<p><strong>ಮುಂಬೈ:</strong>ಎನ್ಸಿಪಿ ಪಕ್ಷದ ಮುಖಂಡ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿಮತ್ತು ಶಿವಸೇನಾ ಶಾಸಕ ಆದಿತ್ಯ ಠಾಕ್ರೆ ಸಚಿವರಾಗಿ ಇಂದುಪ್ರಮಾಣ ವಚನ ಸ್ವೀಕರಿಸಿದರು.</p>.<p>ಶಿವಸೇನಾ, ಎನ್ಸಿಪಿ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಮಹಾರಾಷ್ಟ್ರದ ಮಹಾ ವಿಕಾಸ ಆಘಾಡಿ (ಎಂವಿಎ) ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ಪ್ರಮಾಣ ವಚನ ಸ್ವೀಕರಿಸಿದರು. 36 ಸಚಿವರಲ್ಲಿ 26 ಮಂದಿ ಸಂಪುಟ ದರ್ಜೆ ಹಾಗೂ 10 ಮಂದಿರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂಪುಟದಲ್ಲಿ ಕಾಂಗ್ರೆಸ್ನ ವರ್ಷಾ ಗಾಯಕ್ವಾಡ್ ಮತ್ತುಯಶೋಮತಿ ಠಾಕೂರ್, ಸಿಪಿಎಂನ ಅದಿತಿ ತಟ್ಕರೆಸಚಿವ ಸ್ಥಾನ ಸಿಕ್ಕಿದೆ. ಇದರಲ್ಲಿ ಇಬ್ಬರಿಗೆಸಂಪುಟ ದರ್ಜೆ ಸ್ಥಾನ ನೀಡಲಾಗಿದೆ.</p>.<p>ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್,ಶಂಕರ್ರಾವ್ ಚೌಹಾಣ್ ಅವರ ಮಗ ದಿಲೀಪ್ ವಾಲ್ಸೆ ಪಾಟೀಲ್ (ಎನ್ಸಿಪಿ)<br />ಎನ್ಸಿಪಿ ಮುಖಂಡ ದನಂಜಯ್ ಮುಂಡೆ,ಮಹಾ ವಿಕಾಸ್ ಅಗಡಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್ನ ವಿಜಯ್ ವಡೆತ್ತೀವಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಕಳೆದ ತಿಂಗಳು ನಡೆದ ನಾಟಕೀಯ ಬೆಳವಣಿಗೆಯಲ್ಲಿ ಅಜಿತ್ ಪವಾರ್ ಬಿಜೆಪಿ ಜೊತೆ ಕೈಜೋಡಿಸಿ ಸರ್ಕಾರ ರಚನೆ ಮಾಡಿದ್ದರು. ಆ ಸಂದರ್ಭದಲ್ಲಿ ಬೆಳಗಿನ ಜಾವ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 80 ಗಂಟೆಗಳ ಅವಧಿಯಲ್ಲಿಯೇ ಆ ಸರ್ಕಾರ ಬಿದ್ದಿತ್ತು. ಎರಡು ತಿಂಗಳ ಅವಧಿಯಲ್ಲಿಯೇ ಅಜಿತ್ ಪವಾರ್ ಎರಡನೇ ಬಾರಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ಎನ್ಸಿಪಿ ಪಕ್ಷದ ಮುಖಂಡ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿಮತ್ತು ಶಿವಸೇನಾ ಶಾಸಕ ಆದಿತ್ಯ ಠಾಕ್ರೆ ಸಚಿವರಾಗಿ ಇಂದುಪ್ರಮಾಣ ವಚನ ಸ್ವೀಕರಿಸಿದರು.</p>.<p>ಶಿವಸೇನಾ, ಎನ್ಸಿಪಿ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಮಹಾರಾಷ್ಟ್ರದ ಮಹಾ ವಿಕಾಸ ಆಘಾಡಿ (ಎಂವಿಎ) ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ಪ್ರಮಾಣ ವಚನ ಸ್ವೀಕರಿಸಿದರು. 36 ಸಚಿವರಲ್ಲಿ 26 ಮಂದಿ ಸಂಪುಟ ದರ್ಜೆ ಹಾಗೂ 10 ಮಂದಿರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂಪುಟದಲ್ಲಿ ಕಾಂಗ್ರೆಸ್ನ ವರ್ಷಾ ಗಾಯಕ್ವಾಡ್ ಮತ್ತುಯಶೋಮತಿ ಠಾಕೂರ್, ಸಿಪಿಎಂನ ಅದಿತಿ ತಟ್ಕರೆಸಚಿವ ಸ್ಥಾನ ಸಿಕ್ಕಿದೆ. ಇದರಲ್ಲಿ ಇಬ್ಬರಿಗೆಸಂಪುಟ ದರ್ಜೆ ಸ್ಥಾನ ನೀಡಲಾಗಿದೆ.</p>.<p>ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್,ಶಂಕರ್ರಾವ್ ಚೌಹಾಣ್ ಅವರ ಮಗ ದಿಲೀಪ್ ವಾಲ್ಸೆ ಪಾಟೀಲ್ (ಎನ್ಸಿಪಿ)<br />ಎನ್ಸಿಪಿ ಮುಖಂಡ ದನಂಜಯ್ ಮುಂಡೆ,ಮಹಾ ವಿಕಾಸ್ ಅಗಡಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್ನ ವಿಜಯ್ ವಡೆತ್ತೀವಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಕಳೆದ ತಿಂಗಳು ನಡೆದ ನಾಟಕೀಯ ಬೆಳವಣಿಗೆಯಲ್ಲಿ ಅಜಿತ್ ಪವಾರ್ ಬಿಜೆಪಿ ಜೊತೆ ಕೈಜೋಡಿಸಿ ಸರ್ಕಾರ ರಚನೆ ಮಾಡಿದ್ದರು. ಆ ಸಂದರ್ಭದಲ್ಲಿ ಬೆಳಗಿನ ಜಾವ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 80 ಗಂಟೆಗಳ ಅವಧಿಯಲ್ಲಿಯೇ ಆ ಸರ್ಕಾರ ಬಿದ್ದಿತ್ತು. ಎರಡು ತಿಂಗಳ ಅವಧಿಯಲ್ಲಿಯೇ ಅಜಿತ್ ಪವಾರ್ ಎರಡನೇ ಬಾರಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>