ಮುಂಬೈ: ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ವಿರೋಧ ಪಕ್ಷಗಳ ಚುನಾಯಿತ ಸರ್ಕಾರಗಳನ್ನು ಬಿಜೆಪಿ ಉರುಳಿಸಿದೆ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮಂಗಳವಾರ ಆರೋಪಿಸಿದ್ದಾರೆ.
ದೇಶದೆಲ್ಲೆಡೆ ವಿರೋಧ ಪಕ್ಷಗಳ ಸರ್ಕಾರಗಳನ್ನು ಬಿಜೆಪಿ ಬುಡಮೇಲುಗೊಳಿಸುತ್ತಿದ್ದು, ಈ ಕುರಿತು ಸುಪ್ರೀಂ ಕೋರ್ಟ್ ಗಮನ ಹರಿಸಬೇಕು ಎಂದೂ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಬಲ್, 2016ರಲ್ಲಿ ಉತ್ತರಾಖಂಡ ಹಾಗೂ ಅರುಣಾಚಲ ಪ್ರದೇಶ, 2019ರಲ್ಲಿ ಕರ್ನಾಟಕ, 2020ರಲ್ಲಿ ಮಧ್ಯಪ್ರದೇಶ ಮತ್ತು 2022ರಲ್ಲಿ ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ವಿರೋಧ ಪಕ್ಷಗಳ ಚುನಾಯಿತ ಸರ್ಕಾರಗಳನ್ನು ಬಿಜೆಪಿ ಉರುಳಿಸಿದೆ.
ಕಾನೂನಿನಲ್ಲಿ ಇದಕ್ಕೆ ಅವಕಾಶವಿದೆಯೇ? ಈ ಕುರಿತು ಸುಪ್ರೀಂ ಕೋರ್ಟ್ ಗಮನಕ್ಕೆ! ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.