<p><strong>ಪುಣೆ:</strong> ಮುಂಬರುವ ಚುನಾವಣೆಗಳಲ್ಲಿ ಮತಪತ್ರಗಳನ್ನು ಬಳಸುವ ನಿರ್ಣಯವನ್ನು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಲೆವಾಡಿ ಗ್ರಾಮಸಭೆ ಮಂಗಳವಾರ ಅಂಗೀಕರಿಸಿದೆ. ಇದರೊಂದಿಗೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ರಾಜ್ಯದ ಎರಡನೇ ಗ್ರಾಮ ಇದಾಗಿದೆ.</p><p>ಕೋಲೆವಾಡಿ ಗ್ರಾಮವು ಕರಾಡ್ (ದಕ್ಷಿಣ) ವಿಧಾನಸಭೆ ಕ್ಷೇತ್ರದಲ್ಲಿ ಬರುತ್ತದೆ. ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ಅವರು ಪ್ರತಿನಿಧಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪೃಥ್ವಿರಾಜ್ ಅವರು ಬಿಜೆಪಿ ಅಭ್ಯರ್ಥಿ ಅತುಲ್ ಭೋಸ್ಲೆ ವಿರುದ್ಧ 39,355 ಮತಗಳಿಂದ ಸೋತಿದ್ದರು.</p><p>ಇವಿಎಂ ಮೂಲಕ ಚಲಾವಣೆಯಾದ ಮತಗಳ ಬಗ್ಗೆ ಕೋಲೆವಾಡಿ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ ಕಾರಣ ಮುಂಬರುವ ಚುನಾವಣೆಗಳಲ್ಲಿ ಮತಪತ್ರ ಬಳಸುವ ನಿರ್ಣಯವನ್ನು ಅಂಗೀಕರಿಸಲಾಗಿದೆ.</p><p>ಕೆಲವು ದಿನಗಳ ಹಿಂದೆ ಸೊಲ್ಲಾಪುರದ ಮಲ್ಶಿರಸ್ ಕ್ಷೇತ್ರದ ಮರ್ಕಡವಾಡಿಯ ಗ್ರಾಮಸ್ಥರು ಇವಿಎಂಗಳ ವಿಶ್ವಾಸಾರ್ಹತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮತಪತ್ರ ಬಳಸಿ ಮರು ಮತದಾನ ನಡೆಸಲು ಪ್ರಯತ್ನಿಸಿದ್ದರು. </p><p>ಮುಂಬರುವ ಚುನಾವಣೆಗಳಲ್ಲಿ ಇವಿಎಂ ಇಲ್ಲದೆಯೇ ಮತಪತ್ರ ಮೂಲಕ ಮತದಾನ ನಡೆಸಬೇಕು ಎಂದು ಕೋಳೆವಾಡಿ ಗ್ರಾಮಸಭೆ ನಿರ್ಣಯ ಅಂಗೀಕರಿಸಿದೆ ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.</p><p>ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಮತಪತ್ರ ಬಳಸಲು ಅನುಮತಿ ನೀಡಬೇಕು. ಮತಪತ್ರ ಬಳಸಿದರೆ ಮಾತ್ರ ಕೋಲೆವಾಡಿಯ ಜನರು ಮತ ಹಾಕುತ್ತಾರೆ ಎಂದು ಸಂಕಲ್ಪ ಮಾಡಿದ್ದೇವೆ. ಮುಂದಿನ ಚುನಾವಣೆಯಲ್ಲಿ ಇವಿಎಂ ಬಳಸಿದರೆ ನಾವು ಮತ ಹಾಕುವುದಿಲ್ಲ ಎಂದು ಅವರು ಹೇಳಿದ್ದಾರೆ.</p><p>ಮತಪತ್ರಗಳ ಮೂಲಕ ಮತದಾನ ಮಾಡಲು ನಮಗೆ ಅವಕಾಶ ನೀಡದಿದ್ದರೆ, ನಾವು ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಮುಂಬರುವ ಚುನಾವಣೆಗಳಲ್ಲಿ ಮತಪತ್ರಗಳನ್ನು ಬಳಸುವ ನಿರ್ಣಯವನ್ನು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಲೆವಾಡಿ ಗ್ರಾಮಸಭೆ ಮಂಗಳವಾರ ಅಂಗೀಕರಿಸಿದೆ. ಇದರೊಂದಿಗೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ರಾಜ್ಯದ ಎರಡನೇ ಗ್ರಾಮ ಇದಾಗಿದೆ.</p><p>ಕೋಲೆವಾಡಿ ಗ್ರಾಮವು ಕರಾಡ್ (ದಕ್ಷಿಣ) ವಿಧಾನಸಭೆ ಕ್ಷೇತ್ರದಲ್ಲಿ ಬರುತ್ತದೆ. ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ಅವರು ಪ್ರತಿನಿಧಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪೃಥ್ವಿರಾಜ್ ಅವರು ಬಿಜೆಪಿ ಅಭ್ಯರ್ಥಿ ಅತುಲ್ ಭೋಸ್ಲೆ ವಿರುದ್ಧ 39,355 ಮತಗಳಿಂದ ಸೋತಿದ್ದರು.</p><p>ಇವಿಎಂ ಮೂಲಕ ಚಲಾವಣೆಯಾದ ಮತಗಳ ಬಗ್ಗೆ ಕೋಲೆವಾಡಿ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ ಕಾರಣ ಮುಂಬರುವ ಚುನಾವಣೆಗಳಲ್ಲಿ ಮತಪತ್ರ ಬಳಸುವ ನಿರ್ಣಯವನ್ನು ಅಂಗೀಕರಿಸಲಾಗಿದೆ.</p><p>ಕೆಲವು ದಿನಗಳ ಹಿಂದೆ ಸೊಲ್ಲಾಪುರದ ಮಲ್ಶಿರಸ್ ಕ್ಷೇತ್ರದ ಮರ್ಕಡವಾಡಿಯ ಗ್ರಾಮಸ್ಥರು ಇವಿಎಂಗಳ ವಿಶ್ವಾಸಾರ್ಹತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮತಪತ್ರ ಬಳಸಿ ಮರು ಮತದಾನ ನಡೆಸಲು ಪ್ರಯತ್ನಿಸಿದ್ದರು. </p><p>ಮುಂಬರುವ ಚುನಾವಣೆಗಳಲ್ಲಿ ಇವಿಎಂ ಇಲ್ಲದೆಯೇ ಮತಪತ್ರ ಮೂಲಕ ಮತದಾನ ನಡೆಸಬೇಕು ಎಂದು ಕೋಳೆವಾಡಿ ಗ್ರಾಮಸಭೆ ನಿರ್ಣಯ ಅಂಗೀಕರಿಸಿದೆ ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.</p><p>ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಮತಪತ್ರ ಬಳಸಲು ಅನುಮತಿ ನೀಡಬೇಕು. ಮತಪತ್ರ ಬಳಸಿದರೆ ಮಾತ್ರ ಕೋಲೆವಾಡಿಯ ಜನರು ಮತ ಹಾಕುತ್ತಾರೆ ಎಂದು ಸಂಕಲ್ಪ ಮಾಡಿದ್ದೇವೆ. ಮುಂದಿನ ಚುನಾವಣೆಯಲ್ಲಿ ಇವಿಎಂ ಬಳಸಿದರೆ ನಾವು ಮತ ಹಾಕುವುದಿಲ್ಲ ಎಂದು ಅವರು ಹೇಳಿದ್ದಾರೆ.</p><p>ಮತಪತ್ರಗಳ ಮೂಲಕ ಮತದಾನ ಮಾಡಲು ನಮಗೆ ಅವಕಾಶ ನೀಡದಿದ್ದರೆ, ನಾವು ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>