ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸೋಮವಾರ ನಡೆದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು, ‘ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನನ್ನ ಸರ್ಕಾರ ಸಮರ್ಥವಾಗಿ ಮತ್ತು ಬಲವಾಗಿ ವಾದ ಮಂಡಿಸಿದೆ. ಮುಂದೆಯೂ ಇದೇ ರೀತಿ ವಾದ ಮಂಡಿಸಲಾಗುವುದು’ ಎಂದು ಹೇಳಿದರು.