<p><strong>ಮುಂಬೈ: </strong>ಎನ್ಸಿಪಿ ಕಾರ್ಯಕರ್ತೆಯೊಬ್ಬರನ್ನು ಬೈಕ್ ಸವಾರರಿಬ್ಬರು ಗಂಟಲು ಕತ್ತರಿಸಿ ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದರು.</p>.<p>ಸೋಮವಾರ ರಾತ್ರಿ 8.20ರ ಸುಮಾರಿಗೆ ರೇಖಾ ಬಾಹುಸಾಹೇಬ್ ಜಾರೆ ಅವರುತನ್ನ ತಾಯಿ, ಮಗ ಮತ್ತು ಸ್ನೇಹಿತೆಯೊಂದಿಗೆ ಪುಣೆಯಿಂದ ಅಹ್ಮದ್ನಗರಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.</p>.<p>ಆರೋಪಿಗಳು ಪಾರ್ನರ್ನ ಜಟಗಾಂವ್ ಘಾಟ್ನಲ್ಲಿ ರೇಖಾ ಅವರ ಕಾರನ್ನು ತಡೆದರು. ಅಲ್ಲಿ ಆರೋಪಿಗಳು ಮತ್ತು ರೇಖಾ ಅವರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಆರೋಪಿಯೊಬ್ಬ ರೇಖಾ ಅವರ ಮೇಲೆಚಾಕುವಿನಿಂದ ಹಲ್ಲೆ ನಡೆಸಿದ್ದು, ಗಂಟಲು ಕತ್ತರಿಸಿ ಕೊಂದಿದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದರು ಎಂದು ಅವರು ಮಾಹಿತಿ ನೀಡಿದರು.</p>.<p>ಅಹ್ಮದ್ನಗರ ಸುಪಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಈ ಹತ್ಯೆ ಹಿಂದಿರುವ ಕಾರಣಗಳನ್ನು ಪತ್ತೆಹಚ್ಚುವ ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<p>ರೇಖಾ ಬಾಹುಸಾಹೇಬ್ ಜಾರೆ ಅವರು ಯಶಸ್ವಿನಿ ಮಹಿಳಾ ಬ್ರಿಗೇಡ್ ಎಂಬ ಮಹಿಳಾ ಸಂಘಟನೆಯ ಅಧ್ಯಕ್ಷರೂ ಆಗಿದ್ದರು. ಈ ಸ್ಥಳೀಯ ಸಂಸ್ಥೆ ಮಹಿಳಾ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಎನ್ಸಿಪಿ ಕಾರ್ಯಕರ್ತೆಯೊಬ್ಬರನ್ನು ಬೈಕ್ ಸವಾರರಿಬ್ಬರು ಗಂಟಲು ಕತ್ತರಿಸಿ ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದರು.</p>.<p>ಸೋಮವಾರ ರಾತ್ರಿ 8.20ರ ಸುಮಾರಿಗೆ ರೇಖಾ ಬಾಹುಸಾಹೇಬ್ ಜಾರೆ ಅವರುತನ್ನ ತಾಯಿ, ಮಗ ಮತ್ತು ಸ್ನೇಹಿತೆಯೊಂದಿಗೆ ಪುಣೆಯಿಂದ ಅಹ್ಮದ್ನಗರಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.</p>.<p>ಆರೋಪಿಗಳು ಪಾರ್ನರ್ನ ಜಟಗಾಂವ್ ಘಾಟ್ನಲ್ಲಿ ರೇಖಾ ಅವರ ಕಾರನ್ನು ತಡೆದರು. ಅಲ್ಲಿ ಆರೋಪಿಗಳು ಮತ್ತು ರೇಖಾ ಅವರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಆರೋಪಿಯೊಬ್ಬ ರೇಖಾ ಅವರ ಮೇಲೆಚಾಕುವಿನಿಂದ ಹಲ್ಲೆ ನಡೆಸಿದ್ದು, ಗಂಟಲು ಕತ್ತರಿಸಿ ಕೊಂದಿದ್ದಾರೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದರು ಎಂದು ಅವರು ಮಾಹಿತಿ ನೀಡಿದರು.</p>.<p>ಅಹ್ಮದ್ನಗರ ಸುಪಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಈ ಹತ್ಯೆ ಹಿಂದಿರುವ ಕಾರಣಗಳನ್ನು ಪತ್ತೆಹಚ್ಚುವ ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<p>ರೇಖಾ ಬಾಹುಸಾಹೇಬ್ ಜಾರೆ ಅವರು ಯಶಸ್ವಿನಿ ಮಹಿಳಾ ಬ್ರಿಗೇಡ್ ಎಂಬ ಮಹಿಳಾ ಸಂಘಟನೆಯ ಅಧ್ಯಕ್ಷರೂ ಆಗಿದ್ದರು. ಈ ಸ್ಥಳೀಯ ಸಂಸ್ಥೆ ಮಹಿಳಾ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>