<p><strong>ಖಗಾಡಿಯಾ:</strong> ಬಿಹಾರದ ಖಗಾಡಿಯಾ ಜಿಲ್ಲೆಯಲ್ಲಿ ಸೋಮವಾರ ವೇಗವಾಗಿ ಬಂದ ಟ್ರಕ್ಕೊಂದು ಆಟೊಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ತಿಂಗಳ ನವಜಾತ ಶಿಶು ಸೇರಿದಂತೆ ಕನಿಷ್ಠ ಏಳು ಜನರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ. </p>.<p>ಜಿಲ್ಲೆಯ ಮಾನ್ಸಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ –31ರಲ್ಲಿ ಅಪಘಾತ ಸಂಭವಿಸಿದೆ.</p>.<p>ಎರಡು ತಿಂಗಳ ಶಿಶು, ಒಬ್ಬ ಮಹಿಳೆ, ಒಬ್ಬ ಬಾಲಕ ಹಾಗೂ ನಾಲ್ವರು ಪುರುಷರು ಸೇರಿದಂತೆ ಮೃತಪಟ್ಟ ಎಲ್ಲರೂ ಆಟೋರಿಕ್ಷಾದಲ್ಲಿದ್ದರು.</p>.<p>ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ಕೆರೆದೊಯ್ಯಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಸದರ್) ಮುಕುಲ್ ಕುಮಾರ್ ರಂಬನ್ ಹೇಳಿದ್ದಾರೆ.</p>.<p><strong>ವ್ಯಾನ್–ಟ್ರಕ್ ಡಿಕ್ಕಿ: ಹತ್ತು ಸಾವು</strong></p>.<p>ಲಖೀಂಪುರ ಖೇರಿ (ಉತ್ತರ ಪ್ರದೇಶ): ಸಿಸೈಯಾ–ಲಖೀಂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ವ್ಯಾನ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹತ್ತು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಲಖೀಂಪುರದಿಂದ ಸಿಸೈಯಾಗೆ ಪ್ರಯಾಣಿಸುತ್ತಿದ್ದ ವ್ಯಾನ್ ಉಂಚ್ಗಾಂವ್ ಮತ್ತು ಭರೆಹ್ತಾ ಗ್ರಾಮಗಳ ನಡುವೆ ತಲುಪಿದ್ದಾಗ ಅಪಘಾತ ಸಂಭವಿಸಿದೆ.</p>.<p>ವ್ಯಾನ್ನ ಚಾಲಕ ಸೇರಿದಂತೆ ಎಲ್ಲಾ 9 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಧೌರಹರಾ ವೃತ್ತ ಅಧಿಕಾರಿ ಶಂಶೇರ್ ಬಹದ್ದೂರ್ ಸಿಂಗ್ ಹೇಳಿದ್ದಾರೆ.</p>.<p>ಮುಖ್ಯಮಂತ್ರಿ ಆದಿತ್ಯನಾಥ್ ಅವರು ಘಟನೆ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.</p>.<p> <strong>ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ ಟೆಂಪೊ ಡಿಕ್ಕಿ: 13 ಸಾವು</strong></p><p>ಪಾಲ್ಘರ್ : ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ–ಅಹಮದಾಬಾದ್ ಹೆದ್ದಾರಿಯಲ್ಲಿ ಸೋಮವಾರ ಟೆಂಪೋವೊಂದು ವೇಗವಾಗಿ ಬರುತ್ತಿದ್ದ ಕಂಟೇನರ್ ಟ್ರಕ್ಗೆ ಡಿಕ್ಕಿ ಹೊಡೆದು 13 ಜನರು ಮೃತಪಟ್ಟು, 20 ಜನರು ಗಾಯಗೊಂಡಿದ್ದಾರೆ.</p><p>ದಹನು ತಾಲೂಕಿನ ಧನಿವಾರಿ ಗ್ರಾಮದ ಬಳಿ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಟೆಂಪೊ ಮದುವೆ ನಿಶ್ಚಿತಾರ್ಥ ಸಮಾರಂಭಕ್ಕೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಮೃತರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಗಾಡಿಯಾ:</strong> ಬಿಹಾರದ ಖಗಾಡಿಯಾ ಜಿಲ್ಲೆಯಲ್ಲಿ ಸೋಮವಾರ ವೇಗವಾಗಿ ಬಂದ ಟ್ರಕ್ಕೊಂದು ಆಟೊಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ತಿಂಗಳ ನವಜಾತ ಶಿಶು ಸೇರಿದಂತೆ ಕನಿಷ್ಠ ಏಳು ಜನರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ. </p>.<p>ಜಿಲ್ಲೆಯ ಮಾನ್ಸಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ –31ರಲ್ಲಿ ಅಪಘಾತ ಸಂಭವಿಸಿದೆ.</p>.<p>ಎರಡು ತಿಂಗಳ ಶಿಶು, ಒಬ್ಬ ಮಹಿಳೆ, ಒಬ್ಬ ಬಾಲಕ ಹಾಗೂ ನಾಲ್ವರು ಪುರುಷರು ಸೇರಿದಂತೆ ಮೃತಪಟ್ಟ ಎಲ್ಲರೂ ಆಟೋರಿಕ್ಷಾದಲ್ಲಿದ್ದರು.</p>.<p>ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ಕೆರೆದೊಯ್ಯಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಸದರ್) ಮುಕುಲ್ ಕುಮಾರ್ ರಂಬನ್ ಹೇಳಿದ್ದಾರೆ.</p>.<p><strong>ವ್ಯಾನ್–ಟ್ರಕ್ ಡಿಕ್ಕಿ: ಹತ್ತು ಸಾವು</strong></p>.<p>ಲಖೀಂಪುರ ಖೇರಿ (ಉತ್ತರ ಪ್ರದೇಶ): ಸಿಸೈಯಾ–ಲಖೀಂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ವ್ಯಾನ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹತ್ತು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಲಖೀಂಪುರದಿಂದ ಸಿಸೈಯಾಗೆ ಪ್ರಯಾಣಿಸುತ್ತಿದ್ದ ವ್ಯಾನ್ ಉಂಚ್ಗಾಂವ್ ಮತ್ತು ಭರೆಹ್ತಾ ಗ್ರಾಮಗಳ ನಡುವೆ ತಲುಪಿದ್ದಾಗ ಅಪಘಾತ ಸಂಭವಿಸಿದೆ.</p>.<p>ವ್ಯಾನ್ನ ಚಾಲಕ ಸೇರಿದಂತೆ ಎಲ್ಲಾ 9 ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಧೌರಹರಾ ವೃತ್ತ ಅಧಿಕಾರಿ ಶಂಶೇರ್ ಬಹದ್ದೂರ್ ಸಿಂಗ್ ಹೇಳಿದ್ದಾರೆ.</p>.<p>ಮುಖ್ಯಮಂತ್ರಿ ಆದಿತ್ಯನಾಥ್ ಅವರು ಘಟನೆ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.</p>.<p> <strong>ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ ಟೆಂಪೊ ಡಿಕ್ಕಿ: 13 ಸಾವು</strong></p><p>ಪಾಲ್ಘರ್ : ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ–ಅಹಮದಾಬಾದ್ ಹೆದ್ದಾರಿಯಲ್ಲಿ ಸೋಮವಾರ ಟೆಂಪೋವೊಂದು ವೇಗವಾಗಿ ಬರುತ್ತಿದ್ದ ಕಂಟೇನರ್ ಟ್ರಕ್ಗೆ ಡಿಕ್ಕಿ ಹೊಡೆದು 13 ಜನರು ಮೃತಪಟ್ಟು, 20 ಜನರು ಗಾಯಗೊಂಡಿದ್ದಾರೆ.</p><p>ದಹನು ತಾಲೂಕಿನ ಧನಿವಾರಿ ಗ್ರಾಮದ ಬಳಿ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಟೆಂಪೊ ಮದುವೆ ನಿಶ್ಚಿತಾರ್ಥ ಸಮಾರಂಭಕ್ಕೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಮೃತರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>