<p><strong>ನವದೆಹಲಿ</strong>: 'ನಿಮಗೆ ಅನುಕೂಲವಾಗುವ ಭಾಷೆಯಲ್ಲೇ ಮಾತನಾಡಿ. ಆದರೆ, ನಿಮ್ಮ ಅಭಿಪ್ರಾಯಗಳನ್ನು ಬಲವಾಗಿ ಮಂಡಿಸಿ'</p><p>– ಇದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಸಂಸದರಿಗೆ ನೀಡಿದ ಸಂದೇಶ.</p><p>ಲೋಕಸಭೆಯಲ್ಲಿ ನಡೆದ ಕಾಂಗ್ರೆಸ್ ಸಂಸದರ ಸಭೆಯಲ್ಲಿ ಮಾತನಾಡಿರುವ ರಾಹುಲ್, ಬಜೆಟ್ ಅಧಿವೇಶನದ ಮೊದಲ ಹಂತವು ಅಲ್ಪಾವಧಿಯಲ್ಲಿ ಮುಗಿದಿದೆ. ಎರಡನೇ ಹಂತವು ಮಾರ್ಚ್ 10ರಿಂದ ಆರಂಭವಾಗಲಿದ್ದು, ಈ ಅವಧಿಯಲ್ಲಿ ಸಂಸದರು ಸದನದಲ್ಲಿ ಹಾಜರಿರುವುದರ ಮೇಲೆ ನಿಗಾ ಇಡಲಾಗುವುದು ಎಂದು ಎಚ್ಚರಿಸಿದ್ದಾರೆ ಎನ್ನಲಾಗಿದೆ.</p><p>ಸಭೆಯಲ್ಲಿ ಹಿರಿಯ ನಾಯಕರಾದ ಕೆ.ಸಿ.ವೇಣುಗೋಪಾಲ್, ಮಾಣಿಕ್ಕಂ ಟ್ಯಾಗೋರ್, ಗೌರವ್ ಗೊಗೋಯ್ ಹಾಗೂ ಕೋಡಿಕ್ಕುನ್ನಿಲ್ ಸುರೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.</p><p>ಬಜೆಟ್ ಅಧಿವೇಶನದ ಎರಡನೇ ಹಂತದ ವೇಳೆ ಹೆಚ್ಚಿನ ಸಂಸದರಿಗೆ ಮಾತನಾಡಲು ಅವಕಾಶ ಸಿಗಲಿದೆ ಎಂದು ಹೇಳಿರುವ ರಾಹುಲ್, ರಾಷ್ಟ್ರಪತಿ ಅವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆ ಹಾಗೂ ಬಜೆಟ್ ಕುರಿತ ಚರ್ಚೆಯಲ್ಲಿ 27 ಸಂಸದರು ಭಾಗವಹಿಸಿದ್ದರು ಎಂದಿದ್ದಾರೆ.</p><p>ಬಿಮಲ್ ಅಕೋಯಿಜಮ್, ವರುಣ್ ಚೌಧರಿ, ಉಜ್ವಲ್ ರಮಣ್ ಸಿಂಗ್ ಮತ್ತು ಮನೀಶ್ ತಿವಾರಿ ಅವರು ಅಧಿವೇಶನದ ಮೊದಲ ಅವಧಿಯಲ್ಲಿ ಮಾತನಾಡಿದ್ದನ್ನು ವಿಶೇಷವಾಗಿ ಉಲ್ಲೇಖಿಸಿ, ಸದನದಲ್ಲಿ ಧ್ವನಿ ಎತ್ತಲು ಎಲ್ಲ ಸಂಸದರು ಸಿದ್ಧರಿರಬೇಕು ಎಂದು ಸೂಚಿಸಿದ್ದಾರೆ.</p>.ರಾಷ್ಟ್ರಪತಿ ಭಾಷಣದೊಂದಿಗೆ ಜ. 31ರಿಂದ ಬಜೆಟ್ ಅಧಿವೇಶನ ಆರಂಭ; ಏ. 4ರವರೆಗೆ ಚರ್ಚೆ.Budget Session 2025: ಲೋಕಸಭೆ ಕಲಾಪ ಮಾ.10ರವರೆಗೆ ಮುಂದೂಡಿಕೆ.<p>ಸಂಸದರು ಇಂಗ್ಲಿಷ್ ಅಥವಾ ಹಿಂದಿಯಲ್ಲೇ ಮಾತನಾಡಬೇಕು ಎಂಬುದೇನೂ ಇಲ್ಲ. ತಮಗೆ ಅನುಕೂಲಕರವಾದ ಯಾವುದೇ ಭಾಷೆಯಲ್ಲಿ ಮಾತನಾಡಬಹುದು. ಆದರೆ, ವಿಚಾರಗಳನ್ನು ಸ್ಪಷ್ಟವಾಗಿ ಮಂಡಿಸಬೇಕು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.</p><p>ಚಳಿಗಾಲದ ಅಧಿವೇಶನದ ಎರಡನೇ ದಿನ ಸಂವಿಧಾನದ ಕುರಿತ ಚರ್ಚೆಗೆ ಗೈರಾದ ಎಲ್ಲ ಸಂಸದರಿಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಪಕ್ಷದ ಸಂಸದೀಯ ವ್ಯವಸ್ಥಾಪಕರಿಗೆ ರಾಹುಲ್ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಬಜೆಟ್ ಅಧಿವೇಶನದ ಎರಡನೇ ಹಂತವು ಮಾರ್ಚ್ 10ರಿಂದ ಪ್ರಾರಂಭವಾಗಿ ಏಪ್ರಿಲ್ 4ರ ವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 'ನಿಮಗೆ ಅನುಕೂಲವಾಗುವ ಭಾಷೆಯಲ್ಲೇ ಮಾತನಾಡಿ. ಆದರೆ, ನಿಮ್ಮ ಅಭಿಪ್ರಾಯಗಳನ್ನು ಬಲವಾಗಿ ಮಂಡಿಸಿ'</p><p>– ಇದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಸಂಸದರಿಗೆ ನೀಡಿದ ಸಂದೇಶ.</p><p>ಲೋಕಸಭೆಯಲ್ಲಿ ನಡೆದ ಕಾಂಗ್ರೆಸ್ ಸಂಸದರ ಸಭೆಯಲ್ಲಿ ಮಾತನಾಡಿರುವ ರಾಹುಲ್, ಬಜೆಟ್ ಅಧಿವೇಶನದ ಮೊದಲ ಹಂತವು ಅಲ್ಪಾವಧಿಯಲ್ಲಿ ಮುಗಿದಿದೆ. ಎರಡನೇ ಹಂತವು ಮಾರ್ಚ್ 10ರಿಂದ ಆರಂಭವಾಗಲಿದ್ದು, ಈ ಅವಧಿಯಲ್ಲಿ ಸಂಸದರು ಸದನದಲ್ಲಿ ಹಾಜರಿರುವುದರ ಮೇಲೆ ನಿಗಾ ಇಡಲಾಗುವುದು ಎಂದು ಎಚ್ಚರಿಸಿದ್ದಾರೆ ಎನ್ನಲಾಗಿದೆ.</p><p>ಸಭೆಯಲ್ಲಿ ಹಿರಿಯ ನಾಯಕರಾದ ಕೆ.ಸಿ.ವೇಣುಗೋಪಾಲ್, ಮಾಣಿಕ್ಕಂ ಟ್ಯಾಗೋರ್, ಗೌರವ್ ಗೊಗೋಯ್ ಹಾಗೂ ಕೋಡಿಕ್ಕುನ್ನಿಲ್ ಸುರೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.</p><p>ಬಜೆಟ್ ಅಧಿವೇಶನದ ಎರಡನೇ ಹಂತದ ವೇಳೆ ಹೆಚ್ಚಿನ ಸಂಸದರಿಗೆ ಮಾತನಾಡಲು ಅವಕಾಶ ಸಿಗಲಿದೆ ಎಂದು ಹೇಳಿರುವ ರಾಹುಲ್, ರಾಷ್ಟ್ರಪತಿ ಅವರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆ ಹಾಗೂ ಬಜೆಟ್ ಕುರಿತ ಚರ್ಚೆಯಲ್ಲಿ 27 ಸಂಸದರು ಭಾಗವಹಿಸಿದ್ದರು ಎಂದಿದ್ದಾರೆ.</p><p>ಬಿಮಲ್ ಅಕೋಯಿಜಮ್, ವರುಣ್ ಚೌಧರಿ, ಉಜ್ವಲ್ ರಮಣ್ ಸಿಂಗ್ ಮತ್ತು ಮನೀಶ್ ತಿವಾರಿ ಅವರು ಅಧಿವೇಶನದ ಮೊದಲ ಅವಧಿಯಲ್ಲಿ ಮಾತನಾಡಿದ್ದನ್ನು ವಿಶೇಷವಾಗಿ ಉಲ್ಲೇಖಿಸಿ, ಸದನದಲ್ಲಿ ಧ್ವನಿ ಎತ್ತಲು ಎಲ್ಲ ಸಂಸದರು ಸಿದ್ಧರಿರಬೇಕು ಎಂದು ಸೂಚಿಸಿದ್ದಾರೆ.</p>.ರಾಷ್ಟ್ರಪತಿ ಭಾಷಣದೊಂದಿಗೆ ಜ. 31ರಿಂದ ಬಜೆಟ್ ಅಧಿವೇಶನ ಆರಂಭ; ಏ. 4ರವರೆಗೆ ಚರ್ಚೆ.Budget Session 2025: ಲೋಕಸಭೆ ಕಲಾಪ ಮಾ.10ರವರೆಗೆ ಮುಂದೂಡಿಕೆ.<p>ಸಂಸದರು ಇಂಗ್ಲಿಷ್ ಅಥವಾ ಹಿಂದಿಯಲ್ಲೇ ಮಾತನಾಡಬೇಕು ಎಂಬುದೇನೂ ಇಲ್ಲ. ತಮಗೆ ಅನುಕೂಲಕರವಾದ ಯಾವುದೇ ಭಾಷೆಯಲ್ಲಿ ಮಾತನಾಡಬಹುದು. ಆದರೆ, ವಿಚಾರಗಳನ್ನು ಸ್ಪಷ್ಟವಾಗಿ ಮಂಡಿಸಬೇಕು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.</p><p>ಚಳಿಗಾಲದ ಅಧಿವೇಶನದ ಎರಡನೇ ದಿನ ಸಂವಿಧಾನದ ಕುರಿತ ಚರ್ಚೆಗೆ ಗೈರಾದ ಎಲ್ಲ ಸಂಸದರಿಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಪಕ್ಷದ ಸಂಸದೀಯ ವ್ಯವಸ್ಥಾಪಕರಿಗೆ ರಾಹುಲ್ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p>ಬಜೆಟ್ ಅಧಿವೇಶನದ ಎರಡನೇ ಹಂತವು ಮಾರ್ಚ್ 10ರಿಂದ ಪ್ರಾರಂಭವಾಗಿ ಏಪ್ರಿಲ್ 4ರ ವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>