಗಮಿಸಿದ ಮೂರನೇ ನಾಯಕರು ಇವರಾಗಿದ್ದಾರೆ. ದಿಯೋರಾ ಏಕನಾಥ ಶಿಂದೆ ನೇತೃತ್ವದ ಶಿವಸೇನೆಗೆ ಸೇರ್ಪಡೆಗೊಂಡರೆ, ಇತ್ತ ಅಶೋಕ್ ಚವಾಣ್ ಬಿಜೆಪಿಗೆ ಸೇರಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ಮಂಗಳವಾರ ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆ ಪ್ರವೇಶಿಸಿದೆ. ಇದರ ಬೆನ್ನಲ್ಲೇ ಪದ್ಮಾಕರ್ ವಾಲ್ವಿ ಕಾಂಗ್ರೆಸ್ ತೊರೆದಿರುವುದರಿಂದ ಪಕ್ಷಕ್ಕೆ ತುಸು ಹಿನ್ನಡೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.