<p><strong>ನಾಂದೇಡ್:</strong> ಅಖಿಲ ಭಾರತ ಕಾಂಗ್ರೆಸ್ ಸೇವಾ ದಳದ ಪ್ರಧಾನ ಕಾರ್ಯದರ್ಶಿ ಕೃಷ್ಣ ಕುಮಾರ್ ಪಾಂಡೆ ಮಂಗಳವಾರ ನಡೆಯುತ್ತಿದ್ದ ಕಾಂಗ್ರೆಸ್ ಜೋಡೋ ಯಾತ್ರೆಯ ವೇಳೆಯೇ ಹೃದಯಾಘಾತದಿಂದ ನಿಧನರಾಗಿದ್ದಾರೆ.</p>.<p>ಪಕ್ಷದಲ್ಲಿ ‘ಪಾಂಡೆ’ ಎಂದೇ ಚಿರಪರಿಚಿತರಾಗಿದ್ದ ಕೃಷ್ಣ ಕುಮಾರ್, ತ್ರಿವರ್ಣ ಧ್ವಜವನ್ನು ಹಿಡಿದಿದ್ದರು ಮತ್ತು ಯಾತ್ರೆಯಲ್ಲಿ ದಿಗ್ವಿಜಯ್ ಸಿಂಗ್ ಮತ್ತು ಇತರ ಮುಖಂಡರ ಜೊತೆ ನಡೆದುಕೊಂಡು ಹೋಗುತ್ತಿದ್ದರು. ಎದೆನೋವು ಕಾಣಿಸಿಕೊಂಡಿದ್ದು, ಕೈಯ್ಯಲಿದ್ದ ಧ್ವಜವನ್ನು ಪಕ್ಕದಲ್ಲಿದ್ದವರಿಗೆ ನೀಡಿ ಕುಸಿದುಬಿದ್ದಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.</p>.<p>ತಕ್ಷಣ ಅಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಸೇರಿಸಲಾಗಿದೆ. ಪಾಂಡೆ ನಿಧನರಾಗಿರುವುದನ್ನು ವೈದ್ಯರು ಖಚಿತಪಡಿಸಿದರು ಎಂದು ಅವರು ತಿಳಿಸಿದ್ದಾರೆ.</p>.<p>62 ದಿನಗಳಿಂದ ನಡೆಯುತ್ತಿರುವ ಯಾತ್ರೆ ಇಂದು ಮಹಾರಾಷ್ಟ್ರ ಪ್ರವೇಶಿಸಿತ್ತು. ಪಾಂಡೆ ಪುತ್ರನನ್ನು ಯಾತ್ರೆಗೆ ಕರೆಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಇತರರು ಮೃತರಿಗೆ ಸಂತಾಪ ಸೂಚಿಸಿದರು.</p>.<p>‘ಪಾಂಡೆ ನಿಧನ ಕಾಂಗ್ರೆಸ್ ಕುಟುಂಬಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಬದುಕಿನ ಕೊನೆಯ ಕ್ಷಣದಲ್ಲಿ ಅವರು ತ್ರಿವರ್ಣ ಧ್ವಜ ಹಿಡಿದಿದ್ದರು. ದೇಶಕ್ಕೆ ಅವರ ಸೇವೆ ನಮಗೆ ಸ್ಫೂರ್ತಿ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಪಾಂಡೆ ಅವರ ಹುಟ್ಟೂರು ನಾಗ್ಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈ ದುರ್ಘಟನೆಯಿಂದಾಗಿ ಜೋಡೋಯಾತ್ರೆ ಮೌನಮೆರವಣಿಗೆಯಾಗಿ ಮುಂದುವರಿಯಿತು. ಸಂಜೆ ಪಾಂಡೆ ಭೋಪಾಲ ಹಳ್ಳಿಯಲ್ಲಿ ಸಂತಾಪ ಸಭೆ ನಡೆಯಲಿದೆ ಎಂದು ಜೈರಾಂ ರಮೇಶ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಂದೇಡ್:</strong> ಅಖಿಲ ಭಾರತ ಕಾಂಗ್ರೆಸ್ ಸೇವಾ ದಳದ ಪ್ರಧಾನ ಕಾರ್ಯದರ್ಶಿ ಕೃಷ್ಣ ಕುಮಾರ್ ಪಾಂಡೆ ಮಂಗಳವಾರ ನಡೆಯುತ್ತಿದ್ದ ಕಾಂಗ್ರೆಸ್ ಜೋಡೋ ಯಾತ್ರೆಯ ವೇಳೆಯೇ ಹೃದಯಾಘಾತದಿಂದ ನಿಧನರಾಗಿದ್ದಾರೆ.</p>.<p>ಪಕ್ಷದಲ್ಲಿ ‘ಪಾಂಡೆ’ ಎಂದೇ ಚಿರಪರಿಚಿತರಾಗಿದ್ದ ಕೃಷ್ಣ ಕುಮಾರ್, ತ್ರಿವರ್ಣ ಧ್ವಜವನ್ನು ಹಿಡಿದಿದ್ದರು ಮತ್ತು ಯಾತ್ರೆಯಲ್ಲಿ ದಿಗ್ವಿಜಯ್ ಸಿಂಗ್ ಮತ್ತು ಇತರ ಮುಖಂಡರ ಜೊತೆ ನಡೆದುಕೊಂಡು ಹೋಗುತ್ತಿದ್ದರು. ಎದೆನೋವು ಕಾಣಿಸಿಕೊಂಡಿದ್ದು, ಕೈಯ್ಯಲಿದ್ದ ಧ್ವಜವನ್ನು ಪಕ್ಕದಲ್ಲಿದ್ದವರಿಗೆ ನೀಡಿ ಕುಸಿದುಬಿದ್ದಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.</p>.<p>ತಕ್ಷಣ ಅಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಸೇರಿಸಲಾಗಿದೆ. ಪಾಂಡೆ ನಿಧನರಾಗಿರುವುದನ್ನು ವೈದ್ಯರು ಖಚಿತಪಡಿಸಿದರು ಎಂದು ಅವರು ತಿಳಿಸಿದ್ದಾರೆ.</p>.<p>62 ದಿನಗಳಿಂದ ನಡೆಯುತ್ತಿರುವ ಯಾತ್ರೆ ಇಂದು ಮಹಾರಾಷ್ಟ್ರ ಪ್ರವೇಶಿಸಿತ್ತು. ಪಾಂಡೆ ಪುತ್ರನನ್ನು ಯಾತ್ರೆಗೆ ಕರೆಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಇತರರು ಮೃತರಿಗೆ ಸಂತಾಪ ಸೂಚಿಸಿದರು.</p>.<p>‘ಪಾಂಡೆ ನಿಧನ ಕಾಂಗ್ರೆಸ್ ಕುಟುಂಬಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಬದುಕಿನ ಕೊನೆಯ ಕ್ಷಣದಲ್ಲಿ ಅವರು ತ್ರಿವರ್ಣ ಧ್ವಜ ಹಿಡಿದಿದ್ದರು. ದೇಶಕ್ಕೆ ಅವರ ಸೇವೆ ನಮಗೆ ಸ್ಫೂರ್ತಿ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಪಾಂಡೆ ಅವರ ಹುಟ್ಟೂರು ನಾಗ್ಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಈ ದುರ್ಘಟನೆಯಿಂದಾಗಿ ಜೋಡೋಯಾತ್ರೆ ಮೌನಮೆರವಣಿಗೆಯಾಗಿ ಮುಂದುವರಿಯಿತು. ಸಂಜೆ ಪಾಂಡೆ ಭೋಪಾಲ ಹಳ್ಳಿಯಲ್ಲಿ ಸಂತಾಪ ಸಭೆ ನಡೆಯಲಿದೆ ಎಂದು ಜೈರಾಂ ರಮೇಶ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>