<p><strong>ಮುಂಬೈ:</strong> ‘ರಾಜ್ಯದಲ್ಲಿ ಧಾರ್ಮಿಕ ಮತಾಂತರ ವಿರೋಧಿ ಕಾಯ್ದೆಯನ್ನು ಶೀಘ್ರವೇ ರೂಪಿಸಲಾಗುವುದು. ಈ ಕುರಿತ ಮಸೂದೆಯನ್ನು ಬರುವ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ, ಅಂಗೀಕರಿಸಲಾಗುವುದು’ ಎಂದು ಮಹಾರಾಷ್ಟ್ರದ ಗೃಹ ಖಾತೆ ರಾಜ್ಯ ಸಚಿವ ಪಂಕಜ್ ಭೋಯರ್ ಹೇಳಿದ್ದಾರೆ.</p>.<p>ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿದ ಅವರು, ‘ಉದ್ದೇಶಿತ ಕಾಯ್ದೆಯು ಇತರ ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾಯ್ದೆಗಳಿಗಿಂತಲೂ ಕಠಿಣವಾಗಿರಲಿದೆ. ಮಹಾರಾಷ್ಟ್ರವು ಇಂತಹ ಕಾಯ್ದೆಯನ್ನು ಜಾರಿಗೆ ತರಲಿರುವ 11ನೇ ರಾಜ್ಯವಾಗಲಿದೆ’ ಎಂದಿದ್ದಾರೆ.</p>.<p>‘ಮತಾಂತರ ವಿರೋಧಿ ಕಾಯ್ದೆ ರೂಪಿಸುವ ಸಂಬಂಧ ಡಿಜಿಪಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿಯು ಕರಡು ಮಸೂದೆಯನ್ನು ಈಗಾಗಲೇ ಸಲ್ಲಿಸಿದೆ. ಬರುವ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕರಿಸಲಾಗುವುದು’ ಎಂದು ಅವರು ಸದನಕ್ಕೆ ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರದ ಎರಡನೇ ರಾಜಧಾನಿಯಾದ ನಾಗ್ಪುರದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಸಾಮಾನ್ಯವಾಗಿ ಡಿಸೆಂಬರ್ನಲ್ಲಿ ಆಯೋಜಿಸಲಾಗುತ್ತದೆ.</p>.<p>ಇದಕ್ಕೂ ಮುನ್ನ, ರಾಜ್ಯದಲ್ಲಿ ನಡೆಯುತ್ತಿರುವ ಬಲವಂತದ ಮತಾಂತರ ಕುರಿತು ಶಿವಸೇನಾದ ವಿಧಾನ ಪರಿಷತ್ ಸದಸ್ಯೆ ಮನೀಷಾ ಕಾಯಂದೆ ಪ್ರಸ್ತಾಪಿಸಿದ್ದರು.</p>.<p>‘ಮತಾಂತರಗೊಳ್ಳುವಂತೆ ಅತ್ತೆ–ಮಾವ ಒತ್ತಡ ಹೇರುತ್ತಿದ್ದರಿಂದ ಬೇಸತ್ತ ಗರ್ಭಿಣಿಯೊಬ್ಬರು ಸಾಂಗ್ಲಿ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತಾಂತರ ಮಾಡುವ ವಿಚಾರವಾಗಿ ಪುಣೆಯ ಕುಟುಂಬವೊಂದರಲ್ಲಿ ಜಟಾಪಟಿ ನಡೆದಿದ್ದು, ಎರಡೂ ಕಡೆಯವರ ದೂರಿನ ಆಧಾರದಲ್ಲಿ ಎಫ್ಐಆರ್ಗಳನ್ನು ದಾಖಲಿಸಲಾಗಿದೆ’ ಎಂದು ಕಾಯಂದೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ರಾಜ್ಯದಲ್ಲಿ ಧಾರ್ಮಿಕ ಮತಾಂತರ ವಿರೋಧಿ ಕಾಯ್ದೆಯನ್ನು ಶೀಘ್ರವೇ ರೂಪಿಸಲಾಗುವುದು. ಈ ಕುರಿತ ಮಸೂದೆಯನ್ನು ಬರುವ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ, ಅಂಗೀಕರಿಸಲಾಗುವುದು’ ಎಂದು ಮಹಾರಾಷ್ಟ್ರದ ಗೃಹ ಖಾತೆ ರಾಜ್ಯ ಸಚಿವ ಪಂಕಜ್ ಭೋಯರ್ ಹೇಳಿದ್ದಾರೆ.</p>.<p>ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿದ ಅವರು, ‘ಉದ್ದೇಶಿತ ಕಾಯ್ದೆಯು ಇತರ ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾಯ್ದೆಗಳಿಗಿಂತಲೂ ಕಠಿಣವಾಗಿರಲಿದೆ. ಮಹಾರಾಷ್ಟ್ರವು ಇಂತಹ ಕಾಯ್ದೆಯನ್ನು ಜಾರಿಗೆ ತರಲಿರುವ 11ನೇ ರಾಜ್ಯವಾಗಲಿದೆ’ ಎಂದಿದ್ದಾರೆ.</p>.<p>‘ಮತಾಂತರ ವಿರೋಧಿ ಕಾಯ್ದೆ ರೂಪಿಸುವ ಸಂಬಂಧ ಡಿಜಿಪಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿಯು ಕರಡು ಮಸೂದೆಯನ್ನು ಈಗಾಗಲೇ ಸಲ್ಲಿಸಿದೆ. ಬರುವ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕರಿಸಲಾಗುವುದು’ ಎಂದು ಅವರು ಸದನಕ್ಕೆ ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರದ ಎರಡನೇ ರಾಜಧಾನಿಯಾದ ನಾಗ್ಪುರದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಸಾಮಾನ್ಯವಾಗಿ ಡಿಸೆಂಬರ್ನಲ್ಲಿ ಆಯೋಜಿಸಲಾಗುತ್ತದೆ.</p>.<p>ಇದಕ್ಕೂ ಮುನ್ನ, ರಾಜ್ಯದಲ್ಲಿ ನಡೆಯುತ್ತಿರುವ ಬಲವಂತದ ಮತಾಂತರ ಕುರಿತು ಶಿವಸೇನಾದ ವಿಧಾನ ಪರಿಷತ್ ಸದಸ್ಯೆ ಮನೀಷಾ ಕಾಯಂದೆ ಪ್ರಸ್ತಾಪಿಸಿದ್ದರು.</p>.<p>‘ಮತಾಂತರಗೊಳ್ಳುವಂತೆ ಅತ್ತೆ–ಮಾವ ಒತ್ತಡ ಹೇರುತ್ತಿದ್ದರಿಂದ ಬೇಸತ್ತ ಗರ್ಭಿಣಿಯೊಬ್ಬರು ಸಾಂಗ್ಲಿ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತಾಂತರ ಮಾಡುವ ವಿಚಾರವಾಗಿ ಪುಣೆಯ ಕುಟುಂಬವೊಂದರಲ್ಲಿ ಜಟಾಪಟಿ ನಡೆದಿದ್ದು, ಎರಡೂ ಕಡೆಯವರ ದೂರಿನ ಆಧಾರದಲ್ಲಿ ಎಫ್ಐಆರ್ಗಳನ್ನು ದಾಖಲಿಸಲಾಗಿದೆ’ ಎಂದು ಕಾಯಂದೆ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>