ನವದೆಹಲಿ: ಇಂದು ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಭಾರತದ ಸ್ವಾತಂತ್ರ್ಯಕ್ಕೊಸ್ಕರ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರ ಸ್ಮರಣೆಗಾಗಿ ದೇಶದಾದ್ಯಂತ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.
ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಹಿಂದುಗಳು ಮತ್ತು ಹಿಂದುತ್ವವಾದಿಗಳು’ ಎಂಬ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದ್ದಾರೆ.
‘ಒಬ್ಬ ಹಿಂದುತ್ವವಾದಿ ಗಾಂಧೀಜಿಗೆ ಗುಂಡು ಹಾರಿಸಿ ಕೊಂದನು. ಎಲ್ಲಾ ಹಿಂದುತ್ವವಾದಿಗಳು ಗಾಂಧೀಜಿ ಇನ್ನಿಲ್ಲ ಎಂಬುದಾಗಿ ಭಾವಿಸುತ್ತಾರೆ. ಸತ್ಯ ಇರುವಲ್ಲಿ ಬಾಪು ಇಂದಿಗೂ ಜೀವಂತವಾಗಿದ್ದಾರೆ’ ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರು ಭಾನುವಾರ ಬೆಳಿಗ್ಗೆ ಮಹಾತ್ಮ ಗಾಂಧೀಜಿಯವರ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ್ದಾರೆ.