<p><strong>ಜೂನ್ 4, 2025:</strong> ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದರು.</p>.<p><strong>ಮೇ 3, 2025:</strong> ಉತ್ತರ ಗೋವಾದ ಶಿರ್ಗೊ ಗ್ರಾಮದ ದೇವಸ್ಥಾನದ ಉತ್ಸವ ಸಮಾರಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಜನರು ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು</p>.<p><strong>ಫೆಬ್ರುವರಿ 15, 2025:</strong> ಪ್ರಯಾಗರಾಜ್ ಕುಂಭಮೇಳಕ್ಕೆ ಹೋಗಲು ದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ, ಮಗು ಸೇರಿ 18 ಮಂದಿ ಮೃತಪಟ್ಟಿದ್ದರು</p>.<p><strong>ಜನವರಿ 29, 2025:</strong> ಮಹಾ ಕುಂಭಮೇಳದಲ್ಲಿ ‘ಅಮೃತ ಸ್ನಾನ’ಕ್ಕಾಗಿ ಅಪಾರ ಸಂಖ್ಯೆಯ ಭಕ್ತರು ಸೇರಿದ್ದ ವೇಳೆ ಉಂಟಾದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು </p>.<p><strong>ಜನವರಿ 8, 2025</strong>: ತಿರುಮಲ ಬೆಟ್ಟದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನದ ಟಿಕೆಟ್ಗಾಗಿ ಉಂಟಾದ ನೂಕುನುಗ್ಗಲು, ಕಾಲ್ತುಳಿತದಲ್ಲಿ 6 ಮಂಂದಿ ಮೃತಪಟ್ಟು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು</p>.<p><strong>ಡಿಸೆಂಬರ್ 4, 2024:</strong> ಅಲ್ಲು ಅರ್ಜುನ್ ನಟನೆಯ ‘ಪುಷ್ಪಾ–2’ ಚಿತ್ರದ ವೀಕ್ಷಣೆಗಾಗಿ ಹೈದರಾಬಾದ್ನ ಸಂಧ್ಯಾ ಥಿಯೇಟರ್ ಬಳಿ ಉಂಟಾದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಮೃತಪಟ್ಟು, ಬಾಲಕನೊಬ್ಬ ಗಾಯಗೊಂಡಿದ್ದ </p>.<p><strong>ಜುಲೈ 2, 2024:</strong> ಉತ್ತರ ಪ್ರದೇಶದ ಹಾಥರಸ್ನಲ್ಲಿ ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಆಯೋಜಿಸಿದ್ದ ಸತ್ಸಂಗದಲ್ಲಿ ಭಕ್ತರ ದಟ್ಟಣೆಯಿಂದ ಉಂಟಾದ ಕಾಲ್ತುಳಿತದಲ್ಲಿ 100ರಿಂದ 120 ಮಂದಿ ಮೃತಪಟ್ಟಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೂನ್ 4, 2025:</strong> ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದರು.</p>.<p><strong>ಮೇ 3, 2025:</strong> ಉತ್ತರ ಗೋವಾದ ಶಿರ್ಗೊ ಗ್ರಾಮದ ದೇವಸ್ಥಾನದ ಉತ್ಸವ ಸಮಾರಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಜನರು ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು</p>.<p><strong>ಫೆಬ್ರುವರಿ 15, 2025:</strong> ಪ್ರಯಾಗರಾಜ್ ಕುಂಭಮೇಳಕ್ಕೆ ಹೋಗಲು ದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ, ಮಗು ಸೇರಿ 18 ಮಂದಿ ಮೃತಪಟ್ಟಿದ್ದರು</p>.<p><strong>ಜನವರಿ 29, 2025:</strong> ಮಹಾ ಕುಂಭಮೇಳದಲ್ಲಿ ‘ಅಮೃತ ಸ್ನಾನ’ಕ್ಕಾಗಿ ಅಪಾರ ಸಂಖ್ಯೆಯ ಭಕ್ತರು ಸೇರಿದ್ದ ವೇಳೆ ಉಂಟಾದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು </p>.<p><strong>ಜನವರಿ 8, 2025</strong>: ತಿರುಮಲ ಬೆಟ್ಟದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನದ ಟಿಕೆಟ್ಗಾಗಿ ಉಂಟಾದ ನೂಕುನುಗ್ಗಲು, ಕಾಲ್ತುಳಿತದಲ್ಲಿ 6 ಮಂಂದಿ ಮೃತಪಟ್ಟು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು</p>.<p><strong>ಡಿಸೆಂಬರ್ 4, 2024:</strong> ಅಲ್ಲು ಅರ್ಜುನ್ ನಟನೆಯ ‘ಪುಷ್ಪಾ–2’ ಚಿತ್ರದ ವೀಕ್ಷಣೆಗಾಗಿ ಹೈದರಾಬಾದ್ನ ಸಂಧ್ಯಾ ಥಿಯೇಟರ್ ಬಳಿ ಉಂಟಾದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಮೃತಪಟ್ಟು, ಬಾಲಕನೊಬ್ಬ ಗಾಯಗೊಂಡಿದ್ದ </p>.<p><strong>ಜುಲೈ 2, 2024:</strong> ಉತ್ತರ ಪ್ರದೇಶದ ಹಾಥರಸ್ನಲ್ಲಿ ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಆಯೋಜಿಸಿದ್ದ ಸತ್ಸಂಗದಲ್ಲಿ ಭಕ್ತರ ದಟ್ಟಣೆಯಿಂದ ಉಂಟಾದ ಕಾಲ್ತುಳಿತದಲ್ಲಿ 100ರಿಂದ 120 ಮಂದಿ ಮೃತಪಟ್ಟಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>