<p><strong>ಪುಣೆ:</strong> ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಳೆವಾಡಿಯಲ್ಲಿ ನಡೆದ ಗ್ರಾಮಸಭೆಯು, ಮುಂಬರುವ ಎಲ್ಲ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬದಲು ಮತಪತ್ರಗಳನ್ನು ಬಳಸಲು ನಿರ್ಣಯ ಅಂಗೀಕರಿಸಿದೆ. </p>.<p>ಈ ಮೂಲಕ, ಚುನಾವಣೆಗಳಲ್ಲಿ ಇವಿಎಂ ಬಳಕೆಯನ್ನು ನಿರ್ಬಂಧಿಸಿ ನಿರ್ಣಯ ಕೈಗೊಂಡಿರುವ ಮಹಾರಾಷ್ಟ್ರದ ಎರಡನೇ ಗ್ರಾಮ ಎನಿಸಿದೆ. </p>.<p>ಕೋಳೆವಾಡಿ ಗ್ರಾಮ ಪಂಚಾಯಿತಿಯು, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪೃಥ್ವಿರಾಜ್ ಚವಾಣ್ ಅವರು ಈ ಹಿಂದೆ ಪ್ರತಿನಿಧಿಸುತ್ತಿದ್ದ ಕರದ್ ವಿಧಾನಸಭಾ ಕ್ಷೇತ್ರದಲ್ಲಿದೆ. ಅವರು ಈ ವರ್ಷ ನವೆಂಬರ್ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅತುಲ್ ಭೋಸಲೆ ಎದುರು 39 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು.</p>.<p>ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರ ಬೆನ್ನಲ್ಲೆ, ಮುಂಬರುವ ಎಲ್ಲ ಚುನಾವಣೆಗಳಲ್ಲಿ ಮತಪತ್ರಗಳ ಮೂಲಕವೇ ಮತದಾನ ಪ್ರಕ್ರಿಯೆ ನಡೆಸಲು ಗ್ರಾಮಸಭೆಯು ನಿರ್ಣಯ ಅಂಗೀಕರಿಸಿದೆ.</p>.<p>ನಿರ್ಣಯದ ಪ್ರತಿ ಸಿಕ್ಕಿಲ್ಲ– ಜಿಲ್ಲಾಧಿಕಾರಿ: ‘ಚುನಾವಣೆಗಳಲ್ಲಿ ಇವಿಎಂ ಬದಲು ಮತಪತ್ರ ಬಳಸುವಂತೆ ಗ್ರಾಮಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯದ ಪ್ರತಿ ಜಿಲ್ಲಾಡಳಿತ ಕಚೇರಿಗೆ ಬಂದಿಲ್ಲ. ಹೀಗಾಗಿ, ಈ ಬಗ್ಗೆ ಈಗಲೇ ಮಾತನಾಡುವುದು ಸೂಕ್ತವಲ್ಲ. ನಿರ್ಣಯದ ಪ್ರತಿ ಸಿಕ್ಕ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಸಾತಾರಾ ಜಿಲ್ಲಾಧಿಕಾರಿ ಜಿತೇಂದ್ರ ಡೂಡಿ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಳೆವಾಡಿಯಲ್ಲಿ ನಡೆದ ಗ್ರಾಮಸಭೆಯು, ಮುಂಬರುವ ಎಲ್ಲ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರದ (ಇವಿಎಂ) ಬದಲು ಮತಪತ್ರಗಳನ್ನು ಬಳಸಲು ನಿರ್ಣಯ ಅಂಗೀಕರಿಸಿದೆ. </p>.<p>ಈ ಮೂಲಕ, ಚುನಾವಣೆಗಳಲ್ಲಿ ಇವಿಎಂ ಬಳಕೆಯನ್ನು ನಿರ್ಬಂಧಿಸಿ ನಿರ್ಣಯ ಕೈಗೊಂಡಿರುವ ಮಹಾರಾಷ್ಟ್ರದ ಎರಡನೇ ಗ್ರಾಮ ಎನಿಸಿದೆ. </p>.<p>ಕೋಳೆವಾಡಿ ಗ್ರಾಮ ಪಂಚಾಯಿತಿಯು, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪೃಥ್ವಿರಾಜ್ ಚವಾಣ್ ಅವರು ಈ ಹಿಂದೆ ಪ್ರತಿನಿಧಿಸುತ್ತಿದ್ದ ಕರದ್ ವಿಧಾನಸಭಾ ಕ್ಷೇತ್ರದಲ್ಲಿದೆ. ಅವರು ಈ ವರ್ಷ ನವೆಂಬರ್ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅತುಲ್ ಭೋಸಲೆ ಎದುರು 39 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು.</p>.<p>ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರ ಬೆನ್ನಲ್ಲೆ, ಮುಂಬರುವ ಎಲ್ಲ ಚುನಾವಣೆಗಳಲ್ಲಿ ಮತಪತ್ರಗಳ ಮೂಲಕವೇ ಮತದಾನ ಪ್ರಕ್ರಿಯೆ ನಡೆಸಲು ಗ್ರಾಮಸಭೆಯು ನಿರ್ಣಯ ಅಂಗೀಕರಿಸಿದೆ.</p>.<p>ನಿರ್ಣಯದ ಪ್ರತಿ ಸಿಕ್ಕಿಲ್ಲ– ಜಿಲ್ಲಾಧಿಕಾರಿ: ‘ಚುನಾವಣೆಗಳಲ್ಲಿ ಇವಿಎಂ ಬದಲು ಮತಪತ್ರ ಬಳಸುವಂತೆ ಗ್ರಾಮಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯದ ಪ್ರತಿ ಜಿಲ್ಲಾಡಳಿತ ಕಚೇರಿಗೆ ಬಂದಿಲ್ಲ. ಹೀಗಾಗಿ, ಈ ಬಗ್ಗೆ ಈಗಲೇ ಮಾತನಾಡುವುದು ಸೂಕ್ತವಲ್ಲ. ನಿರ್ಣಯದ ಪ್ರತಿ ಸಿಕ್ಕ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಸಾತಾರಾ ಜಿಲ್ಲಾಧಿಕಾರಿ ಜಿತೇಂದ್ರ ಡೂಡಿ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>