<p><strong>ಪುಣೆ</strong>: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಭಾನುವಾರ ಎಸ್ಯುವಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಮೃತಪಟ್ಟಿದ್ದಾರೆ.</p>.<p>ಪಂಡರಾಪುರ-ಮೊಹೊಲ್ ಹೆದ್ದಾರಿಯಲ್ಲಿರುವ ಪೆನೂರ್ ಗ್ರಾಮದ ಬಳಿ ಭಾನುವಾರ ಸಂಜೆ 4.30ಕ್ಕೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಹೆದ್ದಾರಿಯ ಒಂದು ಬದಿಯಲ್ಲಿ ಕೆಲವು ಕಾಮಗಾರಿಗಳು ನಡೆಯುತ್ತಿವೆ. ಆ ಕಾರಣ ವಾಹನಗಳು ಒಂದು ಬದಿಯಲ್ಲಿ ಮಾತ್ರ ಸಂಚರಿಸುತ್ತಿವೆ. ಆ ಸ್ಥಳದಲ್ಲಿ ಮತ್ತೊಂದು ವಾಹನವನ್ನು ಹಿಂದಿಕ್ಕಲು ಎಸ್ಯುವಿ ಯತ್ನಿಸಿದೆ. ಆಗ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ’ ಎಂದು ಮೊಹೊಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಶೋಕ್ ಸಾಯಿಕರ್ ತಿಳಿಸಿದ್ದಾರೆ.</p>.<p>ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಹತ್ತಿರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.</p>.<p>ಎಸ್ಯುವಿಯಲ್ಲಿದ್ದವರಿಗೂ ಗಾಯಗಳಾಗಿದ್ದು, ಅವರನ್ನು ಪಂಡರಾಪುರ ಮತ್ತು ಮೊಹೊಲ್ನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ</strong>: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯಲ್ಲಿ ಭಾನುವಾರ ಎಸ್ಯುವಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಮೃತಪಟ್ಟಿದ್ದಾರೆ.</p>.<p>ಪಂಡರಾಪುರ-ಮೊಹೊಲ್ ಹೆದ್ದಾರಿಯಲ್ಲಿರುವ ಪೆನೂರ್ ಗ್ರಾಮದ ಬಳಿ ಭಾನುವಾರ ಸಂಜೆ 4.30ಕ್ಕೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಹೆದ್ದಾರಿಯ ಒಂದು ಬದಿಯಲ್ಲಿ ಕೆಲವು ಕಾಮಗಾರಿಗಳು ನಡೆಯುತ್ತಿವೆ. ಆ ಕಾರಣ ವಾಹನಗಳು ಒಂದು ಬದಿಯಲ್ಲಿ ಮಾತ್ರ ಸಂಚರಿಸುತ್ತಿವೆ. ಆ ಸ್ಥಳದಲ್ಲಿ ಮತ್ತೊಂದು ವಾಹನವನ್ನು ಹಿಂದಿಕ್ಕಲು ಎಸ್ಯುವಿ ಯತ್ನಿಸಿದೆ. ಆಗ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ’ ಎಂದು ಮೊಹೊಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಶೋಕ್ ಸಾಯಿಕರ್ ತಿಳಿಸಿದ್ದಾರೆ.</p>.<p>ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಹತ್ತಿರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.</p>.<p>ಎಸ್ಯುವಿಯಲ್ಲಿದ್ದವರಿಗೂ ಗಾಯಗಳಾಗಿದ್ದು, ಅವರನ್ನು ಪಂಡರಾಪುರ ಮತ್ತು ಮೊಹೊಲ್ನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>