<p><strong>ಮುಂಬೈ: </strong>ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವು ದೇವಾಲಯಗಳ ಜೀರ್ಣೋದ್ಧಾರ ಯೋಜನೆಗೆ ಒಪ್ಪಿಗೆ ನೀಡಿದೆ.</p>.<p>ಲಾಕ್ಡೌನ್ನಿಂದಾಗಿ ಮುಚ್ಚಲಾಗಿದ್ದ ದೇವಾಲಯಗಳನ್ನು ಪುನಃ ತೆರೆಯುವಲ್ಲಿ ಮಹಾರಾಷ್ಟ್ರ ಸರ್ಕಾರ ವಿಳಂಬ ಮಾಡಿದೆ ಎಂದು ಈ ಹಿಂದೆ ಬಿಜೆಪಿ ಟೀಕಿಸಿತ್ತು. ಇದರಿಂದಾಗಿ ಸರ್ಕಾರದ ಈಗಿನ ಕ್ರಮಕ್ಕೆ ರಾಜಕೀಯ ಮಹತ್ವ ಬಂದಿದೆ.</p>.<p>ಮಹಾರಾಷ್ಟ್ರ ಸರ್ಕಾರವು 2021–22ರ ವಾರ್ಷಿಕ ಬಜೆಟ್ನಲ್ಲಿ ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ₹101 ಕೋಟಿ ಮೀಸಲಿಟ್ಟಿದೆ. ಅಲ್ಲದೆ ಇದಕ್ಕಾಗಿ ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಅವರ ನೇತೃತ್ವದಲ್ಲಿ 9 ಮಂದಿಯ ಸಮಿತಿಯನ್ನು ಕೂಡ ರಚಿಸಿದೆ.</p>.<p>ಇತ್ತೀಚಿಗೆ ನಡೆದ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಹಳೆಯ ದೇವಾಲಯಗಳ ಜೀರ್ಣೋದ್ಧಾರದ ಯೋಜನೆ ಬಗ್ಗೆ ಉದ್ಧವ್ ಠಾಕ್ರೆ ಅವರು ಮಾಹಿತಿ ನೀಡಿದ್ದರು. ಬುಧವಾರ ನಡೆದ ಸಚಿವ ಸಂಪುಟ ಸಭೆಈ ಯೋಜನೆಗೆ ಅನುಮೋದನೆ ನೀಡಿದೆ.</p>.<p>ಹಣಕಾಸು, ಲೋಕೋಪಯೋಗಿ, ಪ್ರವಾಸೋದ್ಯಮ, ಪರಿಸರ, ಇಲಾಖೆಯ ಅಧಿಕಾರಿಗಳು ಅಲ್ಲದೆ ಸರ್ ಜೆಜೆ ಕಾಲೇಜ್ ಆಫ್ ಆರ್ಕಿಟೆಕ್ಚರ್ನ ಡೀನ್, ಪುರಾತತ್ವ ಮತ್ತು ವಸ್ತು ಸಂಗ್ರಹಾಲಯಗಳ ನಿರ್ದೇಶನಾಲಯದ ನಿರ್ದೇಶಕರು, ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು ಸಮಿತಿಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವು ದೇವಾಲಯಗಳ ಜೀರ್ಣೋದ್ಧಾರ ಯೋಜನೆಗೆ ಒಪ್ಪಿಗೆ ನೀಡಿದೆ.</p>.<p>ಲಾಕ್ಡೌನ್ನಿಂದಾಗಿ ಮುಚ್ಚಲಾಗಿದ್ದ ದೇವಾಲಯಗಳನ್ನು ಪುನಃ ತೆರೆಯುವಲ್ಲಿ ಮಹಾರಾಷ್ಟ್ರ ಸರ್ಕಾರ ವಿಳಂಬ ಮಾಡಿದೆ ಎಂದು ಈ ಹಿಂದೆ ಬಿಜೆಪಿ ಟೀಕಿಸಿತ್ತು. ಇದರಿಂದಾಗಿ ಸರ್ಕಾರದ ಈಗಿನ ಕ್ರಮಕ್ಕೆ ರಾಜಕೀಯ ಮಹತ್ವ ಬಂದಿದೆ.</p>.<p>ಮಹಾರಾಷ್ಟ್ರ ಸರ್ಕಾರವು 2021–22ರ ವಾರ್ಷಿಕ ಬಜೆಟ್ನಲ್ಲಿ ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ₹101 ಕೋಟಿ ಮೀಸಲಿಟ್ಟಿದೆ. ಅಲ್ಲದೆ ಇದಕ್ಕಾಗಿ ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಅವರ ನೇತೃತ್ವದಲ್ಲಿ 9 ಮಂದಿಯ ಸಮಿತಿಯನ್ನು ಕೂಡ ರಚಿಸಿದೆ.</p>.<p>ಇತ್ತೀಚಿಗೆ ನಡೆದ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಹಳೆಯ ದೇವಾಲಯಗಳ ಜೀರ್ಣೋದ್ಧಾರದ ಯೋಜನೆ ಬಗ್ಗೆ ಉದ್ಧವ್ ಠಾಕ್ರೆ ಅವರು ಮಾಹಿತಿ ನೀಡಿದ್ದರು. ಬುಧವಾರ ನಡೆದ ಸಚಿವ ಸಂಪುಟ ಸಭೆಈ ಯೋಜನೆಗೆ ಅನುಮೋದನೆ ನೀಡಿದೆ.</p>.<p>ಹಣಕಾಸು, ಲೋಕೋಪಯೋಗಿ, ಪ್ರವಾಸೋದ್ಯಮ, ಪರಿಸರ, ಇಲಾಖೆಯ ಅಧಿಕಾರಿಗಳು ಅಲ್ಲದೆ ಸರ್ ಜೆಜೆ ಕಾಲೇಜ್ ಆಫ್ ಆರ್ಕಿಟೆಕ್ಚರ್ನ ಡೀನ್, ಪುರಾತತ್ವ ಮತ್ತು ವಸ್ತು ಸಂಗ್ರಹಾಲಯಗಳ ನಿರ್ದೇಶನಾಲಯದ ನಿರ್ದೇಶಕರು, ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು ಸಮಿತಿಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>