<p><strong>ಗಾಜಿಯಾಬಾದ್ (ಉತ್ತರ ಪ್ರದೇಶ):</strong> ವಿವಾದಾತ್ಮಕ ಹೇಳಿಕೆಗಳಿಗೆ ಖ್ಯಾತರಾಗಿರುವ ಯತಿ ನರಸಿಂಗಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ.</p><p>ದ್ವೇಷ ಹರಡುವಿಕೆ ಮತ್ತು ಪೊಲೀಸ್ ಅಧಿಕಾರಿಗಳನ್ನು ವಿಡಿಯೊದಲ್ಲಿ ನಿಂದಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p><p>ಧಾರ್ಮಿಕ ಭಾವನೆಗಳನ್ನು ಪ್ರಚೋದಿಸಿದ್ದಾರೆ. ಕ್ರಿಮಿನಲ್ ಬೆದರಿಕೆಗೆ ಕಾರಣವಾಗುವಂತಹ ಹಾಗೂ ಅಪಮಾನಕಾರಿ, ಮಾನಹಾನಕಾರಿ ಮತ್ತು ಸಾರ್ವಜನಿಕ ಶಾಂತಿಯನ್ನು ಭಂಗಗೊಳಿಸುವ ಉದ್ದೇಶದಿಂದಲೇ ಕೆಲವೊಂದು ಪದ ಬಳಸಿದ್ದಾರೆ. ಮಹಾತ್ಮಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಗಾಜಿಯಾಬಾದ್ನ ಪೊಲೀಸ್ ಕಮಿಷನರ್, ಲೋನಿಯ ಸಹಾಯಕ ಪೊಲೀಸ್ ಕಮಿಷನರ್ ವಿರುದ್ಧ ವಿಡಿಯೊದಲ್ಲಿ ನರಸಿಂಗಾನಂದ ಗಿರಿ ಅವರು ನಿಂದನಾತ್ಮಕ ಭಾಷೆ ಬಳಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.</p><p>ವೇವ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಾಗಿದ್ದು, ಈ ಕುರಿತಂತೆ ತನಿಖೆ ನಡೆದಿದೆ ಎಂದು ಡಿಸಿಪಿ (ಗ್ರಾಮೀಣ) ಸುರೇಂದ್ರನಾಥ್ ತಿವಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಿಯಾಬಾದ್ (ಉತ್ತರ ಪ್ರದೇಶ):</strong> ವಿವಾದಾತ್ಮಕ ಹೇಳಿಕೆಗಳಿಗೆ ಖ್ಯಾತರಾಗಿರುವ ಯತಿ ನರಸಿಂಗಾನಂದ ಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ.</p><p>ದ್ವೇಷ ಹರಡುವಿಕೆ ಮತ್ತು ಪೊಲೀಸ್ ಅಧಿಕಾರಿಗಳನ್ನು ವಿಡಿಯೊದಲ್ಲಿ ನಿಂದಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p><p>ಧಾರ್ಮಿಕ ಭಾವನೆಗಳನ್ನು ಪ್ರಚೋದಿಸಿದ್ದಾರೆ. ಕ್ರಿಮಿನಲ್ ಬೆದರಿಕೆಗೆ ಕಾರಣವಾಗುವಂತಹ ಹಾಗೂ ಅಪಮಾನಕಾರಿ, ಮಾನಹಾನಕಾರಿ ಮತ್ತು ಸಾರ್ವಜನಿಕ ಶಾಂತಿಯನ್ನು ಭಂಗಗೊಳಿಸುವ ಉದ್ದೇಶದಿಂದಲೇ ಕೆಲವೊಂದು ಪದ ಬಳಸಿದ್ದಾರೆ. ಮಹಾತ್ಮಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.</p><p>ಗಾಜಿಯಾಬಾದ್ನ ಪೊಲೀಸ್ ಕಮಿಷನರ್, ಲೋನಿಯ ಸಹಾಯಕ ಪೊಲೀಸ್ ಕಮಿಷನರ್ ವಿರುದ್ಧ ವಿಡಿಯೊದಲ್ಲಿ ನರಸಿಂಗಾನಂದ ಗಿರಿ ಅವರು ನಿಂದನಾತ್ಮಕ ಭಾಷೆ ಬಳಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.</p><p>ವೇವ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಾಗಿದ್ದು, ಈ ಕುರಿತಂತೆ ತನಿಖೆ ನಡೆದಿದೆ ಎಂದು ಡಿಸಿಪಿ (ಗ್ರಾಮೀಣ) ಸುರೇಂದ್ರನಾಥ್ ತಿವಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>