<p><strong>ಮುಂಬೈ:</strong> ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿರುವ ವಿರೋಧ ಪಕ್ಷಗಳ ನಾಯಕರು ಶುಕ್ರವಾರ ಸಭಾತ್ಯಾಗ ಮಾಡಿದ್ದಾರೆ.</p>.<p>ಮೋದಿ ಉಪನಾಮ ಕುರಿತಂತೆ 2019ರಲ್ಲಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥರು ಎಂದು ಸೂರತ್ ನ್ಯಾಯಾಲಯ ಗುರುವಾರವಷ್ಟೇ ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇಂದು (ಶುಕ್ರವಾರ) ಲೋಕಸಭೆ ಕಾರ್ಯದರ್ಶಿ ಅವರು, ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿದ್ದಾರೆ.</p>.<p>ಇದನ್ನು ಟೀಕಿಸಿರುವ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ನಾನಾ ಪಟೋಲೆ ಅವರು, 'ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ನಿರ್ಧಾರವನ್ನು ನಾವು ಖಂಡಿಸುತ್ತೇವೆ. ಪ್ರತಿಭಟನಾರ್ಥವಾಗಿ ಸಭಾತ್ಯಾಗ ಮಾಡಲು ನಿರ್ಧರಿಸಿದ್ದೇವೆ' ಎಂದಿದ್ದಾರೆ.</p>.<p>ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ), ಶಿವಸೇನಾ (ಉದ್ಧವ್ ಠಾಕ್ರೆ ಬಣ) ಶಾಸಕರೂ ವಿಧಾನಭವನದ ಮೆಟ್ಟಿಲುಗಳ ಮೇಲೆ ಪ್ರತಿಭಟನೆ ನಡೆಸಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ ಶಿವಸೇನಾ (ಏಕನಾಥ ಶಿಂದೆ ಬಣ) ಹಾಗೂ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದೆ.</p>.<p>ವಿರೋಧ ಪಕ್ಷಗಳ ನಡೆಯನ್ನು ಟೀಕಿಸಿರುವ ಬಿಜೆಪಿ ಶಾಸಕ ಅತುಲ್ ಭಟ್ಖಲ್ಕರ್, ಸದಸ್ಯರು ತಪ್ಪಿತಸ್ಥರೆಂದು ಸಾಬೀತಾದರೆ ಅಂತಹವರನ್ನು ಅನರ್ಹಗೊಳಿಸುವ ಕಾನೂನನ್ನು ಕಾಂಗ್ರೆಸ್ ನೇತೃತ್ವದಲ್ಲಿ ಈ ಹಿಂದೆ ಅಸ್ತಿತ್ವದಲ್ಲಿದ್ದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲಯನ್ಸ್ (ಯಪಿಎ) ಸರ್ಕಾರವೇ ರೂಪಿಸಿತ್ತು. ಆ ಕಾನೂನನ್ನೇ ಕೇಂದ್ರ ಸರ್ಕಾರ ಜಾರಿಗೊಳಿಸಿದೆ ಎಂದು ಹೇಳಿದ್ದಾರೆ. ಹಾಗೆಯೇ, 'ಕಾಂಗ್ರೆಸ್ ಶಾಸಕರು ಸಭಾತ್ಯಾಗ ಮಾಡಿರುವುದು ಹಾಸ್ಯಾಸ್ಪದ' ಕುಟುಕಿದ್ದಾರೆ.</p>.<p>2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್, 'ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ' ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ಮೂಲಕ ರಾಹುಲ್ ಅವರು ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.</p>.<p><strong>ಇವನ್ನೂ ಓದಿ<br />* </strong><a href="https://www.prajavani.net/india-news/rahul-gandhi-defamation-case-live-updates-surat-court-convicts-rahul-gandhi-in-2019-defamation-case-1025794.html" itemprop="url" target="_blank">‘ಮೋದಿ‘ ಉಪನಾಮಕ್ಕೆ ಅಪಮಾನ ಪ್ರಕರಣ: ರಾಹುಲ್ ಗಾಂಧಿ ತಪ್ಪಿತಸ್ಥ </a><br />* <a href="https://www.prajavani.net/india-news/indias-parliament-disqualifies-opposition-leader-rahul-gandhi-1026015.html" itemprop="url" target="_blank">ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿ ಅಧಿಸೂಚನೆ</a><br /><strong>* </strong><a href="https://www.prajavani.net/india-news/congress-plans-mass-agitation-to-meet-droupadi-murmu-to-discuss-rahul-gandhis-conviction-1025999.html" target="_blank">ರಾಹುಲ್ ಗಾಂಧಿ ಪರ ದೆಹಲಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿರುವ ವಿರೋಧ ಪಕ್ಷಗಳ ನಾಯಕರು ಶುಕ್ರವಾರ ಸಭಾತ್ಯಾಗ ಮಾಡಿದ್ದಾರೆ.</p>.<p>ಮೋದಿ ಉಪನಾಮ ಕುರಿತಂತೆ 2019ರಲ್ಲಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥರು ಎಂದು ಸೂರತ್ ನ್ಯಾಯಾಲಯ ಗುರುವಾರವಷ್ಟೇ ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇಂದು (ಶುಕ್ರವಾರ) ಲೋಕಸಭೆ ಕಾರ್ಯದರ್ಶಿ ಅವರು, ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿದ್ದಾರೆ.</p>.<p>ಇದನ್ನು ಟೀಕಿಸಿರುವ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ನಾನಾ ಪಟೋಲೆ ಅವರು, 'ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ನಿರ್ಧಾರವನ್ನು ನಾವು ಖಂಡಿಸುತ್ತೇವೆ. ಪ್ರತಿಭಟನಾರ್ಥವಾಗಿ ಸಭಾತ್ಯಾಗ ಮಾಡಲು ನಿರ್ಧರಿಸಿದ್ದೇವೆ' ಎಂದಿದ್ದಾರೆ.</p>.<p>ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ), ಶಿವಸೇನಾ (ಉದ್ಧವ್ ಠಾಕ್ರೆ ಬಣ) ಶಾಸಕರೂ ವಿಧಾನಭವನದ ಮೆಟ್ಟಿಲುಗಳ ಮೇಲೆ ಪ್ರತಿಭಟನೆ ನಡೆಸಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ ಶಿವಸೇನಾ (ಏಕನಾಥ ಶಿಂದೆ ಬಣ) ಹಾಗೂ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದೆ.</p>.<p>ವಿರೋಧ ಪಕ್ಷಗಳ ನಡೆಯನ್ನು ಟೀಕಿಸಿರುವ ಬಿಜೆಪಿ ಶಾಸಕ ಅತುಲ್ ಭಟ್ಖಲ್ಕರ್, ಸದಸ್ಯರು ತಪ್ಪಿತಸ್ಥರೆಂದು ಸಾಬೀತಾದರೆ ಅಂತಹವರನ್ನು ಅನರ್ಹಗೊಳಿಸುವ ಕಾನೂನನ್ನು ಕಾಂಗ್ರೆಸ್ ನೇತೃತ್ವದಲ್ಲಿ ಈ ಹಿಂದೆ ಅಸ್ತಿತ್ವದಲ್ಲಿದ್ದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲಯನ್ಸ್ (ಯಪಿಎ) ಸರ್ಕಾರವೇ ರೂಪಿಸಿತ್ತು. ಆ ಕಾನೂನನ್ನೇ ಕೇಂದ್ರ ಸರ್ಕಾರ ಜಾರಿಗೊಳಿಸಿದೆ ಎಂದು ಹೇಳಿದ್ದಾರೆ. ಹಾಗೆಯೇ, 'ಕಾಂಗ್ರೆಸ್ ಶಾಸಕರು ಸಭಾತ್ಯಾಗ ಮಾಡಿರುವುದು ಹಾಸ್ಯಾಸ್ಪದ' ಕುಟುಕಿದ್ದಾರೆ.</p>.<p>2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್, 'ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ' ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ಮೂಲಕ ರಾಹುಲ್ ಅವರು ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.</p>.<p><strong>ಇವನ್ನೂ ಓದಿ<br />* </strong><a href="https://www.prajavani.net/india-news/rahul-gandhi-defamation-case-live-updates-surat-court-convicts-rahul-gandhi-in-2019-defamation-case-1025794.html" itemprop="url" target="_blank">‘ಮೋದಿ‘ ಉಪನಾಮಕ್ಕೆ ಅಪಮಾನ ಪ್ರಕರಣ: ರಾಹುಲ್ ಗಾಂಧಿ ತಪ್ಪಿತಸ್ಥ </a><br />* <a href="https://www.prajavani.net/india-news/indias-parliament-disqualifies-opposition-leader-rahul-gandhi-1026015.html" itemprop="url" target="_blank">ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿ ಅಧಿಸೂಚನೆ</a><br /><strong>* </strong><a href="https://www.prajavani.net/india-news/congress-plans-mass-agitation-to-meet-droupadi-murmu-to-discuss-rahul-gandhis-conviction-1025999.html" target="_blank">ರಾಹುಲ್ ಗಾಂಧಿ ಪರ ದೆಹಲಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>