‘ಇದು ಅತ್ಯಂತ ಖಂಡನೀಯ ಘಟನೆ. ಈ ಸಂಬಂಧ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ವಾಸ್ತವವಾಗಿ, ನಾವು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ’ಎಂದು ಪ್ರಾಂಶುಪಾಲರಾದ ಡಾ ಸುಚಿತ್ರಾ ನಾಯ್ಕ್ ಹೇಳಿದ್ದಾರೆ.
ವಿಡಿಯೊದಲ್ಲಿ ಹಲ್ಲೆ ನಡೆಸುತ್ತಿರುವರ ವ್ಯಕ್ತಿ ಎನ್ಸಿಸಿ ಕೆಡೆಟ್ ಎಂದೂ ಅವರು ಹೇಳಿದ್ದು, ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸಮಿತಿಯನ್ನು ಸಹ ರಚಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕಾಲೇಜಿನಲ್ಲಿ ಸುಮಾರು 40 ವರ್ಷಗಳಿಂದ ಇಲ್ಲಿ ಎನ್ಸಿಸಿ ತರಬೇತಿ ನಡೆಯುತ್ತಿದ್ದು, ಬೋಧಕರ ಅನುಪಸ್ಥಿತಿಯಲ್ಲಿ ಈ ಘಟನೆ ನಡೆದಿದೆ.
ಎನ್ಸಿಪಿ ಶಾಸಕ ಡಾ ಜಿತೇಂದ್ರ ಅವ್ಹಾದ್ ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಈ ಅಮಾನುಷ ಘಟನೆಯ ವಿರುದ್ಧ ಸರ್ಕಾರ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.