ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಪುವಿನ ಉದಾತ್ತ ತತ್ವಗಳು ಜಗತ್ತಿಗೆ ಪ್ರಸ್ತುತ: ಗಾಂಧಿ ಜಯಂತಿಗೆ ಮೋದಿ ಶುಭಾಶಯ

Last Updated 2 ಅಕ್ಟೋಬರ್ 2021, 3:11 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮದಿನವನ್ನು ಆಚರಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಸೇರಿದಂತೆ ರಾಷ್ಟ್ರದ ಹಲವು ಗಣ್ಯ ನಾಯಕರು ಟ್ವೀಟ್‌ ಮೂಲಕ ಶುಭಾಶಯ ಕೋರಿದ್ದಾರೆ.

'ಗಾಂಧಿ ಜಯಂತಿಯಂದು ಗೌರವಾನ್ವಿತ ಬಾಪು ಅವರಿಗೆ ನಾನು ತಲೆಬಾಗುತ್ತೇನೆ. ಅವರ ಉದಾತ್ತ ತತ್ವಗಳು ಜಾಗತಿಕವಾಗಿ ಪ್ರಸ್ತುತವಾಗಿವೆ ಮತ್ತು ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡಿವೆ' ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ. ಇದೇ ವೇಳೆ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರನ್ನೂ ಮೋದಿ ಸ್ಮರಿಸಿದ್ದಾರೆ.

ರಾಜನಾಥ್ ಸಿಂಗ್, ನಿತೀನ್‌ ಗಡ್ಕರಿ, ಪ್ರಲ್ಹಾದ ಜೋಶಿ, ಬಸವರಾಜ ಬೊಮ್ಮಾಯಿ,ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಶುಭಾಶಯ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT